ಉದಯವಾಣಿ ವರದಿ ಫಲಶ್ರುತಿ: ಅಮಾಸೆಬೈಲು ಆಯುಷ್ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಕೊಡುಗೆ

ಒಬ್ಬರಿಗೆ ತರಬೇತಿ ನೀಡಿ, ಅದರ ಬಗ್ಗೆ ತಿಳಿಸಿಕೊಟ್ಟು, ಜನರಿಗೆ ನೆರವಾಗುವಂತೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.

Team Udayavani, Apr 22, 2021, 12:30 PM IST

ಉದಯವಾಣಿ ವರದಿ ಫಲಶ್ರುತಿ: ಅಮಾಸೆಬೈಲು ಆಯುಷ್ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಕೊಡುಗೆ

ಕುಂದಾಪುರ: ಸಾರ್ವಜನಿಕ ಆಸ್ಪತ್ರೆಯಿಲ್ಲದೆ ತುರ್ತು ಚಿಕಿತ್ಸೆಗಾಗಿ ಹತ್ತಾರು ಕಿ.ಮೀ. ದೂರ ಸಂಚರಿಸ ಬೇಕಾದ ಅನಿವಾರ್ಯತೆಯಿರುವ ಅಮಾಸೆಬೈಲಿನ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಇಲ್ಲಿನ ಆಯುಷ್ ಆರೋಗ್ಯ ಕ್ಷೇಮ ಕೇಂದ್ರ ಹಾಗೂ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಕ್ಕೆ ಕೆಎಂ ಸಿ ಮಂಗಳೂರಿನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ|ಪದ್ಮನಾಭ್ ಕಾಮತ್ ಅವರು ಗುರುವಾರ(ಏಪ್ರಿಲ್ 22) ತಮ್ಮ ಟ್ರಸ್ಟ್ ಮೂಲಕ ಇಸಿಜಿ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ.

ಇಂದು ಸಿಎಡಿ ಫೌಂಡೇಶನ್ ಟ್ರಸ್ಟ್ ಮೂಲಕ ನೀಡಲಾದ ಇಸಿಜಿ ಯಂತ್ರವನ್ನು ಅಮಾಸೆಬೈಲಿನ ಕೀರ್ತಿ ಕ್ಲಿನಿಕ್ ನ ಡಾ|ಗುರುದತ್ ಕೊಡ್ಗಿ ಹಾಗೂ ಆಯುಷ್ ಆರೋಗ್ಯ ಕ್ಷೇಮ ಕೇಂದ್ರದ ಡಾ|ಹೇಮಲತಾ ಅವರು ಪಡೆದುಕೊಂಡಿದ್ದು, ಶೀಘ್ರವಾಗಿ ಸ್ಪಂದಿಸಿರುವ ಡಾ|ಪದ್ಮನಾಭ್ ಕಾಮತ್ ಮತ್ತು ಅವರ ಟ್ರಸ್ಟ್ ಗೆ ಅಭಿನಂದನೆ ತಿಳಿಸಿದ್ದಾರೆ.

ಅಮಾಸೆಬೈಲಿನಲ್ಲಿ ಆಸ್ಪತ್ರೆಯಿಲ್ಲದೆ ಜನ ಅನುಭವಿಸುತ್ತಿರುವ ಸಂಕಷ್ಟದ ಕುರಿತಂತೆ ಉದಯವಾಣಿಯಲ್ಲಿ ಎ. 20 ರಂದು ಪ್ರಕಟಗೊಂಡ ವಿಶೇಷ ವರದಿಗೆ ಸ್ಪಂದಿಸಿದ್ದ ಕೆಎಂಸಿ ಮಂಗಳೂರಿನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ| ಪದ್ಮನಾಭ ಕಾಮತ್‌ “ಕಾರ್ಡಿಯೋಲಜಿ ಆಟ್‌ ಡೋರ್‌ ಸ್ಟೆಪ್‌ ಫೌಂಡೇಶನ್‌’ ಮೂಲಕವಾಗಿ ಅಲ್ಲಿಗೆ ಇಸಿಜಿ ಯಂತ್ರ ನೀಡುವುದಾಗಿ ತಿಳಿಸಿದ್ದರು.

ಈ ಕುರಿತಂತೆ “ಉದಯವಾಣಿ’ ಜತೆ ಮಾತನಾಡಿದ್ದ ಕುಂದಾಪುರ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಅವರು, “ಉದಯವಾಣಿ’ ಯಲ್ಲಿ ಪ್ರಕಟಗೊಂಡ ವರದಿಯನ್ನು ನೋಡಿ, ಡಾ| ಪದ್ಮನಾಭ ಕಾಮತ್‌ ಅವರು ಮಂಗಳವಾರ ಬೆಳಗ್ಗೆ ಕರೆ ಮಾಡಿ, ಅಲ್ಲಿಗೆ ಇಸಿಜಿ ಯಂತ್ರವನ್ನು ಕೊಡುವುದಾಗಿ ತಿಳಿಸಿದ್ದರು. ಇದರಿಂದ ಹೃದಯಾಘಾತಕ್ಕೆ ಒಳಗಾದವರಿಗೆ ಬಹಳಷ್ಟು ಸಹಾಯಕವಾಗಲಿದೆ. ಅದನ್ನು ಸದ್ಯ ಅಮಾಸೆಬೈಲಿನಲ್ಲಿರುವ ಆಯುಷ್‌ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿಟ್ಟು, ಒಬ್ಬರಿಗೆ ತರಬೇತಿ ನೀಡಿ, ಅದರ ಬಗ್ಗೆ ತಿಳಿಸಿಕೊಟ್ಟು, ಜನರಿಗೆ ನೆರವಾಗುವಂತೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.

ಉದಯವಾಣಿ ವರದಿ: ಅಮಾಸೆಬೈಲಿನ ಕೆಳಸುಂಕ, ಕೆಲಾ, ಶ್ಯಾಮೆಹಕ್ಲು, ತೊಂಬಟ್ಟು, ನಡಂಬೂರು ಮತ್ತಿತರ ಭಾಗದ ಜನರು ತುರ್ತು ಚಿಕಿತ್ಸೆಗಾಗಿ 20-25 ಕಿ.ಮೀ. ದೂರ ಸಂಚರಿಸಬೇಕಾಗಿದ್ದು, ಈ ಬಗ್ಗೆ “ಉದಯವಾಣಿ’ ಎ. 20 ರಂದು “ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು’ ಎನ್ನುವುದಾಗಿ ಮುಖ್ಯ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿ ಗಮನಸೆಳೆದಿತ್ತು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.