ಕೋವಿಡ್ ಸೋಂಕಿನಿಂದ ತಾಯಿಯ ನರಳಾಟ : ಮನನೊಂದ ಪುತ್ರ ಆಸ್ಪತ್ರೆಯಲ್ಲೇ ನೇಣಿಗೆ ಶರಣು
Team Udayavani, Apr 26, 2021, 8:10 PM IST
ಹಾಸನ : ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯ ನರಳಾಟ ಕಂಡು ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಹಿಮ್ಸ್ ಆಸ್ಪತ್ರೆಯ ಕೊರೊನಾ ವಿಭಾಗದ ಕಟ್ಟಡದಲ್ಲಿ ಸೋಮವಾರ ಬೆಳಕಿಗೆ ಬಂದಿದೆ.
ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಮಾದರೆ ಗ್ರಾಮದ ಶರತ್ ಕುಮಾರ್ (30) ಅವರು ಹಿಮ್ಸ್ ಆಸ್ಪತ್ರೆ 7ನೇ ಮಹಡಿಯಲ್ಲಿರುವ ನೀರಿನ ಟ್ಯಾಂಕ್ಗಳ ಪೈಪ್ ಗಳಿಗೆ ನೇಣು ಬಿಗಿದುಕೊಂಡಿದ್ದು, ಸೋಮವಾರ ಬೆಳಗ್ಗೆ ಆಸ್ಪತ್ರೆ ಸಿಬಂದಿ ಸ್ವಚ್ಛಗೊಳಿಸಲು ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ಶರತ್ ಕುಮಾರ್ ಅವರು, ಕೆಲವು ದಿನಗಳ ಹಿಂದೆಯಷ್ಟೇ ಗ್ರಾಮಕ್ಕೆ ಬಂದಿದ್ದರು. 10 ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ತಾಯಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಆಕೆ ಚೇತರಿಸಿಕೊಂಡಿಲ್ಲ. ರವಿವಾರ ರಾತ್ರಿ ಸಹೋದರ ಶಶಿಕುಮಾರ್ರಿಗೆ ಫೋನ್ ಮಾಡಿದ್ದ ಶರತ್, “ಅಮ್ಮ ತುಂಬಾ ನೋವು ಅನುಭವಿಸುತ್ತಿದ್ದಾರೆ. ಅದನ್ನು ನೋಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನೀನು ಆಸ್ಪತ್ರೆಗೆ ಬಂದು ಅಮ್ಮನನ್ನು ನೋಡು’ ಎಂದಿದ್ದರು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಶಶಿಕುಮಾರ್ ಆಸ್ಪತ್ರೆಗೆ ಬಂದು ಫೋನ್ ಮಾಡಿದಾಗ ಶರತ್ ಕರೆಯನ್ನು ಸ್ವೀಕರಿಸಲಿಲ್ಲ.
ಇದನ್ನೂ ಓದಿ :ಮಂಗಳೂರು ಕಾರಾಗೃಹದಲ್ಲಿ ಹಲ್ಲೆ ಪ್ರಕರಣ : ಕೇರಂ ಬೋರ್ಡ್, ಟ್ಯೂಬ್ಲೈಟ್ನಿಂದ ಆಯುಧ ತಯಾರಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು