ವರ್ಕ್‌ ಫ್ರಮ್‌ ಹೋಂ ಐಟಿ-ಬಿಟಿಗೆ ಮಾತ್ರ ಯಾಕೆ?


Team Udayavani, Apr 26, 2021, 12:10 PM IST

Work from home

ಬೆಂಗಳೂರು: “ಕೊರೊನಾ ಮೊದಲನೆ ಅಲೆಯಲ್ಲಿ ರಾಜಧಾನಿಯ ಸೋಂಕು ಹತೋಟಿಗೆ ವರವಾಗಿದ್ದ”ವರ್ಕ್‌ ಫ್ರಮ್‌ ಹೋಂ’ಗೆ ಈ ಬಾರಿ ಬಹುತೇಕ ಖಾಸಗಿ ಕಂಪನಿಗಳು ಹಿಂದೇಟು ಹಾಕುತ್ತಿವೆ ಎನ್ನಲಾಗಿದೆ. ಇದರಿಂದ ಉದ್ಯೋಗಿಗಳು, ನಿತ್ಯ ಜೀವ ಭಯದಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ.”ವರ್ಕ್‌ ಫ್ರಮ್‌ ಹೋಂ’ಗೆ ಉದ್ಯಾನ ನಗರಿಯ ಅನೇಕ ಖಾಸಗಿ ಕಂಪನಿಗಳು ಹಿಂದೇಟು ಹಾಕುತ್ತಿವೆ.ಇದರಿಂದ ಉದ್ಯೋಗಿಗಳ ಸೋಂಕು ಹರಡುವಿಕೆ ಹೆಚ್ಚಳವಾಗಿದೆ.

“ಸರ್‌.. ಕಳೆದ ವರ್ಷ ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ ಕಂಪನಿ “ವರ್ಕ್‌ ಫ್ರಮ್‌ ಹೋಂ’ಗೆ ಅವಕಾಶನೀಡಿತ್ತು. ಇದರಿಂದ ನಮ್ಮ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಈಗ ಮತ್ತೆ ಎರಡನೇ ಅಲೆವ್ಯಾಪಕವಾಗಿ ಹಬ್ಬುತ್ತಿದೆ. ಸರಕಾರ ಇನ್ನೂ ಕಡ್ಡಾಯ ನಿಯಮಗಳನ್ನು ಜಾರಿ ಮಾಡುತ್ತಿಲ್ಲ. ನಿತ್ಯ ಮಾಧ್ಯಮಗಳಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಸಂಬಂಧಿಕರ ನೋವು ಕಣ್ಣಾರೆ ನೋಡುತ್ತಿದ್ದೇವೆ.

ಕೋಟಿರೂ. ಇದ್ದರೂ ಆಕ್ಸಿಜನ್‌, ಬೆಡ್‌ ಸಿಗದೆ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ… ಈ ಬಾರಿ ಮನೆಯಿಂದಲೇ ಕೆಲಸ ಜಾರಿಯಾದರೆ ಒಳಿತು.. ‘”ನಾನು ಒಬ್ಬಂಟಿ(ಅವಿವಾಹಿತ) ಸರ್‌.. ನಿತ್ಯಮನೆಯವರಿಗೆ ಕರೆಮಾಡಿದಾಗಲೆಲ್ಲ ಪೋಷಕರು, “ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಹೆಚ್ಚಾಗಿದೆ. ಆರೋಗ್ಯ ಹುಷಾರು. ಜೀವಮುಖ್ಯ ಕಣೋ, ಸಾಧ್ಯವಾದರೆ ಕೆಲಸ ಮಾಡು. ಇಲ್ಲವಾದರೆ ಊರಿಗೆ ವಾಪಸ್‌ ಬಂದು ಬಿಡು. ಇಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡುಜೀವನ ನಡೆಸಬಹುದು’ ಎಂದು ಕಣ್ಣೀರಿಡುತ್ತಿದ್ದಾರೆ. ಕೆಲಸ ಮುಖ್ಯನಾ? ಜೀವಮುಖ್ಯನಾ? ಎಂಬ ಗೊಂದಲ ಮೂಡಿದೆ. ಕಂಪನಿಯವರು “ವರ್ಕ್‌ ಫ್ರಮ್‌ ಹೋಂ’ಗೆ ಅವಕಾಶ ಕೊಟ್ಟರೆ ಮನೆಯವರೂ ನಿಟ್ಟುಸಿರು ಬಿಡುತ್ತಾರೆ ಸರ್‌..’ಹೀಗೆ.. ನಗರದ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಬೆಳಗಾವಿ ಜಿಲ್ಲೆ ಮೂಲದ ಉದ್ಯೋಗಿಯೊಬ್ಬರು, ಕಂಪನಿ ಕೆಲಸ ಹಾಗೂ ಕೊರೊನಾ ಎರಡನೇ ಅಲೆಯಿಂದ ಕುಟುಂಬದವರಲ್ಲಿ ಉಂಟಾಗಿರುವ ಭಯದವಾಸ್ತವಾಂಶವನ್ನು ಬಿಚ್ಚಿಟ್ಟಿದ್ದಾರೆ.

