ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡಿ: ಕುಮಾರಸ್ವಾಮಿ ಸಲಹೆ
Team Udayavani, Apr 23, 2021, 9:09 AM IST
ಬೆಂಗಳೂರು: ಕೋವಿಡ್ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!
ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯ ಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಎಚ್ ಡಿಕೆ ಹೇಳಿದ್ದಾರೆ.
ಇದನ್ನೂ ಓದಿ: ಲೆಕ್ಕಾಚಾರ ಉಲ್ಟಾಪಲ್ಟಾ: ಚೇತರಿಕೆಯ ಮೊದಲೇ ಸಿನಿ ಮಂದಿಯ ಕನಸು ನುಂಗಿದ ಕೊರೋನಾ
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು. ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು