ಅಂತ್ಯಕ್ರಿಯೆಗೆ ಗ್ರಾಮಸ್ಥರ ವಿರೋಧ : ಸೈಕಲ್ ಮೇಲೆ ಪತ್ನಿ ಶವ ಹೊತ್ತು ಊರೆಲ್ಲ ತಿರುಗಿದ ವೃದ್ಧ
Team Udayavani, Apr 28, 2021, 3:29 PM IST
ಉತ್ತರ ಪ್ರದೇಶ: ಪಾಪಿ ಕೋವಿಡ್ ಸೋಂಕು ಜನರ ಪ್ರಾಣದ ಜೊತೆಗೆ ಮಾನವೀಯತೆಯನ್ನು ಕಿತ್ತುಕೊಳ್ಳುತ್ತಿದೆ. ಕೋವಿಡ್ ಮಹಾಮಾರಿಗೆ ಭಯಪಟ್ಟು ಒಬ್ಬರಿಗೊಬ್ಬರು ಸಹಾಯ ಮಾಡದಂತಹ ಪರಿಸ್ಥಿತಿಗೆ ಜನರು ಬಂದು ತಲುಪಿದ್ದಾರೆ. ಇದೀಗ ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆಯೊಂದು ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ.
ಅಂತ್ಯ ಸಂಸ್ಕಾರಕ್ಕಾಗಿ ತನ್ನ ಮಡದಿಯ ಶವವನ್ನು ವೃದ್ಧನೋರ್ವ ಸೈಕಲಿನಲ್ಲಿ ಹೊತ್ತು ಇಡೀ ಊರು ತಿರುಗಾಡಿದ ಮನಕಲಕುವಂತಹ ಘಟನೆ ಉತ್ತರ ಪ್ರದೇಶದ ಜೌನಪುರ್ ಜಿಲ್ಲೆಯ ಅಂಬೆರಪುರ ಗ್ರಾಮದಲ್ಲಿ ನಡೆದಿದೆ. ವಯಸ್ಸಾದ ತಿಲಕಧರಿ ಸಿಂಗ್ ಅವರಿಗೆ ಹೆಂಡತಿ ಕಳೆದುಕೊಂಡ ದುಃಖ ಒಂದು ಕಡೆಯಾದರೆ, ಆಕೆಯ ಅಂತ್ಯ ಸಂಸ್ಕಾರಕ್ಕೆ ಹಳ್ಳಿ ಜನ ಅವಕಾಶ ನೀಡದಿದ್ದದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ತಿಲಕಧರಿ ಅವರ ಪತ್ನಿ 50 ವರ್ಷದ ರಾಜಕುಮಾರಿ ಅವರ ಸ್ಥಿತಿ ಸೋಮವಾರ ತೀವ್ರ ಬಿಗಡಾಯಿಸಿತ್ತು. ಕೂಡಲೇ ಆಕೆಯನ್ನು ಉಮಾನಾಥ್ ಸಿಂಗ್ ಹೆಸರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಳು.
ಆಸ್ಪತ್ರೆಯಲ್ಲಿ ಆ್ಯಂಬುಲೆನ್ಸ್ ಸಿಗದ ಹಿನ್ನೆಲೆ ತಿಲಕ್ ಧರಿ ತನ್ನ ಪತ್ನಿಯ ಶವವನ್ನು ಸೈಕಲ್ ಮೇಲೆ ತನ್ನೂರಿಗೆ ತಂದಿದ್ದ. ಆದರೆ, ಊರಿನ ಜನ ಮೃತ ದೇಹದ ಅಂತ್ಯ ಸಂಸ್ಕಾರಕ್ಕೆ ಅನುಮತಿ ನೀಡಿಲ್ಲ. ಆಕೆ ಕೋವಿಡ್ನಿಂದ ಮೃತ ಪಟ್ಟಿರಬಹುದೆಂದು ಶಂಕಿಸಿದ ಗ್ರಾಮಸ್ಥರು, ಹೆಣ ಹೂಳಲು ವಿರೋಧ ವ್ಯಕ್ತಪಡಿಸಿದ್ದಾರೆ.
ಹೆಂಡತಿಯ ಶವ ಸೈಕಲ್ ಮೇಲೆ ಇಟ್ಟುಕೊಂಡು ಇಡೀ ಊರು ಸುತ್ತಿದ ವೃದ್ಧನಿಗೆ ಯಾರೋಬ್ಬರು ಸಹಾಯ ಮಾಡಿಲ್ಲ. ಕೊನೆಗೆ ನಡುರಸ್ತೆಯಲ್ಲಿಯೇ ಸೈಕಲ್ ಹಾಗೂ ಶವ ಬಿಟ್ಟು ದಿಕ್ಕು ತೋಚದಂತೆ ತಿಲಕಧರಿ ಕುಳಿತು ಬಿಟ್ಟಿದ್ದ. ಆತನ ದುಸ್ಥಿತಿಯ ಫೋಟೊಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಎಲ್ಲರ ಕಣ್ಣಾಲಿಗೆಗಳನ್ನು ತೇವಗೊಳಿಸುತ್ತಿವೆ.
ಕೊನೆಗೆ ಜೌನಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧನಿಗೆ ಸಹಾಯ ಮಾಡಿದ್ದಾರೆ. ಪೊಲೀಸರೆ ಮುಂದೆ ನಿಂತು ಶವಕ್ಕೆ ಅಂತಿಮ ವಿಧಿ ವಿಧಾನ ನೆರವೇರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು