ಕೋವಿಡ್ ಅಲರ್ಟ್: ಆಕ್ಸಿಜನ್ ಆಮದು ಮೇಲಿನ ಅಬಕಾರಿ ಸುಂಕ, ಆರೋಗ್ಯ ಸೆಸ್ ಗೆ ವಿನಾಯ್ತಿ
ತಕ್ಷಣವೇ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಪ್ರಧಾನಿ ಸಲಹೆ ನೀಡಿರುವುದಾಗಿ ವರದಿ ಹೇಳಿದೆ.
Team Udayavani, Apr 24, 2021, 4:52 PM IST
ನವದೆಹಲಿ:ಕೋವಿಡ್ ಎರಡನೇ ಅಲೆ ದೇಶದಲ್ಲಿ ಕ್ಷಿಪ್ರವಾಗಿ ಹರಡುವ ಮೂಲಕ ಭೀತಿಯನ್ನು ಮೂಡಿಸಿದೆ. ಅಲ್ಲದೇ ಇದರೊಂದಿಗೆ ಜನರು ಹಲವಾರು ಸಮಸ್ಯೆಯನ್ನು ಎದುರಿಸುವಂತಾಗಿದೆ. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿರುವ ಕೇಂದ್ರ ಸರ್ಕಾರ, ಆಕ್ಸಿಜನ್ ಆಮದಿನ ಮೇಲಿನ ಅಬಕಾರಿ ಸುಂಕ ಮತ್ತು ಆರೋಗ್ಯ ಸೆಸ್ ಅನ್ನು ಮನ್ನಾ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ(ಏಪ್ರಿಲ್ 24) ಸಭೆಯಲ್ಲಿ, ಮೂರು ತಿಂಗಳ ಅವಧಿಗೆ ಆಮದು ಮಾಡಿಕೊಳ್ಳುವ ಕೋವಿಡ್ 19 ಲಸಿಕೆ ಮೇಲಿನ ಮೂಲ ಅಬಕಾರಿ ಸುಂಕಕ್ಕೆ ವಿನಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆಯಲ್ಲಿ ಹೇಳಿದೆ.
ಅಬಕಾರಿ ಸುಂಕ ಹಾಗೂ ಸೆಸ್ ವಿನಾಯ್ತಿಯಿಂದ ಈ ವಸ್ತುಗಳು ಇನ್ನಷ್ಟು ಅಗ್ಗವಾಗಿ ಲಭ್ಯವಾಗಲಿದೆ. ಕೋವಿಡ್ ಗೆ ಸಂಬಂಧಿಸಿದ ಉಪಕರಣ ಆಮದು ಮೇಲಿನ ಸುಂಕಕ್ಕೂ ವಿನಾಯ್ತಿ ನೀಡಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಆಸ್ಪತ್ರೆ ಮತ್ತು ಮನೆಗಳಲ್ಲಿರುವ ರೋಗಿಗಳಿಗೆ ತುರ್ತಾಗಿ ಮೆಡಿಕಲ್ ಆಕ್ಸಿಜನ್ ಮತ್ತು ಉಪಕರಣಗಳು ತುರ್ತಾಗಿ ಸರಬರಾಜು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಚಿವಾಲಯಗಳು, ಇಲಾಖೆಗಳು ತಕ್ಷಣವೇ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಪ್ರಧಾನಿ ಸಲಹೆ ನೀಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