ಪೃಥ್ವಿ ಶಾ ಬೌಂಡರಿಗೆ ಬೆಚ್ಚಿದ ಕೆಕೆಆರ್‌


Team Udayavani, Apr 29, 2021, 11:17 PM IST

ಪೃಥ್ವಿ ಶಾ ಬೌಂಡರಿಗೆ ಬೆಚ್ಚಿದ ಕೆಕೆಆರ್‌

ಅಹ್ಮದಾಬಾದ್‌: ಶಿವಂ ಮಾವಿ ಅವರ ಮೊದಲ ಓವರಿನಲ್ಲೇ ಸತತ 6 ಬೌಂಡರಿ ಬಾರಿಸಿ ಡೆಲ್ಲಿಯ ಚೇಸಿಂಗ್‌ಗೆ ಜೋಶ್‌ ತಂದಿತ್ತ ಪೃಥ್ವಿ ಶಾ ಕೆಕೆಆರ್‌ಗೆ ಐದನೇ ಸೋಲಿನ ಬರೆ ಎಳೆದಿದ್ದಾರೆ. ಮಾರ್ಗನ್‌ ಪಡೆ 6 ವಿಕೆಟಿಗೆ 154 ರನ್‌ ಗಳಿಸಿದರೆ, ಡೆಲ್ಲಿ 16.3 ಓವರ್‌ಗಳಲ್ಲಿ ಮೂರೇ ವಿಕೆಟಿಗೆ 156 ರನ್‌ ಬಾರಿಸಿ 5ನೇ ಜಯಭೇರಿ ಮೊಳಗಿಸಿತು. ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ನೆಗೆಯಿತು.

ಸಿಡಿದು ನಿಂತ ಪೃಥ್ವಿ ಶಾ 41 ಎಸೆತಗಳಿಂದ 82 ರನ್‌ ಬಾರಿಸಿದರು. ಇದರಲ್ಲಿ 11 ಬೌಂಡರಿ, 3 ಸಿಕ್ಸರ್‌ ಒಳಗೊಂಡಿತ್ತು. ಶಿವಂ ಮಾವಿ ಎಸೆದ ಮೊದಲ ಎಸೆತ ವೈಡ್‌ ಆಗಿತ್ತು. ಉಳಿದ ಆರೂ ಎಸೆತಗಳನ್ನು ಪೃಥ್ವಿ ಶಾ ಬೌಂಡರಿಗೆ ಬಡಿದಟ್ಟಿದರು. ಈ ಓವರ್‌ನಲ್ಲಿ 25 ರನ್‌ ಹರಿದು ಬಂತು. ಐಪಿಎಲ್‌ ಇನ್ನಿಂಗ್ಸ್‌ನ 3ನೇ ಅತೀ ದುಬಾರಿಯಾದ “ಫಸ್ಟ್‌ ಓವರ್‌’ ಇದಾಗಿದೆ. ಶಾ ಐಪಿಎಲ್‌ ಓವರ್‌ ಒಂದರಲ್ಲಿ ಸತತ 6 ಬೌಂಡರಿ ಬಾರಿಸಿದ 2ನೇ ಕ್ರಿಕೆಟಿಗ. ಉನ್ಮುಕ್ತ್ ಚಂದ್‌ ಮೊದಲಿಗ.

ಶಾ-ಧವನ್‌ ಸೇರಿ ಪವರ್‌ ಪ್ಲೇಯಲ್ಲಿ 67 ರನ್‌ ರಾಶಿ ಹಾಕಿದರು. ಇದು ಈ ಐಪಿಎಲ್‌ನ ಮೊದಲ 6 ಓವರ್‌ಗಳಲ್ಲಿ ಒಟ್ಟುಗೂಡಿದ ಸರ್ವಾಧಿಕ ರನ್‌ ಆಗಿದೆ. ಇವರಿಬ್ಬರು 13.5 ಓವರ್‌ಗಳಿಂದ 132 ರನ್‌ ಪೇರಿಸಿದರು. ಇದರಲ್ಲಿ ಧವನ್‌ ಪಾಲು 46 ರನ್‌ (47 ಎಸೆತ, 4 ಬೌಂಡರಿ, ಒಂದು ಸಿಕ್ಸರ್‌). ಉರುಳಿದ ಮೂರೂ ವಿಕೆಟ್‌ ಕಮಿನ್ಸ್‌ ಪಾಲಾಯಿತು.

