ಒಂಬತ್ತೇ ಶ್ಮಶಾನ‌; ನಿರ್ವಹಣೆಯೇ ಅನುಮಾನ : ಸಾಲಿಗ್ರಾಮ ಪಟ್ಟಣ ಪಂಚಾಯತ್‌


Team Udayavani, Apr 22, 2021, 3:10 AM IST

ಒಂಬತ್ತೇ ಶ್ಮಶಾನ‌; ನಿರ್ವಹಣೆಯೇ ಅನುಮಾನ : ಸಾಲಿಗ್ರಾಮ ಪಟ್ಟಣ ಪಂಚಾಯತ್‌

ಒಂದು ಪಟ್ಟಣದ ಮೂಲ ಸೌಕರ್ಯಗಳ ಪಟ್ಟಿಗಳಲ್ಲಿ ಶ್ಮಶಾನವೂ ಒಂದು. ವ್ಯವಸ್ಥಿತ ಸೌಲಭ್ಯಗಳುಳ್ಳ ಶ್ಮಶಾನ ಇರಬೇಕು. ಹಾಗೆ ನೋಡುವುದಾದರೆ ಸಾಲಿಗ್ರಾಮ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಎಲ್ಲವೂ ಇದೆ. ಆದರೆ ನಿರ್ವಹಣೆಯೇ ದೊಡ್ಡ ಸಮಸ್ಯೆಯಾಗಿದೆ. ಹಾಗಾಗಿ ಸೌಲಭ್ಯಗಳಿದ್ದರೂ ಬಳಸಲು ಸಿಗುತ್ತಿಲ್ಲ ಎಂಬ ಕೊರಗು ಸ್ಥಳೀಯರದ್ದು. ಪಟ್ಟಣ ಪಂಚಾಯತ್‌ ಆಡಳಿತ ವ್ಯವಸ್ಥೆ ಇದರತ್ತ ಇನ್ನಾದರೂ ಗಮನಹರಿಸಬೇಕು.

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್‌ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಶ್ಮಶಾನಗಳಿದ್ದರೂ, ನಿರ್ವಹಣೆ ಇಲ್ಲದೇ ಸೊರಗುತ್ತಿವೆ.

ಒಟ್ಟು ಒಂಬತ್ತು ಸರಕಾರಿ ಶ್ಮಶಾನಗಳಿದ್ದು, ಇನ್ನೆರಡು ಶ್ಮಶಾನಗಳಿಗೆ ಬೇಡಿಕೆ ಇದೆ. ಈಗಿರುವ ಬಹುತೇಕ ಶ್ಮಶಾನಗಳಲ್ಲಿ ಹೆಚ್ಚಿನ ಕಡೆ ಉತ್ತಮ ಕಟ್ಟಡ, ಇಂಟರ್‌ಲಾಕ್‌, ಆವರಣಗೋಡೆ, ಮಿನಿ ಪಾರ್ಕ್‌, ಶೌಚಾಲಯ, ಸಿಲಿಕಾನ್‌ ಛೇಂಬರ್‌ ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆ ಇದೆ. ಆದರೆ ಇರುವುದನ್ನೇ ಸರಿಯಾಗ ನಿರ್ವಹಣೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಸಮಸ್ಯೆ ಎದುರಿಸತೊಡಗಿದ್ದಾರೆ.

ಶ್ಮಶಾನಗಳ ನಿರ್ವಹಣೆಗೆ ಪಟ್ಟಣ ಪಂಚಾಯತ್‌ ನಲ್ಲಿ ಹಣದ ಕೊರತೆ ಇಲ್ಲ. ಪ್ರತಿ ವರ್ಷ ಹಣ ಕಾದಿರಿಸುವ ಪದ್ಧತಿಯಿದೆ. ಈ ವರ್ಷವೂ 12. 50 ಲಕ್ಷ ರೂ. ಗಳನ್ನು ಇದಕ್ಕಾಗಿ ಮೀಸಲಿಡಲಾಗಿದೆ. ಆದರೆ ಸಮರ್ಪಕವಾಗಿ ನಿರ್ವಹಣೆ ಏಕೆ ಮಾಡುವುದಿಲ್ಲ ಎಂಬುದಕ್ಕೆ ಸ್ಪಷ್ಟವಾದ ಕಾರಣಗಳೇ ತೋಚದಾಗಿದೆ.

ಚಿತ್ರಪಾಡಿ ಗ್ರಾಮದ ದೇವಾಡಿಗರಬೆಟ್ಟು, ಮಡಿವಾಳಸಾಲು, ಕಾರ್ತಟ್ಟು ಹಾಗೂ ಪಾರಂಪಳ್ಳಿ ಗ್ರಾಮದ ಗೆಂಡೆಕೆರೆ, ತೋಡ್ಕಟ್ಟು, ಕೆಮ್ಮಣ್ಣುಕೆರೆ, ಪಡುಕರೆ, ಕಾರ್ಕಡ ಗ್ರಾಮದ ಕಡಿದ ಹೆದ್ದಾರಿ, ಗುಂಡ್ಮಿ ಗ್ರಾಮದ ಹಳೆಕೋಟೆ ಶ್ಮ¾ಶಾನಗಳಿವೆ. ಕಾಪು ಪುರಸಭೆ ವ್ಯಾಪ್ತಿಯಲ್ಲಿ ಇರುವುದೂ 5 ಶ್ಮಶಾನಗಳು. ಅದೇ ಎರಡನೇ ದೊಡ್ಡ ಸಂಖ್ಯೆ.

ನಿರ್ವಹಣೆ ಕೇಳುವವರಿಲ್ಲ
ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಶ್ಮಶಾನ ನಿರ್ವಹಣೆಗೆಂದು ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ಶವ ದಹನಕ್ಕೆ ಸಹಕರಿಸುವವರ ಸಮಿತಿಯನ್ನು ರಚಿಸಲಾಗುತ್ತದೆ. ಶ್ಮಶಾನದ ಬೀಗವನ್ನು ಸಮಿತಿಗೆ ಹಸ್ತಾಂತರಿಸಿ ನಿರ್ವಹಣೆಯ ಹೊಣೆಯನ್ನು ವಹಿಸಲಾಗುತ್ತದೆ. ಈ ಕುರಿತು ಸರಕಾರದ ಸುತ್ತೋಲೆಯೂ ಇದೆ. ಆದರೆ ಪಟ್ಟಣ ಪಂಚಾಯತ್‌ ನ ಒಂದೂ ಶ್ಮಶಾನದಲ್ಲೂ ಈ ವ್ಯವಸ್ಥೆ ಇಲ್ಲ. ಕೆಲವು ಕಡೆ ವಾರ್ಡ್‌ ಸದಸ್ಯರು ಅಥವಾ ಸಾಕಷ್ಟು ಹಿಂದಿನಿಂದ ಸೇವೆಯಲ್ಲಿ ತೊಡಗಿಸಿಕೊಂಡವರು, ಸಂಘ-ಸಂಸ್ಥೆಗಳು ಸ್ವಲ್ಪ ಮಟ್ಟಿನ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ. ಉಳಿದಂತೆ ಸಮರ್ಪಕ ವ್ಯವಸ್ಥೆ ಇಲ್ಲ.

ಶೌಚಾಲಯಕ್ಕೆ ಖಾಯಂ ಬೀಗ
ಪ್ರತಿ ಶ್ಮಶಾನದಲ್ಲಿ ಕಡ್ಡಾಯವಾಗಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇರಬೇಕು ಎಂದು ಈ ಹಿಂದೆ ಸರಕಾರ ಆದೇಶಿಸಿತ್ತು. ಹೀಗಾಗಿ ಆ ಸಂದರ್ಭ ಪ.ಪಂ. ಎಲ್ಲಾ ಶ್ಮಶಾನಗಳಿಗೆ ಶೌಚಾಲಯ, ಬಾವಿ ಅಥವಾ ನಳ್ಳಿ ಮೂಲಕ ವಾಟರ್‌ ಟ್ಯಾಂಕ್‌ನೊಂದಿಗೆ ನೀರಿನ ವ್ಯವಸ್ಥೆ ಮಾಡಿದೆ. ಆದರೆ ಶೌಚಾಲಯಕ್ಕೆ ಬೀಗ ಜಡಿಯಲಾಗಿದ್ದು, ನೀರೂ ಬಳಸಿಕೊಳ್ಳಲಾಗುತ್ತಿಲ್ಲ. ಕೆಲವು ಕಡೆ ಕುಡಿಯುವ ನೀರಿನ ನಳ್ಳಿ ಹಾಗೂ ಟ್ಯಾಂಕ್‌ಗಳು ಹಾನಿಗೊಳಗಾಗಿವೆ. ಒಟ್ಟಾರೆ ಈ ಅವ್ಯವಸ್ಥೆಯನ್ನು ಕೇಳುವವರಿಲ್ಲ ಎನ್ನುವಂತಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.