ಕೋವಿಡ್ ನಿಯಂತ್ರಣಕ್ಕೆ ದ.ಕ., ಉಡುಪಿ ಜಿಲ್ಲಾಡಳಿತಗಳು ಸನ್ನದ್ಧ


Team Udayavani, Apr 30, 2021, 7:25 AM IST

ಕೋವಿಡ್ ನಿಯಂತ್ರಣಕ್ಕೆ ದ.ಕ., ಉಡುಪಿ ಜಿಲ್ಲಾಡಳಿತಗಳು ಸನ್ನದ್ಧ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ವೆನ್ಲಾಕ್, ಖಾಸಗಿ ವೈದ್ಯಕೀಯ  ಕಾಲೇಜುಗಳ ಆಸ್ಪತ್ರೆಗಳಲ್ಲಿ ಒಟ್ಟು 4,884 ಹಾಸಿಗೆಗಳನ್ನು ಜಿಲ್ಲಾಡಳಿತ ಸಿದ್ಧಪಡಿಸಿದೆ. ಸುರತ್ಕಲ್‌ನ ಎನ್‌ಐಟಿಕೆ, ಕದ್ರಿ ಶಿವಬಾಗ್‌ನ ಇಎಸ್‌ಐ ಆಸ್ಪತ್ರೆಯನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸಲಾಗುತ್ತಿದೆ.

ಕೋವಿಡ್  ಮೊದಲ ಅಲೆಯ ಸಂದರ್ಭ ಬಳಸಿದ್ದ ಎನ್‌ಐಟಿಕೆ ಸೆಂಟರ್‌ 100 ಹಾಗೂ ಇಎಸ್‌ಐ ಆಸ್ಪತ್ರೆಯಲ್ಲಿ 75 ಹಾಸಿಗೆ ಸಾಮರ್ಥಯ ಹೊಂದಿದೆ. ಕುಡಿಯುವ

ನೀರು ಸೇರಿದಂತೆ ಅಗತ್ಯ ಸೌಲಭ್ಯ ಗಳೆಲ್ಲವನ್ನೂ ಆರೋಗ್ಯ ಇಲಾಖೆ ಕಲ್ಪಿ ಸುತ್ತಿದೆ. ಜತೆಗೆ ಮೊರಾರ್ಜಿ ದೇಸಾಯಿ ಶಾಲೆಯನ್ನು ಕೇರ್‌ ಸೆಂಟರ್‌ ಆಗಿ ಪರಿವರ್ತಿಸುವ ಸಾಧ್ಯತೆ ಇದೆ. ಅಗತ್ಯ ಬಿದ್ದರೆ ಇನ್ನೂ ಕೆಲವು ಶಾಲೆ, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗ‌ಳು, ಹೊಟೇಲ್‌ಗ‌ಳನ್ನು ಪರಿವರ್ತನೆಯಾಗಲಿದೆ. ಅದೂ ಸಾಲದಿದ್ದರೆ ಜಿಲ್ಲೆಯ ಆಯು ರ್ವೇದ, ಹೋಮಿಯೋಪಥಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ಹೆಚ್ಚುವರಿ ಹಾಸಿಗೆಗಳನ್ನೂ ಪಡೆಯುವುದು ಜಿಲ್ಲಾಡಳಿತದ ಲೆಕ್ಕಾಚಾರ.

ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ವೈದ್ಯರು ಹಾಗೂ ದಾದಿಯರನ್ನು ನಿಯೋಜಿಸುತ್ತಿದ್ದು, ಸೋಂಕು ಲಕ್ಷಣ ಇಲ್ಲದ ರೋಗಿಗಳಿಗೆ ಕನಿಷ್ಠ ಹತ್ತು ದಿನ ಚಿಕಿತ್ಸೆ ಅಲ್ಲಿ ಲಭ್ಯವಾಗಲಿದೆ.

ಹೋಂ ಐಸೊಲೇಶನ್‌ ಅಧಿಕ :

ಕಳೆದ ಬಾರಿ ಜಿಲ್ಲೆಯಲ್ಲಿ ಬಹುಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಡಿಮೆ ಪ್ರಮಾಣದಲ್ಲಿ ಜನರು ಹೋಂ ಐಸೊಲೇಶನ್‌ನಲ್ಲಿದ್ದರು. ಆದರೆ ಈ ಬಾರಿ ಸೋಂಕಿತರ ಪೈಕಿ ಶೇ. 80ರಷ್ಟು ಮಂದಿ ಹೋಂ ಐಸೊಲೇಶನ್‌ನಲ್ಲಿದ್ದಾರೆ. ಇತ್ತೀಚಿನ  ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 887 ಮಂದಿ ಆಸ್ಪತ್ರೆಗಳಲ್ಲಿ ಹಾಗೂ 3,249 ಮಂದಿ ಹೋಂ ಐಸೋಲೇಶನ್‌ನಲ್ಲಿದ್ದಾರೆ.

