ಅಗತ್ಯ ವಸ್ತು-ದಿನಬಳಕೆ ಸಾಮಗ್ರಿ ಮುಗಿಬಿದ್ದು ಖರೀದಿ


Team Udayavani, Apr 28, 2021, 4:43 PM IST

oioui

ಹಾವೇರಿ: ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ 14 ದಿನಗಳ ಕಾಲ ಕೊರೊನಾ ಕರ್ಫ್ಯೂ ಜಾರಿಗೊಳಿಸಿರುವುದರಿಂದ ಆತಂಕಕ್ಕೆ ಒಳಗಾಗಿರುವ ಜನತೆ ಮಂಗಳವಾರ ಅಗತ್ಯ ವಸ್ತು, ದಿನಬಳಕೆ ಸಾಮಗ್ರಿಗಳನ್ನು ಮುಗಿಬಿದ್ದು ಖರೀದಿಸಿದರು.

ಬೆಳಗ್ಗೆ 10ರ ವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶವಿದ್ದರೂ ಜನರ ಓಡಾಟ ಎಂದಿಗಿಂತ ಹೆಚ್ಚಿತ್ತು. ಇನ್ನು 14 ದಿನಗಳ ಕಾಲ ನಿತ್ಯವೂ ಬೆಳಗ್ಗೆ 4ಕ್ಕೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದರೂ ಜನರು ಅದನ್ನು ಲೆಕ್ಕಿಸದೇ, ಕೊರೊನಾ ಹರಡುತ್ತಿರುವುದನ್ನೂ ಲೆಕ್ಕಿಸದೇ ನಗರಕ್ಕೆ ಆಗಮಿಸಿ ಖರೀದಿಯಲ್ಲಿ ತೊಡಗಿದ ದೃಶ್ಯ ಕಂಡುಬಂತು.

ಮದುವೆ, ಗೃಹಪ್ರವೇಶ ಇನ್ನಿತರ ಸಮಾರಂಭ ನಿಗದಿ ಮಾಡಿಕೊಂಡಿರುವವರು ಇನ್ನು ಮೇಲೆ ಖರೀದಿಗೆ ಅವಕಾಶ ಸಿಗುವುದಿಲ್ಲ ಎಂಬ ಕಾರಣಕ್ಕೆ ದಿನಸಿ, ಕಾಳುಕಡಿ ಖರೀದಿ ನಡೆಸಿದರು. ಬಟ್ಟೆ ಅಂಗಡಿಗಳಲ್ಲಿ ಬಾಗಿಲು ಹಾಕಿಕೊಂಡೇ ಜವಳಿ ವ್ಯಾಪಾರ ನಡೆಸಿದರು. ಜ್ಯುವೆಲ್ಲರಿ ಅಂಗಡಿಗಳಲ್ಲೂ ಬಾಗಿಲು ಹಾಕಿಕೊಂಡು ವ್ಯವಹಾರ ನಡೆಸಲಾಯಿತು.

ಮದುವೆ ನಿಗದಿ ಮಾಡಿಕೊಂಡವರು ಹಿಂದೆ ಮುಂದೆ ನೋಡದೇ ರೆಡಿ ಇರುವ ಚಿನ್ನಾಭರಣಗಳನ್ನೇ ಖರೀದಿಸಿದರು. ಮದ್ಯದ ಅಂಗಡಿಗಳಲ್ಲೂ ತುಸು ಹೆಚ್ಚೇ ವ್ಯಾಪಾರ ನಡೆಯಿತು. ಇಲ್ಲೆಲ್ಲಾ ಸಾಮಾಜಿಕ ಅಂತರವೇ ಮಾಯವಾಗಿತ್ತು. ವ್ಯಾಪಾರಸ್ಥರು ಕೋವಿಡ್‌ ಮಾರ್ಗಸೂಚಿ ಅನುಸರಿಸದೇ ವ್ಯಾಪಾರದಲ್ಲೇ ಮುಳುಗಿದ್ದರು. ಇದರಿಂದ ನಗರ ಪ್ರದೇಶದಲ್ಲಿ ಕರ್ಫ್ಯೂ ಇದ್ದರೂ ಲೆಕ್ಕಿಸದೇ ಜನರ ಓಡಾಟ ಕಂಡು ಬಂದಿತು.

ಕೋವಿಡ್‌ ನಿಯಮ ಪಾಲನೆಯಲ್ಲಿ ನಿರ್ಲಕ್ಷ್ಯ: ಮಂಗಳವಾರ ರಾತ್ರಿಯಿಂದಲೇ ಕೊರೊನಾ ಕರ್ಫ್ಯೂ ಆರಂಭಗೊಳ್ಳುತ್ತಿರುವುದರಿಂದ ಅಗತ್ಯ ವಸ್ತುಗಳನ್ನು ಕೊಳ್ಳಲು ಬಸ್‌ ಮೂಲಕ ಆಗಮಿಸಿದ್ದರು. ಅಲ್ಲದೇ ಬೇರೆ ಊರುಗಳಲ್ಲಿ ಕೆಲಸ ಮಾಡುತ್ತಿದ್ದವರು ಧಾವಂತದಲ್ಲೇ ಊರಿಗೆ ವಾಪಸ್ಸಾಗಲು ವಿವಿಧೆಡೆಯಿಂದ ಬಸ್‌ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದರು. ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿನ ತಾತ್ಕಾಲಿಕ ತರಕಾರಿ ಮಾರುಕಟ್ಟೆಯಲ್ಲೂ ಜನರು ಮುಗಿಬಿದ್ದು ಕಾಯಿಪಲ್ಲೆ ಖರೀದಿಸಿದರು.

ಮಹಾನಗರಗಳಿಂದ ಬರುತ್ತಿದ್ದಾರೆ ಜನ: ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಮಹಾನಗರಗಳಿಗೆ ದುಡಿಯಲು ಹೋಗಿದ್ದವರು ಮರಳಿ ತಮ್ಮ ಗ್ರಾಮಗಳಿಗೆ ಆಗಮಿಸುತ್ತಿರುವುದು ಕಂಡು ಬರುತ್ತಿದೆ. ಬೆಂಗಳೂರು ಕಡೆಯಿಂದ ಬರುವ ರೈಲ್‌ನಲ್ಲಿ ಗಂಟು ಮೂಟೆ ಕಟ್ಟಿಕೊಂಡು ನೂರಾರು ಜನರು ಆಗಮಿಸಿದರು. ನಂತರ ಬಸ್‌ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ತಮ್ಮೂರ ಕಡೆ ತೆರಳಿದರು. ಖಾಸಗಿ ವಾಹನಗಳ ಓಡಾಟವೂ ತುಸು ಹೆಚ್ಚೇ ಇತ್ತು.

ಕೃಷಿ ಪರಿಕರಗಳ ಖರೀದಿ, ಬೀಜ ಗೊಬ್ಬರ ಖರೀದಿ, ಮಳೆಗಾಲಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಜನತೆ, ಕಟ್ಟಡ ಇನ್ನಿತರ ನಿರ್ಮಾಣ ಕಾಮಗಾರಿಗೆ ಬೇಕಾದ ಸಿಮೆಂಟ್‌, ಕಬ್ಬಿಣ ಖರೀದಿಯೂ ಜೋರಾಗಿತ್ತು. ಇನ್ನು ಎರಡು ವಾರ ಏನೂ ಸಿಗಲ್ಲ ಎಂಬ ಆತಂಕ ಎಲ್ಲರಲ್ಲಿ ಕಂಡು ಬಂದಿತು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.