ಮೇಯಲ್ಲಿ ಹೆಚ್ಚು ಕೇಸ್‌!


Team Udayavani, Apr 23, 2021, 7:00 AM IST

ಮೇಯಲ್ಲಿ ಹೆಚ್ಚು ಕೇಸ್‌!

ಹೊಸದಿಲ್ಲಿ: ಕೋವಿಡ್ 2ನೇ ಅಲೆ ದೇಶದ ವ್ಯವಸ್ಥೆ ಯನ್ನೇ ತಲೆಕಳಗೆ ಮಾಡಿದೆ. ಅದಕ್ಕೆ ಪೂರಕ ವಾಗಿ ದಿನವಹಿ ಸೋಂಕು ಸಂಖ್ಯೆಯ ಏರಿಕೆಯೂ ಬಿರು ಸಿನಿಂದಲೇ ಸಾಗಿದೆ. ವಿಜ್ಞಾನಿಗಳು ಅಂದಾಜು ಮಾಡಿರುವ ಪ್ರಕಾರ ಮೇ 11-15ರ ವರೆಗೆ ಸಕ್ರಿಯ ಸೋಂಕುಗಳ ಸಂಖ್ಯೆ 33ರಿಂದ 35 ಲಕ್ಷಕ್ಕೇರುವ ಸಾಧ್ಯತೆಗಳು ಇವೆ. ಅಲ್ಲಿಗೆ ಮುಂದಿನ ಮೂರು ವಾರ ಗಳವರೆಗೆ ಸಕ್ರಿಯ ಪ್ರಕರಣಗಳು ಗಣನೀಯ ವಾಗಿ ಹೆಚ್ಚುವ ಸಾಧ್ಯತೆಗಳು ದಟ್ಟವಾಗಿದೆ.

ಕಳೆದ ವರ್ಷ ಸೆ. 17ರಂದು ಒಂದೇ ದಿನ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷದಷ್ಟಿತ್ತು. ಅದಕ್ಕಿಂತ ಮೂರು ಪಟ್ಟು ಹೆಚ್ಚು ಸಕ್ರಿಯ ಪ್ರಕರಣಗಳು ಮುಂದಿ ನ ತಿಂಗಳ ಮಧ್ಯಭಾಗದಲ್ಲಿಯೇ ಕಂಡು ಬರಲಿವೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.

ದಿಲ್ಲಿ, ಹರಿಯಾಣ, ರಾಜಸ್ಥಾನ, ತೆಲಂಗಾಣ ರಾಜ್ಯಗಳಲ್ಲಿ ಏ.25-30ರ ಅವಧಿಯಲ್ಲಿ ಗರಿಷ್ಠ ಪ್ರಮಾ ಣದ ಏರಿಕೆ ಕಂಡುಬರಲಿದೆ. ಕರ್ನಾಟಕ ಮತ್ತು ಪಶ್ಚಿಮ ಬಂಗಾಲದಲ್ಲಿ ಮೇ 1-5ರ ಅವಧಿ ಯಲ್ಲಿ , ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಮೇ 6-10ರ ಅವಧಿಯಲ್ಲಿ ಸೋಂಕು ಸಂಖ್ಯೆ ಮತ್ತಷ್ಟು ಏರಿಕೆಯಾಗಲಿದೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ವೇತನಕ್ಕೆ ಕತ್ತರಿ: ಕೋವಿಡ್ ಯಿಂದ ಏರ್ಪಟ್ಟಿರುವ ಆರ್ಥಿಕ ಅಸ್ಥಿರತೆಯನ್ನು ನಿವಾರಿಸಲು ಹಿಮಾಚಲ ಪ್ರದೇಶ ರಾಜ್ಯ ಸರಕಾರ, ಕ್ಲಾಸ್‌ 1 ಹಾಗೂ 2 ಶ್ರೇಣಿಯಲ್ಲಿರುವ ಅಧಿಕಾರಿಗಳ ಎರಡು ದಿನದ ವೇತನಕ್ಕೆ ಕತ್ತರಿ ಹಾಕಲು ನಿರ್ಧರಿಸಿದೆ. ಇನ್ನು, ಕ್ಲಾಸ್‌ 3 ಮತ್ತು 4ರಲ್ಲಿರುವ ಉದ್ಯೋಗಿಗಳ ಒಂದು ದಿನದ ವೇತನವನ್ನು ಕಡಿತಗೊಳಿಸಲು ತೀರ್ಮಾ ನಿಸಿದೆ. ಅಲ್ಲದೆ ಮುಖ್ಯಮಂತ್ರಿ ಜಿತನ್‌ರಾಮ್‌ ಹಾಗೂ ಅವರ ಸಂಪುಟ ಸಹೋದ್ಯೋಗಿಗಳ ಒಂದು ತಿಂಗಳ ವೇತನಕ್ಕೂ ಕತ್ತರಿ ಬೀಳಲಿದೆ ಎಂದು ಖುದ್ದು ಮುಖ್ಯಮಂತ್ರಿಗಳೇ ಪ್ರಕಟಿಸಿದ್ದಾರೆ.