ಕೆಲವು ಕ್ಷೇತ್ರಗಳಿಗಿಲ್ಲ “ವರ್ಕ್‌ ಫ್ರಮ್‌ ಹೋಂ’:”ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ಬಗೆಯಕೆಲಸದ ವಾತಾವರಣ ಸೃಷ್ಟಿಯಾಗಿದೆ. ಸಾಫ್ಟ್ವೇರ್‌ ಉದ್ಯೋಗಿಗಳಿಗೆ ಮಾತ್ರವೇ ಸೀಮಿತವಾಗಿದ್ದ “ವರ್ಕ್‌ ಫ್ರಮ್‌ ಹೋಂ’ ಸೌಲಭ್ಯ, ಇದೀಗ ಇತರೆ ಕಾರ್ಯಕ್ಷೇತ್ರಕ್ಕೂ ಹರಡಿದೆ. ಇಷ್ಟು ದಿನ “ವರ್ಕ್‌ ಫ್ರಮ್‌ ಹೋಂ’ ಎನ್ನುವುದು ಕೆಲವೇ ಕಾರ್ಯಕ್ಷೇತ್ರಗಳ ಉದ್ಯೋಗಿಗಳಿಗೆ ಮಾತ್ರವೇ ಲಭ್ಯವಿತ್ತು. ಇತರೆ ಕಾರ್ಯಕ್ಷೇತ್ರಗಳಲ್ಲಿ ಆ ಸೌಲಭ್ಯವನ್ನು ಒದಗಿಸುವುದು ಅಷ್ಟೇನೂ ಪರಿಣಾಮಕಾರಿ ತಂತ್ರವಲ್ಲ ಎಂದು ಭಾವಿಸಲಾಗಿತ್ತು. ಫೀಲ್ಡ್‌ನಲ್ಲಿ ಕೆಲಸ ಮಾಡುವ ಅನಿವಾರ್ಯತೆಯುಳ್ಳ ಕೆಲವೊಂದು ಉದ್ಯೋಗ ಕ್ಷೇತ್ರಗಳಲ್ಲಿ “ವರ್ಕ್‌ ಫ್ರಮ್‌ ಹೋಂ’ಸೌಲಭ್ಯವನ್ನು ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ,ಕೆಲವು ಸೆಕ್ಟರ್‌ಗಳ ಉದ್ಯೋಗಿಗಳು ಸೌಲಭ್ಯದಿಂದ ವಂಚಿತರಾಗಿದ್ದಾರೆ’ ಎಂದು ನಗರದ ಖಾಸಗಿ ಕಂಪನಿ ವ್ಯವಸ್ಥಾಪಕ ನಿರ್ದೇಶಕರೊಬ್ಬರು ತಿಳಿಸಿದ್ದಾರೆ.