ಸದ್ಯದ ಹಾಸಿಗೆ ಲಭ್ಯತೆ  – 4, 884 :

ಎನ್‌ಐಟಿಕೆ ಕೇರ್‌ ಸೆಂಟರ್‌ – 100

ಇಎಸ್‌ಐ ಆಸ್ಪತ್ರೆ – 75

ವೆನ್ಲಾಕ್  ಆಸ್ಪತ್ರೆ – 275

ವಿವಿಧ ತಾಲೂಕು ಆಸ್ಪತ್ರೆ,  ಪ್ರಾ. ಆ. ಕೇಂದ್ರ, ಸಮುದಾಯ ಆ.ಕೇಂದ್ರ- 450

ಶೇ. 50 ರಷ್ಟು ಹಾಸಿಗೆ ಲಭ್ಯತೆ  :

ಖಾಸಗಿ ವೈದ್ಯಕೀಯ ಕಾಲೇಜು  – 8

ಖಾಸಗಿ ಆಸ್ಪತ್ರೆಗಳು  – 58

ಜಿಲ್ಲೆಯ ಆಸ್ಪತ್ರೆಗಳಲ್ಲಿ ಒಟ್ಟು 4,884 ಬೆಡ್‌ಗಳನ್ನು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಸಿದ್ಧಪಡಿಸಲಾಗಿದೆ. ನಗರ ದಲ್ಲಿ ಮೂರು ಕಡೆ ಕೋವಿಡ್‌ಕೇರ್‌ ಸೆಂಟರ್‌ ತೆರೆಯಲು ಎಲ್ಲ ಪ್ರಕ್ರಿಯೆ ಗಳನ್ನು ಈಗಾಗಲೇ ನಡೆಸಲಾಗಿದೆ.- ಡಾ| ರಾಜೇಂದ್ರ ಕೆ.ವಿ., ದ.ಕ. ಜಿಲ್ಲಾಧಿಕಾರಿ

 

ಉಡುಪಿ ಜಿಲ್ಲೆಯಲ್ಲಿ  2 ಸಾವಿರ ಹಾಸಿಗೆಗಳು ಮೀಸಲು :

ಉಡುಪಿ: ಕೋವಿಡ್  ಪರಿಸ್ಥಿತಿ ನಿರ್ವಹಣೆಗೆ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಹಾಸಿಗೆಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಲಾಗಿದೆ.

“ಜಿಲ್ಲೆಯಲ್ಲಿ 2,000 ಹಾಸಿಗೆಗಳಿದ್ದು, 500 ಹಾಸಿಗೆಗಳು ಬಳಕೆಯಲ್ಲಿವೆ. ಹಾಗಾಗಿ ಸದ್ಯಕ್ಕೆ ಹಾಸಿಗೆಗಳ ಕೊರತೆ ಇಲ್ಲ’ ಎನ್ನುತ್ತದೆ ಜಿಲ್ಲಾಡಳಿತ. ನಿತ್ಯವೂ ಅವಲೋಕನ ನಡೆಸಲಾಗುತ್ತಿದ್ದು, ರೆಮ್‌ಡಿಸಿವರ್‌ ಕೊರತೆಯನ್ನೂ ನೀಗಿಸಲಾಗಿದೆ.

ಆಕ್ಸಿಜನ್‌ ಪೂರೈಕೆ :

ಬೆಳಪುವಿನಲ್ಲಿ ಆಕ್ಸಿಜನ್‌ ಪೂರೈಕೆ ಘಟಕ ಮೂರು ದಿನಗಳ ಹಿಂದೆ ಕಾರ್ಯಾರಂಭ ಮಾಡಿದೆ. ಮಣಿಪಾಲ ಆಸ್ಪತ್ರೆ ತನ್ನದೇ ಆದ ಆಕ್ಸಿಜನ್‌ ಘಟಕ ಹೊಂದಿದೆ. ಡಾ| ಟಿಎಂಎ ಪೈ ಆಸ್ಪತ್ರೆಗೆ ಮಂಗಳೂರಿನಿಂದ ಪೂರೈಕೆ ಆಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ 6 ಕೆಎಲ್‌ ಸಾಮರ್ಥ್ಯದ ಆಕ್ಸಿಜನ್‌ ವ್ಯವಸ್ಥೆ ಇದೆ. ಉಳಿದ ಆಸ್ಪತ್ರೆಗಳಿಗೆ ಮಾತ್ರ ಬೆಳಪು ವಿನಿಂದ ಪೂರೈಸಲಾಗುತ್ತದೆ.

