ಬ್ಯಾಂಕಾಕ್‌ ನಿಂದ ಜಮ್‌ ನಗರ್‌ ಗೆ 3 ಆಮ್ಲಜನಕ ಟ್ಯಾಂಕರ್ ಗಳನ್ನು ತಲುಪಿಸಿದ ಐಎಎಫ್


Team Udayavani, Apr 28, 2021, 4:52 PM IST

IAF airlifts 3 oxygen tankers from Bangkok to Jamnagar

ನವ ದೆಹಲಿ : ಕೋವಿಡ್ ನಿಂದ ತತ್ತರಿಸಿ ಹೋಗಿರುವ ಭಾರತಕ್ಕೆ ವಿದೇಶಗಳು ನೆರವಿನ ಹಸ್ತ ಚಾಚುತ್ತಿವೆ. ಈಗ ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ, ಭಾರತೀಯ ವಾಯುಪಡೆ (ಐ ಎ ಎಫ್) ಮೂರು ಆಮ್ಲಜನಕ ಟ್ಯಾಂಕರ್‌ ಗಳನ್ನು ಥೈಲ್ಯಾಂಡ್‌ ನ ಬ್ಯಾಂಕಾಕ್‌ ನಿಂದ ಗುಜರಾತ್‌ ನ ಜಮ್‌ ನಗರ್‌ ಗೆ ಬುಧವಾರ(ಏ. 28) ತಲುಪಿಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ, ಸಿಂಗಾಪುರ್ ವಾಯುಪಡೆಯ ಎರಡು ಸಿ -130 ವಿಮಾನಗಳು ಒಟ್ಟು 256 ಆಮ್ಲಜನಕ ಸಿಲಿಂಡರ್‌ ಗಳನ್ನು ಪಶ್ಚಿಮ ಬಂಗಾಳದ ಪನಗರ್ ವಾಯುನೆಲೆಗೆ ತಲುಪಿಸಿವೆ ಎಂದು ಅವರು ಹೇಳಿದ್ದಾರೆ.

ಓದಿ : ಕೋವಿಡ್ 19 ವಿರುದ್ಧ ಹೋರಾಟ; ಭಾರತಕ್ಕೆ 10 ಮಿಲಿಯನ್ ಡಾಲರ್ ನೆರವು ಘೋಷಿಸಿದ ಕೆನಡಾ

ಮೆಡಿಕಲ್ ಆಕ್ಸಿಜನ್ ಮತ್ತು ಹಾಸಿಗೆಗಳ ಕೊರತೆಯಿಂದಾಗಿ ದೇಶದ ಹಲವಾರು ರಾಜ್ಯಗಳ ಆಸ್ಪತ್ರೆಗಳು ತತ್ತರಿಸುತ್ತಿರುವುದರಿಂದ ಭಾರತವು ಕೋವಿಡ್  ಸೋಂಕಿನ ಎರಡನೇ  ಅಲೆಯೊಂದಿಗೆ ಹೋರಾಡುತ್ತಿದೆ.

ಮಂಗಳವಾರ, ಐಎಎಫ್ ದುಬೈ ಮತ್ತು ಸಿಂಗಾಪುರದಿಂದ ಒಂಬತ್ತು ಕ್ರಯೋಜೆನಿಕ್ ಆಮ್ಲಜನಕ ಟ್ಯಾಂಕರ್‌ ಗಳನ್ನು ವಿಮಾನದಲ್ಲಿ ಪನಗರ್ ಗೆ ತಲುಪಿತ್ತು.

ಆಕ್ಸಿಜನ್ ಟ್ಯಾಂಕರ್‌ ಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವಲ್ಲಿ  ಐಎಎಫ್ ಕಾರ್ಯ ನಿರ್ವಹಿಸುತ್ತಿದೆ. ಆಗ್ರಾ, ಹಿಂಡನ್, ಭೋಪಾಲ್ ಮತ್ತು ಚಂಡೀಗಡದಿಂದ ತಲಾ ಒಂದು ಹಾಗೂ ರಾಂಚಿಗೆ ನಾಲ್ಕು ಆಮ್ಲಜನಕ ಟ್ಯಾಂಕರ್‌ ಗಳನ್ನು ತಲುಪಿಸಲು ಅದು ತನ್ನ ಸಿ -17 ವಿಮಾನವನ್ನು ಬಳಸಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ  ಪಿಟಿಐ ವರದಿ ಮಾಡಿದೆ.

