ಲಾರಿ ಚಾಲಕ ಈಗ ಹಾಲು ಉತ್ಪಾದಕ


Team Udayavani, Apr 28, 2021, 7:37 PM IST

inspirational story

ಚಿಕ್ಕನಾಯಕನಹಳ್ಳಿ: ಆಲ್‌ ಇಂಡಿಯಾಗೂಡ್ಸ್‌ ಲಾರಿ ಚಾಲಕನಾಗಿ ರಾಜ್ಯಗಳನ್ನು ಸುತ್ತುತ್ತಿದ್ದ ಗೌತಮ್‌, ಈಗ ತಮ್ಮ ತೋಟದಲ್ಲಿ 8 ಹಸು ಸಾಕಿಕೊಂಡು ಹೈನುಗಾರಿಕೆ ಮಾಡುತ್ತಿದ್ದಾರೆ.

ಡ್ರೈವಿಂಗ್‌ ಬ್ರೇಕ್‌ ಹಾಕಿ ಪ್ರತಿನಿತ್ಯ 100ಕ್ಕೂ ಅಧಿಕ ಲೀ. ಹಾಲು ಉತ್ಪಾದನೆ ಮಾಡುತ್ತಿದ್ದು, ಸಾವಿರಾರು ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ. 2015ರಲ್ಲಿ ಹೈನುಗಾರಿಕೆ ಮಾಡಿ ಕೊಂಡು ಸುಖ ಜೀವನ ನಡೆಸುತ್ತಿದ್ದ ಚಿಕನಾ‌ಯಕನಹಳ್ಳಿಪಟ್ಟಣದ ಗೌತಮ್‌, ತಾಲೂಕಿನಲ್ಲಿ ಭೀಕರ ಬರಗಾಲದಿಂದ ತೋಟದಲ್ಲಿದ್ದ ಬೋರ್‌ವೆಲ್‌ಗಳು ನೀರಿಲ್ಲದೆ ಬತ್ತಿ ಹೋದವು.

ಹೈನುಗಾರಿಕೆಯಲ್ಲಿ ದುಡಿದ ಹಣ ಕೊಳವೆ ಬಾವಿಕೊರೆಯಲು ವಿನಿಯೋಗಿಸಿ ಕೈಸುಟ್ಟು ಕೊಂಡು, ಬೆಂಗ ಳೂರಿನಲ್ಲಿ ಟಿಟಿ ಚಾಲಕನಾಗಿ ನಂತರ 2018ರಲ್ಲಿ ಆಲ್‌ ಇಂಡಿಯಾ ಗೂಡ್ಸ್‌ ಲಾರಿಚಾಲಕನಾಗಿ ಪ್ರತಿ ತಿಂಗಳು 30 ಸಾವಿರ ರೂ.ಸಂಬಳ ಪಡೆಯುತ್ತಿದ್ದರು. ಖರ್ಚು ಕಳೆದು ಕನಿಷ್ಠ 15ರಿಂದ 18 ಸಾವಿರರೂ. ಹಣ ಉಳಿತಾಯ ಮಾಡುತ್ತಿ ದ್ದರು.ಆದರೂ ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಗುತ್ತಿರಲಿಲ್ಲ.ಕಳೆದ ವರ್ಷ 2020ರಲ್ಲಿ ಲಾಕ್‌ಡೌನ್‌ನಿಂದಲಾರಿಗಳು ಲಾಕ್‌ ಆದವು. ಅನಿವಾರ್ಯವಾಗಿ ಊರಿಗೆ ಬರಬೇಕಾದ ಪರಿಸ್ಥಿತಿ ಉಂಟಾಯಿತು.

ತಂದೆಯ ಸಹಕಾರ: ಚಿಕ್ಕನಾಯಕನ ಹಳ್ಳಿಗೆಬಂದ ಗೌತಮ್‌ ತನ್ನ 8 ಎಕರೆ ತೋಟದಲ್ಲಿ ಏನಾದರೂ ಮಾಡಬೇಕು ನಮ್ಮ ಊರಿನಲ್ಲಿಯೇ ದುಡಿಯಬೇಕು ಎಂಬ ಛಲಕ್ಕೆ ನಿಂತ, ಹೈನುಗಾರಿಕೆಯಲ್ಲಿ ಅನುಭವವಿದ್ದ ಕಾರಣ ತಾಲೂಕಿನಲ್ಲಿ ಈ ವರ್ಷ ಉತ್ತಮ ಮಳೆಯೂ ಆಗಿದ್ದರಿಂದ ತೋಟದ ಬೋರ್‌ವೆಲ್‌ನಲ್ಲಿ ನೀರು ಬರುತ್ತಿತ್ತು. ಇದನ್ನುಸದುಪಯೋಗಪಡಿಸಿಕೊಂಡ ಗೌತಮ್‌, ತನ್ನತಂದೆಯ ಸಹಕಾರದಿಂದ 8 ಹಸು ಖರೀದಿಮಾಡಿ ಹೈನುಗಾರಿಕೆ ಪ್ರಾರಂಭ ಮಾಡಿದ್ದಾರೆ.

ತಿಂಗಳಿಗೆ 45 ಸಾವಿರ ರೂ.ಸಂಪಾದನೆ

8 ಹಸುಗಳ ಪೈಕಿ ಆರು 6 ಹಸು ಹಾಲು ನೀಡುತ್ತಿದ್ದು, ಇವುಗಳಲ್ಲಿ ಒಂದು ದಿನಕ್ಕೆ 100 ಲೀ.ಹಾಲು ಉತ್ಪಾದನೆ ಆಗುತ್ತಿದೆ. ಇದರಿಂದ ಪ್ರತಿನಿತ್ಯ 2,500 ರೂ.ಹಣ ಸಿಗುತ್ತಿದೆ.

ಹಸುಗಳ ಖಚ್ಚು ವೆಚ್ಚ ಕಳೆದು ತಿಂಗಳಿಗೆ 40 ರಿಂದ 45 ಸಾವಿರ ರೂ.ಹಣ ಉಳಿಯುತ್ತಿದೆ. ಕೆಲವೇ ದಿನಗಳಲ್ಲಿ ಇನ್ನು 3 ಹಸು ಕರು ಹಾಕಲಿದ್ದು, ಒಟ್ಟು ಸೇರಿ ಪ್ರತಿದಿನ 140 ಲೀ. ಹಾಲು ಸಿಗುತ್ತದೆ. ಇವುಗಳಿಂದ ತಿಂಗಳಿಗೆ 50 ಸಾವಿರ ರೂ. ಹಣ ಉಳಿಸಬಹುದು ಎನ್ನುತ್ತಾರೆ ಗೌತಮ್‌.

ಚೇತನ್‌

ಟಾಪ್ ನ್ಯೂಸ್

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.