ಕೋವಿಡ್ ದೃಢಪಟ್ಟ ಗರ್ಭಿಣಿಯರಿಗೆ ಘೋಷಾ ವರದಾನ


Team Udayavani, Apr 23, 2021, 1:32 PM IST

ghosha-come-to-help-for-the-pregnant-women

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ದೃಢಪಡುವ ಗರ್ಭಿಣಿಯರ ಚಿಕಿತ್ಸೆ ಮತ್ತು ಹೆರಿಗೆಗೆ ಶಿವಾಜಿನಗರದ ಸರ್ಕಾರಿ ಎಚ್‌ಎಸ್‌ಐಎಸ್‌ ಘೋಷಾ ಆಸ್ಪತ್ರೆ ಮೀಸಲಿಡಲಾಗಿದ್ದು, ಕೊರೊನಾ ಸೋಂಕು ದೃಢಪಟ್ಟ ಗರ್ಭಿಣಿಯರಿಗೆ ವರದಾನವಾಗಿದೆ. ನಗರದಲ್ಲಿ ಮಾ.1ರಿಂದ (2021) ಒಟ್ಟು 16 ಜನ ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಘೋಷಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡಲಾಗಿದೆ.

ಇವರಲ್ಲಿ ಲಘು ಕೊರೊನಾ ಸೋಂಕಿನ ಲಕ್ಷಣ ಇರುವ ಐದು ಜನ ಗರ್ಭಿಣಿಯರು ಮನೆಯಲ್ಲೇ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಉಳಿದವರಿಗೆ ಘೋಷಾ ಆಸ್ಪ ತ್ರೆಯಲ್ಲಿ ಆರೈಕೆ ನೀಡಲಾಗುತ್ತಿದೆ. ನಗರದ ಎಲ್ಲ ರೆಫ‌ರಲ್‌ ಮತ್ತು ಹೆರಿಗೆ ಆಸ್ಪತ್ರೆಗಳು ಸೇರಿದಂತೆ ಬಹುತೇಕ ಆಸ್ಪತ್ರೆಗಳು ಗರ್ಭಿಣಿಯರ ಕಾಳಜಿಗೆ ಆದ್ಯತೆ ನೀಡು ತ್ತಿವೆ. ಗರ್ಭಿಣಿಯರ ಹೆರಿಗೆ ನಿಗದಿ ದಿನಕ್ಕಿಂತ 15 ದಿನಗಳ ಮುನ್ನವೇ ಕಡ್ಡಾಯವಾಗಿ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಿ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಹೆರಿಗೆ ಸಂದರ್ಭ ದಲ್ಲಿ ಸೋಂಕಿನ ಲಕ್ಷಣ ಅಥವಾ ಅನುಮಾನ ಇದ್ದವರನ್ನೂ ಸೋಂಕು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಬಿಬಿಎಂಪಿಯ ಕ್ಲಿನಿಕಲ್‌ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ. ನಿರ್ಮಲಾ ಬುಗ್ಗಿ ತಿಳಿಸಿದ್ದಾರೆ.

ಮೊದಲ ಅಲೆ ಅನುಭವ: ನಗರದಲ್ಲಿ ಕೊರೊನಾ ಮೊದಲ ಅಲೆ ಯಲ್ಲಿ ಗರ್ಭಿಣಿಯರ ಕೊರೊನಾ ಪರೀಕ್ಷೆ, ಆರೈಕೆ ಹಾಗೂ ಹೆರಿಗೆ ಸಂಬಂಧಿಸಿದಂತೆ ಗೊಂದಲಗಳು ಇದ್ದವು. ಅಲ್ಲದೆ, ಸಾಲಿನಲ್ಲಿ ಪರೀಕ್ಷೆಗೆ ಒಳಗಾದ ಗರ್ಭಿಣಿಯರಿಗೆ ಯಾರಿಗಾದರೂ ಸೋಂಕು ದೃಢ ಪಟ್ಟರೆ ಸರತಿಯಲ್ಲಿ ನಿಂತ ಉಳಿದವರನ್ನು ಹುಡುಕುವುದು ಸವಾಲಾಗಿ ಪರಿಣಮಿಸುತ್ತಿತ್ತು. ಇದೀಗ ಈ ರೀತಿಯ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗಿದೆ.ಸೋಂಕಿನ ಲಕ್ಷಣ ಅಥವಾ ಅನುಮಾನ ಇರುವವರನ್ನು ಪ್ರತ್ಯೇಕವಾಗಿ ಪರೀಕ್ಷೆಗೆ ಒಳ ಪಡಿಸಲಾಗುತ್ತಿದೆ.

