ಕೋವಿಡ್‌ ಆಸ್ಪತ್ರೆಗೆ ನೀರಿನ ಕೊರತೆ: ಸೋಂಕಿತರ ಪ್ರತಿಭಟನೆ


Team Udayavani, Apr 24, 2021, 2:53 PM IST

ಕೋವಿಡ್‌ ಆಸ್ಪತ್ರೆಗೆ ನೀರಿನ ಕೊರತೆ: ಸೋಂಕಿತರ ಪ್ರತಿಭಟನೆ

ರಾಮನಗರ: ಜಿಲ್ಲಾ ಕೇಂದ್ರ ರಾಮನಗರದ ಕೋವಿಡ್‌ ರೆಫ‌ರಲ್‌ ಆಸ್ಪತ್ರೆಯಲ್ಲಿನ (ಕಂದಾಯಭವನ) ನೀರಿನ ಕೊರತೆ ನೀಗಿಸುವಂತೆ ಮತ್ತು ಶುಚಿತ್ವ ಕಾಪಾಡಿಕೊಳ್ಳುವಂತೆ ಒತ್ತಾಯಿಸಿ ಕೋವಿಡ್ ಸೋಂಕಿತರು ಗುರುವಾರ ರಾತ್ರಿಆಸ್ಪತ್ರೆಯಿಂದ ಹೊರ ಬಂದು ಪ್ರತಿಭಟನೆ ನಡೆಸಿದ ಮತ್ತು ಪೊಲೀಸರು ಮಧ್ಯ ಪ್ರವೇಶಿಸಿದ ಪ್ರಸಂಗ ನಡೆದಿದೆ.

ಆಸ್ಪತ್ರೆಯಲ್ಲಿನ ಶೌಚಾಲಯಗಳಲ್ಲಿ ನೀರಿಲ್ಲ, ಶುಚಿತ್ವ ಕಾಪಾಡುತ್ತಿಲ್ಲ, ಈ ಬಗ್ಗೆ ಪದೇ ಪದೆಮನವಿ ಮಾಡಿದರೂ ಬಗೆಹರಿಸುತ್ತಿಲ್ಲ ಎಂದು ಆರೋಪಿಸಿ, ಆಕ್ರೋಶಗೊಂಡ ರೋಗಿಗಳುಆಸ್ಪತ್ರೆಯಿಂದ ಹೊರ ಬಂದು ಪ್ರತಿಭಟಿಸುವಮೂಲಕ ಜಿಲ್ಲಾಡಳಿತದ ಗಮನ ಸೆಳೆದರು.

ಸರಿಯಾಗಿ ಆಹಾರ, ವೈದ್ಯ ಸೇವೆ ಇಲ್ಲ:

ಜಿಲ್ಲಾದ್ಯಂತ ಸೋಂಕಿತರು ಈ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಯಾವ ರೋಗಿಗೂ ಸರಿಯಾದಆರೋಗ್ಯ ಸೇವೆ, ಗುಣಮಟ್ಟದ ಆಹಾರ ಸಿಗುತ್ತಿಲ್ಲ.ವೈದ್ಯರು ಬಂದು ತಪಾಸಣೆ ಮಾಡುತ್ತಿಲ್ಲ ಎಂದು ಸೋಂಕಿತರು ಆರೋಪಿಸಿದ್ದಾರೆ.

ತ್ಯಾಜ್ಯ ವಿಲೇವಾರಿ ಆಗಿಲ್ಲ: ಕೋವಿಡ್‌ ಆಸ್ಪತ್ರೆಯಲ್ಲಿನ ಶೌಚಾಲಯಗಳು ಸ್ವತ್ಛವಾಗಿಲ್ಲ,ದುರ್ನಾತ ಬೀರುತ್ತಿವೆ. ಆವರಣವೂನಿರ್ಮಲವಾಗಿಲ್ಲ. ತ್ಯಾಜ್ಯ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ ಎಂದು ಕೊರೊನಾ ಸೋಂಕಿತರುಗಂಭೀರ ಆರೋಪ ಮಾಡಿದರು.

