ಜನತಾ ಕರ್ಫ್ಯೂ: ಧಾರವಾಡ ಜಿಲ್ಲೆಯಲ್ಲಿ ಜನತಾ ಕರ್ಫ್ಯೂಗೆ ಉತ್ತಮ ಸ್ಪಂದನೆ
Team Udayavani, Apr 28, 2021, 1:11 PM IST
ಧಾರವಾಡ: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಹೊರಡಿಸಿರುವ ಜನತಾ ಕರ್ಫ್ಯೂಗೆ ನಗರದಲ್ಲಿ ಬುಧವಾರ ಉತ್ತಮ ಸ್ಪಂದನೆ ಲಭಿಸಿದೆ.
ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ನೀಡಲಾಗಿದ್ದ ಅವಧಿಯಲ್ಲಿ ತೆರೆದಿದ್ದ ಅಂಗಡಿಗಳಿಂದ ಜನರು ಅಗತ್ಯ ವಸ್ತುಗಳನ್ನು ಖರೀದಿ ಮಾಡಿದರು. ಸೂಪರ್ ಮಾರುಕಟ್ಟೆ, ಸುಭಾಸ ರಸ್ತೆ ಸೇರಿದಂತೆ ವಿವಿದೆಡೆ ತೆರೆದಿದ್ದ ಅಂಗಡಿಗಳಿಂದ ಹಾಲು ಸೇರಿದಂತೆ ಅಗತ್ಯ ವಸ್ತುಗಳನ್ನು ಜನರು ಸರತಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಇನ್ನೂ ಹೊಸ ಎಪಿಎಂಸಿ ಆವರಣಕ್ಕೆ ಇಡೀ ಕಾಯಿಪಲ್ಯ ಮಾರುಕಟ್ಟೆ ಸ್ಥಳಾಂತರ ಮಾಡಿದ್ದು, ಇಲ್ಲಿ ಬೆಳಿಗ್ಗೆ 10 ಗಂಟೆವರೆಗೆ ಜನರು ಕಾಯಿಪಲ್ಯ ಖರೀದಿಸಿದರು. ಇದಾದ ಬಳಿಕ ಪೊಲೀಸರು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದರೆ, ಅಗತ್ಯ ವಸ್ತುಗಳ ಅಂಗಡಿಗಳನ್ನು ಮುಚ್ಚಿಸಿದರು.
ಇದನ್ನೂ ಓದಿ : ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ‘ಭರಾಟೆ’ ಬೆಡಗಿ ಶ್ರೀಲೀಲಾ
ಅನಗತ್ಯವಾಗಿ ಸಂಚರಿಸುವ ಜನರಿಗೆ ತಿಳಿ ಹೇಳಿ ಕಳುಹಿಸುವ ಕೆಲಸವನ್ನು ಪೊಲೀಸರು ಮಾಡಿದರು. ನಗರದ ಜ್ಯುಬಲಿ ಸರ್ಕಲ್, ಸುಭಾಸ ರಸ್ತೆ ಸೇರಿದಂತೆ ಪ್ರಮುಖ ರಸ್ತೆಯಲ್ಲಿ ಸಂಚಾರವಿಲ್ಲದೇ ಬಿಕೋ ಅನ್ನುತ್ತಿವೆ.
ಹುಬ್ಬಳ್ಳಿ ಮಹಾನಗರ ದಲ್ಲು ಕರ್ಪುಗೆ ಉತ್ತಮ ಸ್ಪಂದನೆ ಸಿಕ್ಕಿದೆ.ಇನ್ನೂ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಕರ್ಪೂಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಮಾಸ್ಕ್ ಧರಿಸಿ ಓಡಾಡುತ್ತಿದ್ದಾರೆ. ಅಷ್ಟೇಯಲ್ಲ ಗ್ರಾಮ ಪಂಚಾಯತಿ ಗಳು ಸಹ ಈ ವಿಚಾರದಲ್ಲಿ ಗಂಭೀರವಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