300 ಪ್ರಯಾಣಿಕರು ಪರಾರಿ! :

ವಿವಿಧ ರಾಜ್ಯಗಳಿಂದ ಅಸ್ಸಾಂನ ಸಿಲ್ಚಾರ್‌ಗೆ ಆಗಮಿಸಿದ್ದ ಸುಮಾರು 300ಕ್ಕೂ ಹೆಚ್ಚು ಪ್ರಯಾಣಿಕರು, ಕಡ್ಡಾಯ ಕೋವಿಡ್ ಪರೀಕ್ಷೆಗೆ ಒಳಗಾಗದೇ ಪರಾರಿಯಾಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಯಮಗಳಂತೆ, ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರಿಗೆ ನಿಲ್ದಾಣದ ಸಮೀಪವೇ ಇರುವ ಟಿಕೋಲ್‌ ಮಾಡೆಲ್‌ ಆಸ್ಪತ್ರೆಯಲ್ಲಿ ರ್ಯಾಪಿಡ್‌ ಆ್ಯಂಟಿಜೆನ್‌ (ಆರ್‌ಎಟಿ) ಹಾಗೂ ಆರ್‌ಟಿ-ಪಿಸಿಆರ್‌ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬುಧವಾರ ಇಲ್ಲಿಗೆ ವಿವಿಧ ರಾಜ್ಯಗಳಿಂದ ಸುಮಾರು 690 ಪ್ರಯಾಣಿಕರು ಬಂದಿಳಿದಿದ್ದರು. ಅವರಲ್ಲಿ ಕೆಲವರು ಈಶಾನ್ಯ ರಾಜ್ಯಗಳಿಗೆ ಪ್ರಯಾಣ ಬೆಳಸಬೇಕಿದ್ದರಿಂದ ಅವರನ್ನು ಪರೀಕ್ಷೆಗೊಳಪಡಿಸದೇ ಕಳುಹಿಸಲಾಯಿತು. ಆದರೆ, ಅಸ್ಸಾಂ ರಾಜ್ಯವನ್ನು ಪ್ರವೇಶಿಸಬೇಕಿದ್ದ ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆಗೊಳಪಡುವಂತೆ ಸೂಚಿಸ ಲಾಗಿತ್ತು. ಆದರೆ ಅವರಲ್ಲಿ 189 ಪ್ರಯಾಣಿಕರು ಮಾತ್ರವೇ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಅವರಲ್ಲಿ 6 ಮಂದಿಗೆ ಸೋಂಕು ದೃಢಪಟ್ಟಿದೆ. ಆದರೆ, ಉಳಿದ ಪ್ರಯಾಣಿಕರು ಆಸ್ಪತ್ರೆಗೆ ಬಂದಿಲ್ಲ. ಮಾರ್ಗ ಮಧ್ಯೆಯೇ ಪರಾರಿಯಾಗಿದ್ದು, ಈ ಬಗ್ಗೆ ತನಿಖೆ ಆರಂಭಿಸಲಾಗಿದೆ.

24 ಗಂಟೆಗಳಲ್ಲಿ 3.14 ಲಕ್ಷ ಪ್ರಕರಣ! :

ಬುಧವಾರ-ಗುರುವಾರ ನಡುವಿನ 24 ಗಂಟೆಗಳಲ್ಲಿ 3,14,835 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ವಿಶ್ವದ ಯಾವುದೇ ರಾಷ್ಟ್ರದಲ್ಲಿ ದಿನಂಪ್ರತಿ ದಾಖಲಾಗುವ ಪ್ರಕರಣಗಳಿಗಿಂತ ಗರಿಷ್ಠದ್ದಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ದಾಖಲೆಯಲ್ಲಿದೆ. ಸಕ್ರಿಯ ಸೋಂಕಿತರ ಸಂಖ್ಯೆ 22,91,428ಕ್ಕೆ ಏರಿದೆ. ಮಂಗಳವಾರ-ಬುಧವಾರದಂದು ದೇಶದ ನಾನಾ ರಾಜ್ಯಗಳಲ್ಲಿ 2,104 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 1,84,657ಕ್ಕೆ ಮುಟ್ಟಿದೆ. ಚೇತರಿಕೆ ಪ್ರಮಾಣ ಶೇ.84.46ಕ್ಕೆ ಕುಸಿದಿದೆ. ಸತತ 43ನೇ ದಿನ ಈ ದಾಖಲೆಯ ಏರಿಕೆಯಾಗಿದೆ.

ಹಂತಹಂತವಾಗಿ ಏರಿಕೆ :

ಕಳೆದ ವರ್ಷ, ಆ. 7ರಂದು ಭಾರತದಲ್ಲಿ ಕೊರೊನಾ ಪ್ರಕರಣಗಳು 20 ಲಕ್ಷ ಗಡಿ ದಾಟಿದ್ದವು. ಆ. 23ರಂದು 30 ಲಕ್ಷ ಗಡಿ ದಾಟಿದರೆ, ಸೆ. 5ರಂದು 40 ಲಕ್ಷ ಹಾಗೂ ಸೆ. 28ರಂದು 60 ಲಕ್ಷ ಗಡಿ ದಾಟಿದ್ದವು. ಡಿ. 19ರಂದು 1 ಕೋಟಿ ಗೆರೆಯನ್ನು ದಾಟಿದ್ದವು. ಈ ವರ್ಷ ಎ. 19ರಂದು ಪ್ರಕರಣಗಳ ಸಂಖ್ಯೆ 1.50 ಕೋಟಿ ದಾಟಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.