ಪೌಷ್ಟಿಕತೆಯೇ ಇಲ್ಲ: ಕೋವಿಡ್‌ ಸೋಂಕಿತರಿಗೆ ದಿನನಿತ್ಯ ನೀಡುವ ಆಹಾರದಲ್ಲಿ ಪೌಷ್ಟಿಕತೆಗೆ ಆದ್ಯತೆ ಕೊಡಬೇಕು. ಆದರೆ, ಇದ್ಯಾವುದೂ ಇಲ್ಲಿ ಪಾಲನೆ ಆಗುತ್ತಿಲ್ಲ. ಇಲ್ಲಿನ ಸಿಬ್ಬಂದಿ ಕಾಫಿ, ಟೀ ಕೊಡುವ ಮನಸ್ಸಾದರೆ ಮಾತ್ರ ಕೊಡುತ್ತಾರೆ, ಇಲ್ಲದಿದ್ದರೆ ಇಲ್ಲ ಎಂದು ದೂರಿದರು.

ಮನೆಗೆ ಕಳುಹಿಸಿ: ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳನ್ನು ವೃದ್ಧಿಸಿ ಇಲ್ಲವೇ ತಮ್ಮನ್ನು ಮನೆಗೆ ಕಳುಹಿಸಿ ಅಲ್ಲೇ ಚಿಕಿತ್ಸೆ ಕೊಡಿ ಎಂದು ಸೋಂಕಿತರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಪ್ರತಿಭಟನೆವಿಚಾರ ತಿಳಿದಾಕ್ಷಣ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

ನೀರು ಮತ್ತು ಸ್ವತ್ಛತೆಗೆ ತಕ್ಷಣದ ವ್ಯವಸ್ಥೆ ಮಾಡುವುದಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರು ಭರವಸೆ ನೀಡಿದನಂತರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ.ಮನೆಗೆ ಕರೆದುಕೊಂಡು ಹೋಗಲು ಮನವಿ:ಆದರೆ, ಶುಕ್ರವಾರ ಬೆಳಗ್ಗೆಯಾದರೂ ಸಮಸ್ಯೆಗಳು ಮುಂದುವರಿದಿದೆ. ಹೀಗಾಗಿ ಸೋಂಕಿತರು ತಮ್ಮಕುಟುಂಬಗಳಿಗೆ ಫೋನಾಯಿಸಿ ತಮ್ಮನ್ನು ಆಸ್ಪತ್ರೆಯಿಂದ ಕರೆದುಕೊಂಡು ಹೋಗುವಂತೆ ಮನವಿಮಾಡಿದ್ದಾರೆ ಎಂದು ಗೊತ್ತಾಗಿದೆ.

ಕೋವಿಡ್‌ ರೆಫ‌ರಲ್‌ ಆಸ್ಪತ್ರೆಯಲ್ಲಿ (ಕಂದಾಯ ಭವನ) ಕುಡಿಯುವ ನೀರಿಗೆ ಸಮಸ್ಯೆ ಇರಲಿಲ್ಲ. ಕುಡಿಯುವ ನೀರು ಪೂರೈಸುವ 15 ಡಿಸ್ಪೆಂಸರ್‌ಗಳು ಸ್ಥಾಪನೆಯಾಗಿವೆ. ಹೆಚ್ಚುವರಿಯಾಗಿ ಇನ್ನೂ ಐದು ಡಿಸ್ಪೆಂಸರ್‌ ವ್ಯವಸ್ಥೆಗೆ ಸೂಚಿಸಲಾಗಿದೆ.– ಇಕ್ರಂ, ಸಿಇಒ, ಜಿಲ್ಲಾ ಪಂಚಾಯ್ತಿ

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.