ವ್ಯಾಕ್ಸಿನ್‌ ಪೂರೈಕೆ ಕೋವಿಡ್  ವ್ಯಾಪಿಸುತ್ತಿದ್ದು, ಸಾರ್ವಜನಿಕರೂ ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.  ಸೋಮವಾರ 5 ಸಾವಿರ ಲಸಿಕೆ ಪೂರೈಕೆ ಆಗಿದ್ದು, ಮಂಗಳವಾರ 12 ಸಾವಿರ ಬಂದಿದೆ. ಬುಧವಾರ 10 ಸಾವಿರ ಲಸಿಕೆ ವಿತರಿಸಲಾಗಿದೆ. ಹೀಗೆ ವ್ಯಾಕ್ಸಿನ್‌ ಪೂರೈಕೆ  ದಿನದಿನವೂ ನಡೆಯುತ್ತಿದೆ. ಕೊವ್ಯಾಕ್ಸಿನ್‌ ಸದ್ಯವೇ ಬರಲಿದೆ ಎನ್ನು ತ್ತಾರೆ ಜಿಲ್ಲಾಧಿಕಾರಿ ಜಿ. ಜಗದೀಶ್‌.  ಜಿಲ್ಲೆಯ ಆರು ಸಮುದಾಯ ಆರೋಗ್ಯ ಕೇಂದ್ರಗಳನ್ನು (ಸಿಎಚ್‌ಸಿ) ಸಿದ್ಧವಾಗಿ ರಿಸಿ ಕೊಳ್ಳುತ್ತಿದ್ದೇವೆ. ಪ್ರತಿ ಕೇಂದ್ರಗಳಲ್ಲೂ 30 ಹಾಸಿಗೆಗಳಿದ್ದು, ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳ ಲಾಗುವುದು ಎನ್ನುತ್ತಾರೆ ಜಿಲ್ಲೆಯ ಜಿಲ್ಲೆಯ ವೈದ್ಯಾಧಿಕಾರಿ ಡಾ| ಸುಧೀರ್‌ ಚಂದ್ರ ಸೂಡ.

ಸಹಾಯವಾಣಿ :

ಉಡುಪಿ               9663957222, 9663950222

ಕುಂದಾಪುರ      6363862122, 7483984733

ಕಾರ್ಕಳ               7676227624, 7411323408

ಜಿಲ್ಲೆಯಲ್ಲಿ 900 ಆಕ್ಸಿಜನ್‌ ಹಾಸಿಗೆಗಳಿವೆ. ಜತೆಗೆ ಇತರೆ ಹಾಸಿಗೆಗಳೂ ಇವೆ. ಖಾಸಗಿ ಆಸ್ಪತ್ರೆಗಳ ಶೇ. 75 ರಷ್ಟು ಹಾಸಿಗೆಗಳನ್ನು ಸರಕಾರಕ್ಕೆ ನೀಡಲಾಗಿದೆ. ಹಾಗಾಗಿ ಒಂದು ವೇಳೆ ಯಾರಾದರೂ ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋದಾಗ ಅಲ್ಲಿ ಹಾಸಿಗೆಗಳಿಲ್ಲ ಎಂದಿರಬಹುದು. ಇಂಥ ಸಂದರ್ಭದಲ್ಲಿ ಸಾರ್ವಜನಿಕರು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡ ಅಥವಾ ನೋಡಲ್‌ ಅಧಿಕಾರಿ ಡಾ| ಪ್ರಶಾಂತ ಭಟ್‌ ಅವರನ್ನು ಸಂಪರ್ಕಿಸಬಹುದು. ತಾಲೂಕು ಮಟ್ಟದಲ್ಲಿ ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು ಆ ಮೂಲಕ ವೈದ್ಯಕೀಯ ವ್ಯವಸ್ಥೆಯನ್ನು ಪಡೆಯಬಹುದು.  ಜಿ. ಜಗದೀಶ್‌, ಜಿಲ್ಲಾಧಿಕಾರಿ, ಉಡುಪಿ

 

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.