ಉಚಿತವಾಗಿ ಫ್ಯಾಬಿಫ್ಲೂ ಮತ್ತು ಆಮ್ಲಜನಕ ಸಿಲಿಂಡರ್ ನೀಡಲು ಮುಂದಾದ ಗೌತಮ್ ಗಂಭೀರ್!
Team Udayavani, Apr 25, 2021, 1:34 PM IST
ದೆಹಲಿ : ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಪ್ರತಿಷ್ಠಾನದ ಮೂಲಕ ದೆಹಲಿಯ ಕೋವಿಡ್ ಸೋಂಕಿತರಿಗೆ ಉಚಿತವಾಗಿ ಆಂಟಿ-ವೈರಲ್ ಡ್ರಗ್ ಫ್ಯಾಬಿಫ್ಲೂ ಮತ್ತು ಆಮ್ಲಜನಕ ಸಿಲಿಂಡರ್ಗಳನ್ನು ವಿತರಿಸಲಿದ್ದೇವೆ ಎಂದು ಭಾನುವಾರ ತಿಳಿಸಿದ್ದಾರೆ.
ಈ ಹಿಂದೆ ದೆಹಲಿಯ ತಮ್ಮ ಕ್ಷೇತ್ರವಾದ ಪೂರ್ವ ದೆಹಲಿಯ ಜನರಿಗೆ ತಮ್ಮ ಪ್ರತಿಷ್ಠಾನದ ಮೂಲಕ ಕೋವಿಡ್ ಸೋಂಕಿತರಿಗೆ ಫ್ಯಾಬಿಫ್ಲೂ ಮತ್ತು ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡುತ್ತಿದ್ದಾರೆ. ಔಷಧ ಮತ್ತು ಆಕ್ಸಿಜನ್ ಸಿಲಿಂಡರ್ ಪಡೆಯಲು ಬರುವ ಜನ ತಮ್ಮ ಆಧಾರ್ ಕಾರ್ಡ್ ಜೊತೆಗೆ ಬರಬೇಕು ಎಂದು ಸೂಚನೆ ನೀಡಲಾಗಿತ್ತು.
ದೆಹಲಿ ನನ್ನ ಮನೆ. ನನ್ನ ಕೊನೆಯ ಉಸಿರು ಇರವ ತನಕ ಇಲ್ಲಿನ ಜನರ ಸೇವೆಯನ್ನು ಮಾಡುತ್ತೇನೆ. ಆಕ್ಸಿಜನ್, ಬೆಡ್, ಮತ್ತು ಔಷಧದ ಸಹಾಯ ಮಾಡಿ ಎಂದು ಹಲವಾರು ಮನವಿಗಳು ಬಂದಿವೆ. ನನಗೆ ಎಷ್ಟು ಸಾಧ್ಯ ಆಗುತ್ತದೆಯೋ ಅಷ್ಟು ಸಹಾಯವನ್ನು ನಾನು ಮಾಡುತ್ತೇನೆ. ಇದು ನಿಜವಾಗಿಯೂ ಕಠಿಣ ಸಮಯ ಎಂದು ಗಂಭೀರ್ ಹೇಳಿದ್ದಾರೆ.
ಇತ್ತಿಚೆಗೆ ಗೌತಮ್ ಗಂಭೀರ್ ಪ್ರತಿಷ್ಠಾನವು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಂದ 1 ಕೋಟಿ ರೂ.ಗಳ ದೇಣಿಗೆ ಪಡೆದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್ ಡೌನ್ ಅನ್ನು ಇನ್ನು ಒಂದು ವಾರಗಳ ಕಾಲ ಮುಂದುವರೆಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಆರು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಅದರ ಅವಧಿ ನಾಳೆ ಅಂದ್ರೆ ಸೋಮವಾರಕ್ಕೆ ಮುಕ್ತಾಯವಾಗಲಿದ್ದು, ಇದೀಗ ಮತ್ತೆ ದೆಹಲಿ ಲಾಕ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