ಕೋವಿಡ್ ಎರಡನೇ ಅಲೆ ಭೀತಿ : ಲಾಕ್ ಡೌನ್ ಗೆ ಕಾಪು ಸ್ತಬ್ಧ
ಜನಸಂಚಾರ ನಿಯಂತ್ರಿಸಲು ರಸ್ತೆಗಿಳಿದ ಪೊಲೀಸರು
Team Udayavani, Apr 28, 2021, 4:07 PM IST
ಕಾಪು: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಘೋಷಿಸಿರುವ ಹದಿನಾಲ್ಕು ದಿನಗಳ ಲಾಕ್ ಡೌನ್ ಗೆ ಕಾಪುವಿನಲ್ಲಿ ಪೂರಕ ಸ್ಪಂಧನೆ ದೊರಕಿದೆ.
ಸರಕಾರದ ಆದೇಶದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತವು ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೊಳಿಸಿದ್ದು, ಅದರಂತೆ ಬೆಳಗ್ಗೆ10 ಗಂಟೆಯವರೆಗೆ ಬಿರುಸಿನ ವ್ಯಾಪಾರ ನಡೆಯಿತು.
ಅವಶ್ಯಕ ವಸ್ತುಗಳೂ ಸೇರಿದಂತೆ ದಿನಸಿ, ತರಕಾರಿ, ಹಣ್ಣು ಹಂಪಲು, ಹಾಲು ಸಹಿತವಾಗಿ ಇತರೇ ವಸ್ತುಗಳ ಖರೀದಿಗಾಗಿ ಜನ ಬೆಳಗ್ಗಿನಿಂದಲೇ ಪೇಟೆಯಲ್ಲಿ ಸಂಚಾರ ನಡೆಸುತ್ತಿದ್ದರು.
ಪ್ರಥಮ ದಿನವಾದ ಬುಧವಾರ ಬೆಳಗ್ಗೆ 10 ಗಂಟೆಯ ಒಳಗೆ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸುವಂತೆ ಪೊಲೀಸರು ಆಗಾಗ ಎಚ್ಚರಿಕೆ ನೀಡುತ್ತಿರುವುದು ಕಂಡು ಬಂದಿದೆ.
ರಸ್ತೆಗಿಳಿದ ಪೊಲೀಸರು :
ಬೆಳಗ್ಗೆ 10 ಗಂಟೆಯ ಬಳಿಕವೂ ಅನಾವಶ್ಯಕವಾಗಿ ತಿರುಗಾಡುತ್ತಿದ್ದವರನ್ನು ಕಾಪು ಪೊಲೀಸರು ತಡೆದು ನಿಲ್ಲಿಸಿ ವಿಚಾರಣೆಗೊಳಪಡಿಸುತ್ತಿರುವುದು ಕಂಡು ಬಂದಿದೆ. ನಾಳೆಯಿಂದಲೂ ಇದೇ ರೀತಿಯಲ್ಲಿ ಸಂಚರಿಸುತ್ತಿರವುದನ್ನು ಕಂಡರೆ ಕೇಸ್ ಹಾಕಿ, ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಬ್ಯಾಂಕ್ ಗಳಿಗೆ ಹೋಗುವವರಿಗೂ ತೊಂದರೆ :
ಕೋವಿಡ್ ಎರಡನೇ ಅಲೆ ಭೀತಿಯಿಂದಾಗಿ ಲಾಕ್ ಡೌನ್ ಹೇರಲಾಗಿದ್ದು, ಬ್ಯಾಂಕ್ ಗಳು ಮಧ್ಯಾಹ್ನದವರೆಗೆ ಕಾರ್ಯ ನಿರ್ವಹಿಸುತ್ತಿವೆ. ಬೆಳಗ್ಗೆ 10 ಗಂಟೆಯ ನಂತರ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ಬ್ಯಾಂಕ್ ಗಳಿಗೆ ಆಮಿಸುವ ಗ್ರಾಹಕರಿಗೆ ತೊಂದರೆಯುಂಟಾಗುತ್ತಿದ್ದು, ಜನರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಕೂಡಾ ಈ ವಿಚಾರದಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
MUST WATCH
ಹೊಸ ಸೇರ್ಪಡೆ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
Kollywood: ಕಮಲ್ ಹಾಸನ್ ʼಥಗ್ ಲೈಫ್ʼ ಅಖಾಡಕ್ಕೆ ಬಾಲಿವುಡ್ನ ಖ್ಯಾತ ನಟರು ಎಂಟ್ರಿ?
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