ಕೇರಳ ಮೂಲದವನಾದರೂ ಕರ್ನಾಟಕದಲ್ಲಿ ಮಿಂಚುತ್ತಿರುವ ನೂತನ ಕ್ರಶ್ ದೇವದತ್ತ್ ಪಡಿಕ್ಕಲ್


ಕೀರ್ತನ್ ಶೆಟ್ಟಿ ಬೋಳ, Apr 23, 2021, 3:09 PM IST

devdutt padikkal

ರಾಜಸ್ಥಾನ ರಾಯಲ್ಸ್ ವಿರುದ್ಧ ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ತಂಡದ ಆರಂಭಿಕ ಆಟಗಾರ ದೇವದತ್ತ ಪಡಿಕ್ಕಲ್ ಶತಕ ಬಾರಿಸಿ ಮಿಂಚಿದರು. ನಾಯಕ ವಿರಾಟ್ ಕೊಹ್ಲಿಯೊಂದಿಗೆ ಅದ್ಭುತ ಇನ್ನಿಂಗ್ಸ್ ಕಟ್ಟಿದ ಪಡಿಕ್ಕಲ್ ಐಪಿಎಲ್ ನಲ್ಲಿ ತನ್ನ ಮೊದಲ ಶತಕ ಬಾರಿಸಿದರು. ಕಳೆದ ಸೀಸನ್ ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಮಿಂಚುತ್ತಿರುವ ಕರ್ನಾಟಕದ ಈ ಯುವಕ ಜನಿಸಿದ್ದು ಕೇರಳದಲ್ಲಿ.

20ರ ಹರೆಯದ ದೇವದತ್ತ ಪಡಿಕ್ಕಲ್ ಜನಿಸಿದ್ದು ಕೇರಳ ರಾಜ್ಯದ ಎಡಪ್ಪಲ್ ಎಂಬ ಪಟ್ಟಣದಲ್ಲಿ. ಜುಲೈ ಏಳು 2000 ಇಸವಿಯಲ್ಲಿ. ಕೇರಳದಲ್ಲಿ ಹುಟ್ಟಿದ್ದರೂ ಪಡಿಕ್ಕಲ್ ಬಾಲ್ಯ ಕಳೆದಿದ್ದು ಹೈದರಾಬಾದ್ ನಲ್ಲಿ. ದೇವದತ್ತ್ ಗೆ 11 ವರ್ಷವಿದ್ದಾಗ ಬೆಂಗಳೂರಿಗೆ ಬಂದರು. ಇಲ್ಲಿನ ಸೈಂಟ್ ಜೋಸೆಫ್ ಹೈಸ್ಕೂಲ್ ಸೇರಿದ ದೇವದತ್ತ್ ಅಲ್ಲಿ ಕ್ರಿಕೆಟ್ ಅಭ್ಯಾಸ ಆರಂಭಿಸಿದರು. ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಕೂಡಾ ಇದೇ ಶಾಲೆಯಲ್ಲಿ ಕಲಿತವರು.

ಚಿಕ್ಕವನಿದ್ದಾಗಿನಿಂದಲೂ ರಾಹುಲ್ ದ್ರಾವಿಡ್ ಅವರ ಬ್ಯಾಟಿಂಗ್ ನಿಂದ ಪಡಿಕ್ಕಲ್ ಪ್ರಭಾವಿತರಾಗಿದ್ದರು. ಬೆಂಗಳೂರಿನ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕ್ರಿಕೆಟ್ ನಲ್ಲಿ ಕ್ರಿಕೆಟ್ ಪಟ್ಟುಗಳನ್ನು ಕಲಿತ ದೇವದತ್ತ್, ತನ್ನ ಆಟದಿಂದಲೇ ಗಮನ ಸೆಳೆದಿದ್ದರು. ಕರ್ನಾಟಕ ವಯೋಮಿತಿ ತಂಡದಲ್ಲಿ ಸ್ಥಾನ ಪಡೆದ ಪಡಿಕ್ಕಲ್, ಕೆಪಿಎಲ್ ನಲ್ಲಿ ಬಳ್ಳಾರಿ ಟಸ್ಕರ್ಸ್ ತಂಡದಲ್ಲಿ ಮಿಂಚಿದ್ದರು.

2017ರ ಕೆಪಿಎಲ್ ಸೀಸನ್ ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧದ ಪಂದ್ಯದಲ್ಲಿ 72 ರನ್ ಬಾರಿಸಿ ಮಿಂಚು ಹರಿಸಿದ್ದರು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ದೇವದತ್ತ್ ಆ ಋತುವಿನ ಎಮರ್ಜಿಂಗ್ ಆಟಗಾರ ಗೌರವ ಪಡೆದಿದ್ದರು.

