ಪರಿಸ್ಥಿತಿಗೆ ತಕ್ಕಂತೆ ಆಡಲು ಕಲಿತಿದ್ದೇನೆ: ಗೆಲುವಿನ ಬಳಿಕ ಸಂಜು ಸ್ಯಾಮ್ಸನ್
Team Udayavani, Apr 25, 2021, 9:57 AM IST
ಮುಂಬೈ: ಈ ಬಾರಿಯ ಐಪಿಎಲ್ ನ 18ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರು ವಿಕೆಟ್ ಜಯ ಸಾಧಿಸಿದೆ. ಸತತ ಸೋಲನುಭವಿಸಿದ್ದ ರಾಜಸ್ಥಾನ್ ತಂಡ ಮತ್ತೆ ಗೆಲುವಿನ ನಗೆ ಬೀರಿದರೆ, ಕೆಕೆಆರ್ ತಂಡ ನಾಲ್ಕನೇ ಸೋಲನುಭವಿಸಿದೆ.
ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ 42 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಕಡಿಮೆ ಮೊತ್ತ ಬೆನ್ನಟ್ಟಿತ್ತಿದ್ದರೂ ಕಡೆಯವರೆಗೆ ಕ್ರೀಸ್ ನಲ್ಲಿದ್ದು ತಂಡವನ್ನು ಗೆಲ್ಲಿಸಿದರು.
ಇದನ್ನೂ ಓದಿ:ಕೊಹ್ಲಿ- ಧೋನಿ ತಂಡಗಳ ಹೈ ವೋಲ್ಟೇಜ್ ಮ್ಯಾಚ್
ಈ ಸೀಸನ್ ನ ಮೊದಲ ಪಂದ್ಯದಲ್ಲೇ ಸಂಜು ಸ್ಯಾಮ್ಸನ್ ಭರ್ಜರಿ ಶತಕ ಬಾರಿಸಿದರೂ ನಂತರ ಅಗ್ಗಕ್ಕೆ ವಿಕೆಟ್ ಒಪ್ಪಿಸಿ ಟೀಕೆಗೆ ಒಳಗಾಗಿದ್ದರು. ನಂತರ ಮೂರು ಪಂದ್ಯಗಳಲ್ಲಿ ರಾಜಸ್ಥಾನ್ ಕ್ಯಾಪ್ಟನ್ ಕ್ರಮವಾಗಿ 4,1, 21 ರನ್ ಮಾತ್ರ ಗಳಿಸಿದ್ದರು.
ಕೆಕೆಆರ್ ವಿರುದ್ದದ ಪಂದ್ಯದ ನಂತರ ಈ ಕುರಿತಂತೆ ಸಂಜು ಮಾತನಾಡಿದ್ದಾರೆ. ಪರಿಸ್ಥಿತಿಗೆ ತಕ್ಕಂತೆ ಆಡುವುದನ್ನು ನಾನು ಕಲಿತಿದ್ದೇನೆ. ಪಂದ್ಯದ ಪರಿಸ್ಥಿತಿ ಏನನ್ನು ಬಯಸುತ್ತದೆಯೋ ಅದರಂತೆ ಆಡುವುದನ್ನು ನಾನು ಇಷ್ಟು ವರ್ಷಗಳ ಅನುಭವದಿಂದ ಕಲಿತಿದ್ದೇನೆ ಎಂದು ಸಂಜು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್