ಕೋವಿಡ್ ಆರ್ಥಿಕ ಪ್ಯಾಕೇಜ್ ಘೋಷಿಸಿ
Team Udayavani, Apr 29, 2021, 3:10 PM IST
ಕೋಲಾರ: ಕೋವಿಡ್ ಆರ್ಥಿಕಪ್ಯಾಕೇಜ್ ಘೋಷಣೆ ಮಾಡುವಜೊತೆಗೆ ಸೋಂಕಿತರು ಇರುವಆಸ್ಪತ್ರೆಗಳಿಗೆ ಮೂಲ ಸೌಕರ್ಯ ಒದಗಿಸಿ,ಮೃತಪಟ್ಟ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ನೀಡಬೇಕೆಂದು ಒತ್ತಾಯಿಸಿರೈತ ಸಂಘದಿಂದ ಉಪ ಮುಖ್ಯಮಂತ್ರಿಅಶ್ವತ್ಥನಾರಾಯಣಗೆ ಮನವಿಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷಕೆ.ನಾರಾಯಣಗೌಡ, ದೇವರು ವರಕೊಟ್ಟರೂ ಪೂಜಾರಿ ನೀಡಲಿಲ್ಲ ಎಂಬಗಾದೆಯಂತೆ ಜಿಲ್ಲಾಸ್ಪತ್ರೆಯಲ್ಲಿವೆಂಟಿಲೇಟರ್, ಆಕ್ಸಿಜನ್ ಅಲ್ಪಮಟ್ಟಿಗೆಇದ್ದರೂ ಅದನ್ನು ಸಮರ್ಪಕವಾಗಿನಿರ್ವಹಣೆ ಮಾಡಲು ಸಿಬ್ಬಂದಿಕೊರತೆಯಿಂದ ಜಿಲ್ಲಾಸ್ಪತ್ರೆ ಕೊರೊನಾಯಮನ ಆಸ್ಪತ್ರೆಯಾಗಿ ಮಾರ್ಪಟ್ಟಿದೆಎಂದು ದೂರಿದರು.
ಸಂಘದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿಮಂಜುನಾಥ್ ಮಾತನಾಡಿ, 14 ಕಠಿಣಕರ್ಫ್ಯೂ ಜಾರಿ ಮಾಡಿದ್ದು ಸರಿ ಇದೆ.ಆದರೆ, ದುಡಿಯುವ ಕೈಗಳಿಗೆಕೆಲಸವಿಲ್ಲ. ಬೆಳೆದ ಬೆಳೆಗಳಿಗೆಬೆಲೆಯಿಲ್ಲ, ಕಂಗಾಲಾಗಿರುವ ರೈತಕೂಲಿ ಕಾರ್ಮಿಕರ ಕುಟುಂಬ ನಿರ್ವಹಣೆಗೆ ಸರ್ಕಾರ 10 ಸಾವಿರ ರೂ.ಮಾಸಿಕ ವೇತನ ನೀಡಬೇಕು,ಕೊರೊನಾ ಆರ್ಥಿಕ ಪ್ಯಾಕೇಜ್ಘೋಷಣೆ ಮಾಡಬೇಕು ಎಂದುಆಗ್ರಹಿಸಿದರು.
ಮನವಿ ಸ್ವೀಕರಿಸಿಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಕೊರೊನಾ ಸೋಂಕಿತರಿಗೆಆಕ್ಸಿಜನ್, ವೆಂಟಿ ಲೇಟರ್, ಬೆಡ್ಗಳಕೊರತೆಯಿಲ್ಲ. ಮುಂದಿನ ದಿನಗಳಲ್ಲಿಸಾವಿನ ಪ್ರಮಾಣ ಕಡಿಮೆ ಮಾಡಲುಎಲ್ಲಾ ಕ್ರಮಕೈಗೊಳ್ಳಲಾಗುವುದಾಗಿಭರವಸೆ ನೀಡಿದರು. ಮಹಿಳಾ ಘಟಕದಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ತಾಲೂಕುಅಧ್ಯಕ್ಷ ಈಕಂಬಳ್ಳಿ ಮಂಜುನಾಥ್,ಮಂಗಸಂದ್ರ ನಾಗೇಶ್, ವಡಗೂರುಮಂಜುನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