ಇಂದೋರ್‌ನಿಂದ ರಾಯಪುರಕ್ಕೆ ಮತ್ತು ಭೋಪಾಲ್‌ನಿಂದ ಸೂರತ್‌ ಗೆ ತಲಾ ಎರಡು ಆಮ್ಲಜನಕ ಟ್ಯಾಂಕರ್‌ ಗಳನ್ನು ಸಾಗಿಸಲು ಮತ್ತೊಂದು ಸಿ -17 ವಿಮಾನವನ್ನು ಬಳಸಲಾಗಿದೆ. ಎರಡು ಆಮ್ಲಜನಕ ಟ್ಯಾಂಕರ್‌ ಗಳನ್ನು ಐ ಎ ಎಫ್ ಜೋಧಪುರದಿಂದ ಜಮ್ ನಗರಕ್ಕೆ ಸಾಗಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ : ಪರೀಕ್ಷೆ  ನಡೆಯದೇ ಮುಂದಿನ ಪಾಠ! ರಾಣಿ ಚನ್ನಮ್ಮ ವಿವಿಯಿಂದ ಗೊಂದಲ !

ಇನ್ನು, ಮತ್ತೊಂದು ಸಿ -17 ವಿಮಾನವು ತಲಾ ನಾಲ್ಕು ಆಮ್ಲಜನಕ ಟ್ಯಾಂಕರ್‌ ಗಳನ್ನು ಇಂದೋರ್‌ ನಿಂದ ಜಮ್‌ ನಗರ್‌ ಗೆ ಮತ್ತು ಗ್ವಾಲಿಯರ್‌ ನಿಂದ ರಾಂಚಿಗೆ ತಲುಪಿಸಲಿದೆ.

ಮಂಗಳವಾರ, ಐ ಎ ಎಫ್ ಎಂಟು ಕ್ರಯೊಜೆನಿಕ್ ಆಮ್ಲಜನಕ ಸಿಲಿಂಡರ್ ಗಳನ್ನು ಹೈದರಾ ಬಾದ್‌ ನಿಂದ ಭುವನೇಶ್ವರಕ್ಕೆ, ಎರಡು ಭೋಪಾಲ್‌ ನಿಂದ ರಾಂಚಿಗೆ ಮತ್ತು ಎರಡು ಚಂಡೀಗಡದಿಂದ ರಾಂಚಿಗೆ ತಲುಪಿಸಲಾಗಿತ್ತು.

ದೇಶದಲ್ಲಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಸಿ – 17 ವಿಮಾನಗಳು ಕಳೆದ ಕೆಲವು ದಿನಗಳಿಂದ ದೇಶದಲ್ಲಿನ ಆಕ್ಸಿಜನ್ ತುಂಬಿಸುವ ಕೇಂದ್ರಗಳಿಂದ ಅಗತ್ಯವಿರುವಲ್ಲಿಗೆ ಪೂರೈಸುತ್ತಿದೆ ಎಂದು ವರದಿಯಾಗಿದೆ.

ಭಾರತದಲ್ಲಿ ಕಳೆದ ಒಂದು ದಿನದಲ್ಲಿ 3,60,960 ಹೊಸ ಕೋವಿಡ್  ಪ್ರಕರಣಗಳ ದಾಖಲೆ ಕಂಡಿದ್ದು ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,79,97,267 ಕ್ಕೆ ತಲುಪಿದೆ. ಇನ್ನು, ಕೋವಿಡ್ ಕಾರಣದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಎರಡು ಲಕ್ಷ ದಾಟಿದ್ದು, 3,293 ಸಾವುಗಳು ಕಳೆದ ಇಪ್ಪತ್ತ ನಾಲ್ಕುಗಳಲ್ಲಿ ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

 ಓದಿ : ಲಾಕ್ ಡೌನ್ ನಿಯಮ ಕಟ್ಟು ನಿಟ್ಟಾಗಿ ಜಿಲ್ಲೆಯಾದ್ಯಂತ ಜಾರಿಯಾಗಬೇಕು : ಸಚಿವ ಬಿ.ಎ.ಬಸವರಾಜ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.