ಕೋವಿಡ್‌ ಸಾವಿನ ಆಡಿಟಿಂಗ್‌ ನಡೆಯಲಿ


Team Udayavani, Apr 24, 2021, 6:30 AM IST

ಕೋವಿಡ್‌ ಸಾವಿನ ಆಡಿಟಿಂಗ್‌ ನಡೆಯಲಿ

ರಾಜ್ಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬಹಳಷ್ಟು ಹೆಚ್ಚಳವಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಇದಕ್ಕೆ ಪೂರಕವಾಗಿ ಶುಕ್ರವಾರವೂ 26 ಸಾವಿರಕ್ಕೂ ಹೆಚ್ಚು ಪ್ರಕರಣ, 190 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 124 ಮಂದಿ ಸಾವನ್ನಪ್ಪಿದ್ದು, 16 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಂತೂ ಪರಿಸ್ಥಿತಿ ಕೈಮೀರಿ ಹೋಗಿರುವ ಬಗ್ಗೆ ಅಸಹಾಯಕತೆ ತೋಡಿಕೊಂಡಿದ್ದು, ಮನೆಯಿಂದ ಆಚೆ ಬರಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ. ಇದರ ನಡುವೆಯೇ ಸುಪ್ರೀಂಕೋರ್ಟ್‌ ಆದಿಯಾಗಿ, ಕೆಲವು ರಾಜ್ಯಗಳ ಹೈಕೋರ್ಟ್‌ಗಳೂ ಕೊರೊನಾ ನಿರ್ವಹಣೆಯಲ್ಲಿ ಆಗುತ್ತಿರುವ ಅವ್ಯವಸ್ಥೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳನ್ನು ತರಾಟೆಗೆ ತೆಗೆದುಕೊಂಡಿವೆ.

ಕೊರೊನಾ ಜತೆಜತೆಗೇ ಇದರಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿ ವಿಚಾರ. ಅದರಲ್ಲೂ ಆಮ್ಲಜನಕದ ಕೊರತೆಯಿಂದಾಗಿ ರೋಗಿಗಳ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ದಿಲ್ಲಿಯೂ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ಅಂತ್ಯ ಸಂಸ್ಕಾರವೇ ಕಷ್ಟಕರವಾಗಿರುವ ಸನ್ನಿವೇಶ ಎದುರಾಗಿದೆ. ದಿಲ್ಲಿಯಲ್ಲಿ ಎರಡು ದಿನಗಳಾದರೂ ಅಂತ್ಯಕ್ರಿಯೆಯಾಗುತ್ತಿಲ್ಲವೆಂದರೆ, ಪರಿಸ್ಥಿತಿಯ ಗಂಭೀರತೆ ಅರ್ಥವಾದೀತು.

ಕರ್ನಾಟಕದಲ್ಲಿ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಂತೂ ಕೊರೊನಾ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ ಎಂದರೆ ತಪ್ಪಾಗಲಾರದು. ಸಾವಿನ ಸಂಖ್ಯೆಯಂತೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಾವಿನ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ, ಇಲ್ಲೂ ಅಂತ್ಯ ಸಂಸ್ಕಾರ ದುರ್ಲಭವಾಗುತ್ತಿದೆ. ಬೆಳಗ್ಗೆಯಿಂದ ಮರುದಿನ ಬೆಳಗ್ಗೆವ ರೆಗೆ ಕಾದು ಅಂತ್ಯಕ್ರಿಯೆ ಮಾಡಬೇಕಾದ ಅನಿವಾರ್ಯ ಎದುರಾಗಿದೆ. ಶುಕ್ರವಾರವೂ 124 ಮಂದಿ ಕೋವಿಡ್‌ ಕಾರಣಕ್ಕಾಗಿಯೇ ಸಾವನ್ನಪ್ಪಿದ್ದು, ಅಂತ್ಯ ಸಂಸ್ಕಾರ ಇನ್ನಷ್ಟು ಕಷ್ಟಕರವಾಗಿರುವುದಂತೂ ಖಚಿತ.

ಇವೆಲ್ಲದರ ಮಧ್ಯೆ, ರಾಜ್ಯ ಸರಕಾರ ನಿಜಕ್ಕೂ ಸಾವಿನ ಸಂಖ್ಯೆ ನಿಖರವಾಗಿ ಹೇಳುತ್ತಿದೆಯೇ ಎಂಬ ಪ್ರಶ್ನೆಗಳೂ ಎದುರಾಗಿವೆ. ಬೆಂಗಳೂರಿನಲ್ಲಿ ಒಟ್ಟು 13 ಶ್ಮಶಾನಗಳಿವೆ. ದಿನಕ್ಕೆ ಒಂದೊಂದು ಶ್ಮಶಾನದಲ್ಲೂ ಸುಮಾರು 25ರಿಂದ 30 ಮೃತ ದೇಹಗಳನ್ನು ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಒಂದು ವೇಳೆ ರಾಜ್ಯ ಸರಕಾರ ಹೇಳುತ್ತಿರುವ ಸಂಖ್ಯೆಗಳೇ ಆದರೆ ಅಂತ್ಯ ಸಂಸ್ಕಾರವಾಗುತ್ತಿರುವ ಮೃತದೇಹಗಳ ಸಂಖ್ಯೆ ಕಡಿಮೆ ಇರಬೇಕಾಗಿತ್ತು. ಆದರೆ ಸರಕಾರ ಹೇಳುತ್ತಿರುವುದೇ ಒಂದು, ಶ್ಮಶಾನಗಳಲ್ಲಿ ನಡೆಸಲಾಗುತ್ತಿರುವ ಅಂತ್ಯ ಸಂಸ್ಕಾರದ ಲೆಕ್ಕವೇ ಬೇರೆ ಎಂಬಂತಾಗಿದೆ ಸ್ಥಿತಿ.

ಇವೆಲ್ಲದಕ್ಕಿಂತ ಮುಖ್ಯವಾಗಿ ಸಾವಿನ ಲೆಕ್ಕ ಪರಿಶೋಧನೆ ನಡೆಯಬೇಕು. ಮೊದಲ ಅಲೆಯ ಸಂದರ್ಭದಲ್ಲಿ ಆರೋಗ್ಯ ಸಚಿವ ಸುಧಾಕರ್‌ ಅವರು ಈ ಬಗ್ಗೆ ಹಲವು ಬಾರಿ ಪ್ರಸ್ತಾವಿಸಿದ್ದರೂ ಅದು ಕೈಗೂಡಲಿಲ್ಲ. ಪ್ರತೀ ಸಾವಿನ ಹಿಂದಿನ ಕಾರಣ ಏನು ಎನ್ನುವುದನ್ನು ಆಡಿಟ್‌ ಮಾಡಿದರೆ ಕೊರೊನಾ ಸಾವೆಷ್ಟು, ಇತರ ಕಾರಣಗಳಿಂದಾದ ಸಾವೆಷ್ಟು ಎಂಬಿತ್ಯಾದಿ ಮಾಹಿತಿ ಲಭ್ಯವಾಗುತ್ತದೆ. ಇಲ್ಲದಿದ್ದರೆ ಈಗಾಗಲೇ ಕೊರೊನಾದಿಂದ ಆತಂಕಿತರಾಗಿರುವ ಜನತೆ, ಮತ್ತಷ್ಟು ಹೆದರಬೇಕಾದ ಸ್ಥಿತಿ ಎದುರಾಗಬಹುದು ಎಚ್ಚರ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.