ಕೆಕೆಆರ್‌ ಪರದಾಟ :

ಲಲಿತ್‌ ಯಾದವ್‌, ಕಾಗಿಸೊ ರಬಾಡ, ಆವೇಶ್‌ ಖಾನ್‌, ಅಕ್ಷರ್‌ ಪಟೇಲ್‌ ಅವರ ಎಸೆತಗಳಿಗೆ ಮಾರ್ಗನ್‌ ಬಳಗ ತೀವ್ರ ಪರದಾಟ ನಡೆಸಿತು. ಸಾಮಾನ್ಯ ಮಟ್ಟದ ಆರಂಭ ಪಡೆದ ಕೆಕೆಆರ್‌ಗೆ ಮಧ್ಯಮ ವೇಗಿ ಲಲಿತ್‌ ಯಾದವ್‌ ಬಲವಾದ ಆಘಾತವಿತ್ತರು. ಮಿಡ್ಲ್ ಆರ್ಡರ್‌ ಮೇಲೆರಗಿ ಹೋದ ಅವರು ಇಯಾನ್‌ ಮಾರ್ಗನ್‌ ಮತ್ತು ಸುನೀಲ್‌ ನಾರಾಯಣ್‌ ಅವರನ್ನು ಸತತ ಎಸೆತಗಳಲ್ಲಿ ಕೆಡವಿ ಡೆಲ್ಲಿಗೆ ಮೇಲುಗೈ ಒದಗಿಸಿದರು. ಇವರಿಬ್ಬರದೂ ಶೂನ್ಯ ಗಳಿಕೆಯಾಗಿತ್ತು. ಮಾರ್ಗನ್‌ 2 ಎಸೆತ ಎದುರಿಸಿದರೆ, ನಾರಾಯಣ್‌ ಮೊದಲ ಎಸೆತದಲ್ಲೇ ಬೌಲ್ಡ್‌ ಆದರು.

ಒಂದೆಡೆ ವಿಕೆಟ್‌ ಉರುಳುತ್ತಿದ್ದರೂ 13ನೇ ಓವರ್‌ ತನಕ ಬೇರೂರಿ ನಿಂತ ಶುಭಮನ್‌ ಗಿಲ್‌ 43 ರನ್‌ ಹೊಡೆದರು (38 ಎಸೆತ, 3 ಬೌಂಡರಿ, ಒಂದು ಸಿಕ್ಸರ್‌).

ನಿತೀಶ್‌ ರಾಣಾ (15), ರಾಹುಲ್‌ ತ್ರಿಪಾಠಿ (19), ದಿನೇಶ್‌ ಕಾರ್ತಿಕ್‌ (14) ಅವರಿಂದ ದೊಡ್ಡ ಮೊತ್ತ ಸಂದಾಯವಾಗಲಿಲ್ಲ. 109 ರನ್ನಿಗೆ 6 ವಿಕೆಟ್‌ ಉರುಳಿತು. ಡೆತ್‌ ಓವರ್‌ಗಳಲ್ಲಿ ಬಿಗ್‌ ಹಿಟ್ಟರ್‌ಗಳಾದ ಆ್ಯಂಡ್ರೆ ರಸೆಲ್‌ ಮತ್ತು ಪ್ಯಾಟ್‌ ಕಮಿನ್ಸ್‌ ಕ್ರೀಸ್‌ನಲ್ಲಿ ಇದ್ದುದರಿಂದ ಕೆಕೆಆರ್‌ ಮೊತ್ತ ಏರುವ ನಿರೀಕ್ಷೆ ಇತ್ತು. ಇವರಲ್ಲಿ ರಸೆಲ್‌ ಹೆಚ್ಚಿನ ಯಶಸ್ಸು ಕಂಡರು. 27 ಎಸೆತಗಳಿಂದ ಅಜೇಯ 45 ರನ್‌ ಬಾರಿಸಿದರು (3 ಸಿಕ್ಸರ್‌, 2 ಬೌಂಡರಿ).

ಸಂಕ್ಷಿಪ್ತ ಸ್ಕೋರ್‌: ಕೆಕೆಆರ್‌-6 ವಿಕೆಟಿಗೆ (ಗಿಲ್‌ 43, ರಸೆಲ್‌ ಔಟಾಗದೆ 45, ರಾಣಾ 15, ಯಾದವ್‌ 13ಕ್ಕೆ 2, ಪಟೇಲ್‌ 32ಕ್ಕೆ 2). ಡೆಲ್ಲಿ-16.3 ಓವರ್‌ಗಳಲ್ಲಿ 3 ವಿಕೆಟಿಗೆ 156 (ಶಾ 82, ಧವನ್‌ 46, ಕಮಿನ್ಸ್‌ 24ಕ್ಕೆ

 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.