ನೀರು ಹಿತ-ಮಿತವಾಗಿ ಬಳಸಲು ಮನವಿ
Team Udayavani, Apr 26, 2021, 9:16 PM IST
ಯಾದಗಿರಿ : ಬಿರು ಬೇಸಿಗೆಯಲ್ಲಿ ಸಾರ್ವಜನಿಕರಿಗಾಗಿ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ. ಜನರು ನೀರನ್ನು ಪೋಲು ಮಾಡದೆ ಹಿತ-ಮಿತವಾಗಿ ಬಳಸಬೇಕು ಎಂದು ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್ ಹೇಳಿದರು.
ನಗರದ ಗಾಂಧಿ ವೃತ್ತದಲ್ಲಿ ಇತ್ತೀಚೆಗೆ ಇಲ್ಲಿನ ಬನ್ನಿಬಸವ ಸೇವಾ ಸಂಸ್ಥೆಯಿಂದ ನೀರಿನ ಅರವಟಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂತಹ ಅವಶ್ಯಕ ವ್ಯವಸ್ಥೆಯನ್ನು ಸಂಸ್ಥೆಯ ಯುವಕರು ಮಾಡಿದ್ದಾರೆ. ಬೇಸಿಗೆ ವೇಳೆ ಗ್ರಾಮೀಣ ಪ್ರದೇಶದಿಂದ ಆಗಮಿಸುವ ಜನರಿಗೆ ತಂಪಾದ ನೀರು ಒದಗಿಸುವುದು ಪುಣ್ಯದ ಕಾರ್ಯ ಎಂದರು. ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರ್ ಮಾತನಾಡಿ, ಒಳ್ಳೆಯ ಕಾರ್ಯಗಳನ್ನು ನಾವೆಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು. ಈ ಕಾರ್ಯ ಕೇವಲ ಬೇಸಿಗೆ 2 ತಿಂಗಳು ಅಲ್ಲದೆ ವರ್ಷಪೂರ್ತಿ ಬಳಕೆಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಸಂಘದ ಮುಖಂಡ ಬನದೇಶ ಎಕ್ಕಳ್ಳಿ, ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಇಂದುಧರ್ ಸಿನ್ನೂರ್, ಬನ್ನಿ ಬಸವ ಸಂಘದ ಅಧ್ಯಕ್ಷ ಜಗದೀಶ ಜಾಕಾ, ಅಂಬರೀಶ ಜಾಕಾ, ವೀರೇಶ್ ನಿಲುಗಿ, ರಾಜಶೇಖರ ಉಪ್ಪಿನ್, ಚೇತನ್ ಲದ್ದಿ, ವಿಶ್ವನಾಥ ಮದ್ದಿನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
MUST WATCH
ಹೊಸ ಸೇರ್ಪಡೆ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