ಪಾಲಿಕೆ ಆಸ್ಪತ್ರೆಗಳಲ್ಲಿ ಹೆರಿಗೆ ಹೆಚ್ಚಳ: ನಗರದಲ್ಲಿ ಕೊರೊನಾ ಸೋಂಕು ತೀವ್ರವಾದ ಮೇಲೆ ಪಾಲಿಕೆಯ ರೆಫ‌ರಲ್‌ ಮತ್ತು ಹೆರಿಗೆ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿಕೊಳ್ಳುವವರ ಸಂಖ್ಯೆ ಕಳೆದ ವರ್ಷಗಳಿಗಿಂತ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗಿದೆ.

ಪ್ರತಿ ವರ್ಷ ಅಂದಾಜು 11ರಿಂದ 12 ಸಾವಿರ ಹೆರಿಗೆ ಆಗುತ್ತಿತ್ತು. 2020-21ನೇ ಸಾಲಿನಲ್ಲಿ ಒಟ್ಟು 14,300 ಜನ ಪಾಲಿಕೆಯ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ಆರ್ಥಿಕ ಸಂಕಷ್ಟ ಮತ್ತು ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿಲ್ಲಿಸಿದ್ದು, ಸಹ ಇದಕ್ಕೆ ಪರೋಕ್ಷ ಕಾರಣವಾಗಿದೆ ಎಂದು ಬಿಬಿಎಂಪಿಯ ಕ್ಲಿನಿಕಲ್‌ ವಿಭಾಗದ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಊಟ ನೀಡಲು ಅವಕಾಶ: ಕೊರೊನಾ ಸೋಂಕು ದೃಢಪಟ್ಟು ಘೋಷಾ ಆಸ್ಪತ್ರೆ ಆರೈಕೆಯಲ್ಲಿರುವ ಗರ್ಭಿಣಿಯರಿಗೆ ಅವರ ಕುಟುಂಬದವರಿಂದ ಊಟ ಮತ್ತು ಅಗತ್ಯ ವಸ್ತುಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಕುಟುಂಬದವರು ತಂದುಕೊಡುವ ಊಟ ಮತ್ತು ಅಗತ್ಯ ವಸ್ತುಗಳನ್ನು ಸೆಕ್ಯೂರಿಟಿ ಮತ್ತು ಸಹಾಯಕ ಸಿಬಂದಿ ದೂರದಿಂದಲೇ ತೆಗೆದುಕೊಳ್ಳುತ್ತಾರೆ.

ನಂತರ ಮತ್ತೂಬ್ಬ ಸಿಬ್ಬಂದಿ (ಈ ವೇಳೆ ಪಿಪಿ ಇ ಕಿಟ್‌, ಮಾಸ್ಕ್ ಸೇರಿದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಅನುಸರಿಸಲಾಗುತ್ತಿದೆ) ಸ್ವೀಕರಿಸಿ ಒಳಗೆ ಇರುವ ಗರ್ಭಿಣಿಯರಿಗೆ ನೀಡು ತ್ತಿದ್ದಾರೆ. ಆದರೆ, ಗೇಟ್‌ನ ಒಳಗಡೆ ಹೋಗುವುದಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ಹಿತೇಶ್‌ ವೈ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.