ಕಂಪನಿ-ನೌಕರರ ಮಧ್ಯೆ ವಿಶ್ವಾಸ ಅಗತ್ಯ: ಕಚೇರಿಯಲ್ಲೇ ಕೆಲಸ ನಿರ್ವಹಿಸುವುದರಿಂದ ಸಾಕಷ್ಟು ಪ್ರಯೋಜನ‌ಗಳಿವೆ. ಕಚೇರಿ ವಾತಾವರಣ ಉತ್ಪಾದನೆಯ ಪರಿಸರ ಕಲ್ಪಿಸಿಕೊಡುತ್ತದೆ. ಸಹೋದ್ಯೋಗಿಗಳೊಡನೆ ಒಡನಾಟವಿರುತ್ತದೆ. ಅವರ ಸಹಾಯದಿಂದ ಆಫೀಸಿಗೆ ಸಂಬಂಧಿಸಿದ ಸಾಕಷ್ಟು ಸಮಸ್ಯೆಗಳು ಪರಿಹಾರವಾಗುತ್ತವೆ. ಅಲ್ಲದೆ,ಮನೆಯಲ್ಲಿ ಕುಳಿತವರು ಕಚೇರಿ ಕೆಲಸ ಬಿಟ್ಟು ಕಾಲಹರಣ ಮಾಡಬಹುದು ಎನ್ನುವ ಆತಂಕವೂ ಕಂಪನಿಗಳಿಗಿರುತ್ತದೆ. ಪ್ರಸ್ತುತ ಕೊರೊನಾ ವ್ಯಾಪಕತೆ ಬಿಗಡಾಯಿಸಿದೆ. ಇದರಿಂದ ಉದ್ಯೋಗಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಬಹುದು. ಕಂಪನಿ ಹಾಗೂ ನೌಕರರು ಪರಸ್ಪರ ವಿಶ್ವಾಸ, ಜವಾಬ್ದಾರಿ ಅರಿತು ತಮ್ಮ ಕೆಲಸಗಳನ್ನು ನಡೆಸಿಕೊಂಡು ಜೊತೆಯಾಗಿ ಸಾಗಬೇಕಿದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

ಪರಿಸರ ಸ್ನೇಹಿ ವಾತಾವರಣ ಸೃಷ್ಟಿ

“ಪ್ರಸ್ತುತ ಪರಿಸ್ಥಿತಿ ಅವಲೋಕಿಸಿದರೆ, ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ಕಳೆದ ಬಾರಿಯಂತೆ “ವರ್ಕ್‌ ಫ್ರಮ್‌ ಹೋಂ’ ಸೌಲಭ್ಯ ಕಲ್ಪಿಸುವುದು ಸೂಕ್ತ. ಇದರಿಂದ ಸಿಬ್ಬಂದಿಗೆ ನಿರಾಳತೆ ಇರುತ್ತದೆ. ಮನೆಯಿಂದಕೆಲಸ ಮಾಡುವಾಗ, ಕಚೇರಿಯಲ್ಲಿ ದುಡಿಯುತ್ತಿದ್ದ ಸಮಯಕ್ಕಿಂತ ಹೆಚ್ಚಿನ ಸಮಯ ದುಡಿಯಬೇಕಾಗಿ ಬಂದರೂ ಅಷ್ಟಾಗಿ ಒತ್ತಡ ಇರುವುದಿಲ್ಲ. ಇನ್ನು ಮಹಿಳಾ ಉದ್ಯೋಗಿಗಳಿಗೆ “ವರ್ಕ್‌ ಫ್ರಮ್‌ ಹೋಂ’ನಿಂದ ಸಾಕಷ್ಟು ಅನುಕೂಲಗಳಿವೆ. ಕುಟುಂಬಸ್ಥರ ಜತೆಗೆ ಹೆಚ್ಚು ಸಮಯ ಕಳೆಯುವ ಅವಕಾಶ ಲಭಿಸುತ್ತದೆ. ಅಲ್ಲದೆ ಮುಖ್ಯವಾಗಿ, ಐಟಿ, ಬಿಟಿ ಕಂಪನಿಗಳೇ ಹೆಚ್ಚಿರುವ ನಗರ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಇಳಿಮುಖವಾಗಿ,ಪರಿಸರ ಸ್ನೇಹಿ ವಾತಾವರಣ ನಿರ್ಮಾಣವಾಗುತ್ತದೆ’ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ವಿಕಾಸ್‌ ಆರ್‌ ಪಿಟ್ಲಾಲಿ

ಟಾಪ್ ನ್ಯೂಸ್

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.