ಕೋವಿಡ್ ಮಹಾಮಾರಿಗೆ ನಿರ್ದೇಶಕ ತಮೀರ ಸಾವು
Team Udayavani, Apr 27, 2021, 1:33 PM IST
ಚೆನ್ನೈ: ಮಹಾಮಾರಿ ಕೋವಿಡ್ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ತಮಿಳು ಚಿತ್ರರಂಗದ ಹಿರಿಯ ಸಿನಿಮಾ ನಿರ್ದೇಶಕ ತಮೀರ ಸಾವನ್ನಪ್ಪಿದ್ದಾರೆ.
ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿನಿಂದ ನರಳುತ್ತಿದ್ದ ತಮೀರ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಫೇಮಸ್ ನಿರ್ದೇಶಕರುಗಳಾದ ಕೆ. ಬಾಲಚಂದೆರ್ ಹಾಗೂ ಭಾರತೀಯರಾಜಾ ಅವರ ಬಳಿ ಸಹಾಯಕ ನಿರ್ದೇಶಕರಾಗಿ ತಮೀರ ಕೆಲಸ ಮಾಡಿದ್ದರು. ತಮಿಳಿನ ‘ರೆಟ್ಟೈಸುಜಿ’ ಸಿನಿಮಾ ಮೂಲಕ ಫುಲ್ ಪ್ಲೆಡ್ಜ್ ನಿರ್ದೇಶಕರಾಗಿ ಬಡ್ತಿ ಪಡೆದರು. ಬೆಳ್ಳಿ ಪರದೆ ಮೇಲಿನ ಸಿನಿಮಾಗಳಷ್ಟೆ ಅಲ್ಲದೆ ವೆಬ್ ಸಿರಿಸ್ಗಳಿಗೂ ಇವರು ವರ್ಕ್ ಮಾಡಿದ್ದಾರೆ. ಇವರ ನಿರ್ದೇಶಿಸಿದ್ದ ‘ಪರ್ಫೆಕ್ಟ್ ಹಸ್ಬಂಡ್’ ವೆಬ್ ಸಿರಿಸ್ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಇನ್ನು ಕೋವಿಡ್ ಎರಡನೇ ಅಲೆಗೆ ಚಿತ್ರರಂಗದ ಕೆಲವರು ಬಲಿಯಾಗಿದ್ದಾರೆ. ಸೋಮವಾರವಷ್ಟೆ ಕನ್ನಡ ಚಿತ್ರದಲ್ಲಿ ಕೋಟಿ ನಿರ್ಮಾಪಕರೆಂದೆ ಖ್ಯಾತಿ ಪಡೆದ ರಾಮು ಅವರು ಕೋವಿಡ್ಗೆ ಬಲಿಯಾಗಿದ್ದಾರೆ. ಸ್ಯಾಂಡಲ್ವುಡ್ನ ಹಿರಿಯ ನಟಿ ಮಾಲಾಶ್ರೀಯವರ ಪತಿಯೂ ಆಗಿದ್ದ ರಾಮು, ಕೋವಿಡ್ ವಿರುದ್ಧ ಹೋರಾಟದಲ್ಲಿ ಸೋತು ಸಾವಿಗೆ ಶರಣಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?