ಕಲಬುರಗಿ: 24 ಗಂಟೆಯಲ್ಲಿ 11 ಜನ ಬಲಿ

ಆಳಂದ ಪಟ್ಟಣದ ಹತ್ಯಾನ ಗಲ್ಲಿಯ 72 ವರ್ಷದ ವೃದ್ಧೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

Team Udayavani, Apr 23, 2021, 6:18 PM IST

ಕಲಬುರಗಿ: 24 ಗಂಟೆಯಲ್ಲಿ 11 ಜನ ಬಲಿ

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಮರಣ ಮೃದಂಗ ಬಾರಿಸುತ್ತಿದೆ. ಇತ್ತೀಚೆಗೆ ಎರಡ್ಮೂರು ಗಂಟೆಗೊಂದು ಸಾವುಗಳು ದಾಖಲಾಗುತ್ತಿದೆ. ಬುಧವಾರವಷ್ಟೇ ಎಂಟು ಸೋಂಕಿತರು ಬಲಿಯಾಗಿದ್ದರೆ, ಗುರುವಾರ 11 ಮಂದಿ ಮಹಾಮಾರಿ ರೋಗದಿಂದ
ಮೃತಪಟ್ಟಿದ್ದಾರೆ.

ಕೊರೊನಾ ಮೊದಲ ಅಲೆಯಲ್ಲಿ 24 ಗಂಟೆಯಲ್ಲಿ ಗರಿಷ್ಠ 10 ಸೋಂಕಿತರ ಸಾವು ದಾಖಲಾಗಿತ್ತು. ಆದರೆ, ಕಳೆದ 24 ಗಂಟೆಯೊಳಗೆ ಮೂವರು ಮಹಿಳೆಯರು ಸೇರಿದಂತೆ 11 ಜನರನ್ನು ಮಹಾಮಾರಿ ಸೋಂಕು ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತರ ಸಂಖ್ಯೆ 410ಕ್ಕೆ ಏರಿಕೆಯಾಗಿದೆ.

ಮೃತರ ವಿವರ: ಗುರುವಾರ ಹೊಸದಾಗಿ 659 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸೇಡಂ ತಾಲೂಕಿನ ಮಳಖೇಡ ಗ್ರಾಮದ 46 ವರ್ಷದ ವ್ಯಕ್ತಿ, ಕಲಬುರಗಿಯ ಬಿದ್ದಾಪುರ ಕಾಲೋನಿಯ 40 ವರ್ಷದ ವ್ಯಕ್ತಿ ಮತ್ತು ಕಲಬುರಗಿಯ ಸುವರ್ಣ ನಗರದ 83 ವರ್ಷದ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅದೇ ರೀತಿ ತೀವ್ರ ಉಸಿರಾಟದ ಸಮಸ್ಯೆ ಜತೆಗೆ ಅಧಿಕ ರಕ್ತದೊತ್ತಡ ಹಾಗೂ ಮೆದುಳಿಗೆ ರಕ್ತಪೂರೈಕೆ ಸಮಸ್ಯೆಯಿಂದ ಬಳಲುತ್ತಿದ್ದ ಚಿತ್ತಾಪುರ ತಾಲೂಕಿನ ರಾಜೋಳ ಗ್ರಾಮದ 72 ವರ್ಷದ ವೃದ್ಧ, ತೀವ್ರ ಉಸಿರಾಟದ ತೊಂದರೆ ಮತ್ತು ಸಕ್ಕರೆ ಕಾಯಿಲೆದಿಂದ ಬಳಲುತ್ತಿದ್ದ ಕಲಬುರಗಿಯ ಮೆಕ್ಕಾ ಕಾಲೋನಿಯ 72 ವರ್ಷದ ವೃದ್ಧ ಮತ್ತು ಆಳಂದ ಪಟ್ಟಣದ ಹತ್ಯಾನ ಗಲ್ಲಿಯ 72 ವರ್ಷದ ವೃದ್ಧೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಅಲ್ಲದೇ, ತೀವ್ರ ಉಸಿರಾಟದ ತೊಂದರೆ, ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ನರಳುತ್ತಿದ್ದ ಕಲಬುರಗಿಯ ವಿಠuಲ ನಗರದ 73 ವರ್ಷದ ವೃದ್ಧ, ಆದರ್ಶ ನಗರದ 52 ವರ್ಷದ ವ್ಯಕ್ತಿ, ರಾಘವೇಂದ್ರ ಕಾಲೋನಿಯ 81 ವರ್ಷದ ವೃದ್ಧ, ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ 54 ವರ್ಷದ ಮಹಿಳೆ ಹಾಗೂ ಶಹಾಬಜಾರ ಪ್ರದೇಶದ ಕಬಾಡಗಲ್ಲಿಯ 57 ವರ್ಷದ ಮಹಿಳೆ ಮಹಾಮಾರಿ ರೋಗದಿಂದ ಮೃತಪಟ್ಟಿದ್ದಾರೆ.

ಸಕ್ರಿಯ ರೋಗಿಗಳು ಹೆಚ್ಚಳ: ದಿನದಿಂದ ದಿನ ಕೊರೊನಾ ಪಾಸಿಟಿವ್‌ ಕೇಸ್‌ ಹೆಚ್ಚಿತ್ತಿರುವುದರಿಂದ ಸಕ್ರಿಯ ರೋಗಿಗಳ ಸಂಖ್ಯೆಯೂ ಅಧಿಕವಾಗುತ್ತಿದೆ. ಇದರಿಂದ ಕೋವಿಡ್‌ ಆಸ್ಪತ್ರೆಗಳು ತುಂಬಿ ತುಳುಕುವಂತೆ ಆಗಿದೆ. ಗುರುವಾರ ಹೊಸದಾಗಿ 659 ಪಾಸಿಟಿವ್‌ ಪ್ರಕರಣಗಳೊಂದಿಗೆ ಒಟ್ಟಾರೆ
ಸೋಂಕಿತರ ಸಂಖ್ಯೆ 32295ಕ್ಕೆ ಏರಿಕೆಯಾಗಿದೆ. ಇದೇ ವೇಳೆ 288 ಜನ ಸೋಂಕಿತರು ಗುಣಮುಖ ರಾಗಿದ್ದಾರೆ. ಇದರೊಂದಿಗೆ ಈವರೆಗೆ 26184 ಮಂದಿ ಚೇತರಿಸಿಕೊಂಡಂತೆ ಆಗಿದೆ. ಜಿಲ್ಲಾದ್ಯಂತ 5701 ಜನ ಸಕ್ರಿಯ ಕೊರೊನಾ ರೋಗಿಗಳು ಇದ್ದಾರೆ. ಇದರಲ್ಲಿ 810 ಮಂದಿ ಕೊರೊನಾ ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 4768 ಜನ ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಇದ್ದು, 30 ಮಂದಿ ಕೋವಿಡ್‌ ಕೇರ್‌ಸೆಂಟರ್‌ಗಳಲ್ಲಿ ದಾಖಲಾಗಿದ್ದಾರೆ. ಇನ್ನೂ, 4144 ಕೊರೊನಾ ಮಾದರಿ ಪರೀಕ್ಷಾ ವರದಿಗಳು ಬಾಕಿ ಉಳಿದಿವೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.