2018ರಲ್ಲಿ ಕೂಚ್ ಬೆಹರ್ ಕೂಟದಲ್ಲಿ ರಾಜ್ಯ ತಂಡದ ಪರ ಮಿಂಚಿನ ಆಟವಾಡಿದ್ದ ಪಡಿಕ್ಕಲ್, ಕೂಟದಲ್ಲಿ 829 ರನ್ ಬಾರಿಸಿದ್ದರು. ಈ ಕಾರಣದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೀಡುವ ‘ಅತ್ಯುತ್ತಮ ಬ್ಯಾಟ್ಸಮನ್’ ಪ್ರಶಸ್ತಿಗೂ ಪಡಿಕ್ಕಲ್ ಪಾತ್ರರಾಗಿದ್ದರು.

2019-20ರಲ್ಲಿ ಕರ್ನಾಟಕ ರಾಜ್ಯ ಮುಖ್ಯ ತಂಡಕ್ಕೆ ಆಯ್ಕೆಯಾದ ಪಡಿಕ್ಕಲ್ ತಮ್ಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದರು. ಆರಡಿ ಉದ್ದದ ಪಡಿಕ್ಕಲ್ ಆ ಋತುವಿನಲ್ಲಿ 1838 ರನ್ ಗಳಿಸಿ ಕರ್ನಾಟಕ ಪರ ಅತೀ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದರು. ವಿಜಯ್ ಹಜಾರೆ ಟ್ರೋಫಿ ಮತ್ತು ಸಯ್ಯದ್ ಮುಷ್ತಾಕ್ ಅಲಿ ಕೂಟದಲ್ಲಿ ಕ್ರಮವಾಗಿ 42.7 ಮತ್ತು 36.13 ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದರು. 2019-20ರ ಸಯ್ಯದ್ ಮುಷ್ತಾಕ್ ಅಲಿ ಕೂಟದಲ್ಲಿ 580 ರನ್  ಮತ್ತು 33 ಸಿಕ್ಸರ್ ಬಾರಿಸಿದ್ದರು. ಕೂಟದಲ್ಲಿ ಅತೀ ಹೆಚ್ಚು ರನ್ ಮತ್ತು ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಕೀರ್ತಿ ಕರ್ನಾಟಕದ ಈ ಎಡಗೈ ಬ್ಯಾಟ್ಸಮನ್ ದ್ದು.

2019ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈತನನ್ನು ಖರೀದಿಸಿದ್ದರೂ ಒಂದೇ ಒಂದು ಪಂದ್ಯವಾಡುವ ಅವಕಾಶ ಸಿಗದೆ ಬೆಂಚ್ ಕಾಯ್ದಿದ್ದರು. ಆದರೆ ಯುಎಇನಲ್ಲಿ ನಡೆದ 13ನೇ ಆವೃತ್ತಿಯಲ್ಲಿ ಅವಕಾಶ ಪಡೆದ ಪಡಿಕ್ಕಲ್ ಮೊದಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ್ದರು. ಹೈದರಾಬಾದ್ ವಿರುದ್ಧ ನಡೆದ ಪ್ರಥಮ ಪಂದ್ಯದಲ್ಲಿ ಆರೋನ್ ಫಿಂಚ್ ಜೊತೆ ಕಣಕ್ಕಿಳಿದಿದ್ದ ಪಡಿಕ್ಕಲ್ ಆಕರ್ಷಕ ಬ್ಯಾಟಿಂಗ್ ನಿಂದ ಗಮನ ಸೆಳೆದಿದ್ದರು. ಅಂದಹಾಗೆ ಪ್ರಥಮ ದರ್ಜೆ, ಲಿಸ್ಟ್ ಎ, ಐಪಿಎಲ್ ನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ ಹೆಚ್ಚುಗಾರಿಕೆ ಈತನಿಗೆ ಸಲ್ಲುತ್ತದೆ.

ಈ ಬಾರಿಯ ಐಪಿಎಲ್ ಗೂ ಕೆಲವೇ ದಿನಗಳ ಮೊದಲು ದೇವದತ್ತ್ ಗೆ ಕೋವಿಡ್ ಸೋಂಕು ಪಾಸಿಟಿವ್ ಆಗಿತ್ತು. ಇದೇ ಕಾರಣದಿಂದ ಮೊದಲ ಪಂದ್ಯವನ್ನೂ ತಪ್ಪಿಸಿಕೊಂಡಿದ್ದರು. ನಂತರದ ಎರಡು ಪಂದ್ಯಗಳಲ್ಲಿ ಅವರ ಬ್ಯಾಟ್ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಒಂದು ಸೀಸನ್ ನ ಅದ್ಭುತ ಎಂದ ಹೀಗಳೆದವರಿಗೆ ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಶತಕ ಸಿಡಿಸಿ ಬಾಯ್ಮುಚ್ಚಿಸಿದ್ದಾರೆ.

ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.