ನಾನು ದೇಶಸೇವೆ ಮಾಡಿದೆ, ಈ ವ್ಯವಸ್ಥೆ ನನ್ನ ಮಗನನ್ನು ಉಳಿಸಿಲ್ಲ: ಕಣ್ಣೀರಿಟ್ಟ ಕಾರ್ಗಿಲ್ ಹೀರೋ
Team Udayavani, Apr 30, 2021, 9:36 AM IST
Representative Image
ಕಾನ್ಪುರ: ಕೋವಿಡ್ 19 ಸೋಂಕಿನ ಎರಡನೇ ಅಲೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಾರಿ ಸೋಂಕಿನಿಂದ ಸಾವನ್ನುಪ್ಪುವವರ ಸಂಖ್ಯೆಯೂ ಜಾಸ್ತಿಯಾಗಿದೆ. ಹಲವರು ಆಕ್ಸಿಜನ್, ಐಸಿಯು ಬೆಡ್ ಸಮಯಕ್ಕೆ ಸರಿಯಾಗಿ ಸಿಗದೆ ಹಲವರು ಸಾವನ್ನಪ್ಪಿದ ಘಟನೆಯು ವರದಿಯಾಗುತ್ತಿದೆ.
ಉತ್ತರ ಪ್ರದೇಶದ ಕಾನ್ಪುರದಲ್ಲೂ ಕೋವಿಡ್ ಅಟ್ಟಹಾಸ ಜೋರಾಗಿದೆ. ಆಕ್ಸಿಜನ್ ಸಿಲಿಂಡರ್ ಗಳ ಕೊರತೆಯಿದ್ದು, ಸಾವನ್ನಪ್ಪಿದ ಸೋಂಕಿತರ ಕುಟುಂಬಿಕರು ಮೃತದೇಹದ ಮುಖ ನೋಡಲೂ ಗಂಟೆಗಳ ಕಾಲ ಕಾದು ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ.
ಗಡಿಯಲ್ಲಿ ದೇಶಕ್ಕಾಗಿ ಹೋರಾಡಿದ ಇಲ್ಲಿನ ಮಾಜಿ ಸೈನಿಕರೊಬ್ಬರು ತಮಗೆ ಎದುರಾದ ಸಂಕಷ್ಟದ ಕುರಿತಾಗಿ ಅಳಲು ತೋಡಿಕೊಂಡಿದ್ದಾರೆ.
ಇದನ್ನೂ ಓದಿ:ಕೋವಿಡ್ ಜಾಗೃತಿ ಮೂಡಿಸಲು ಕೇರಳ ಪೊಲೀಸರ ವಿನೂತನ ಪ್ರಯತ್ನ : ಹಾಡಿಗೆ ಹೆಜ್ಜೆ ಹಾಕಿ ಆರಕ್ಷಕರು!
ಸುಬೇದಾರ್ ಮೇಜರ್ ( ನಿವೃತ್ತ) ಹರಿ ರಾಮ್ ದುಬೆ ಅವರು ಕಾರ್ಗಿಲ್ ಯುದ್ಧದಲ್ಲಿ ಭಾರತಕ್ಕಾಗಿ ಹೋರಾಡಿದವರು. ಆದರೆ ಕೋವಿಡ್ ನಿಂದ ಸಾವನ್ನಪ್ಪಿದ ತಮ್ಮ ಮಗನ ಮೃತದೇಹವನ್ನು ನೋಡಲು ಹಲವು ಗಂಟೆಗಳ ಕಾಲ ಅವರು ಕಾಯಬೇಕಾಯಿತು.
ಈ ಬಗ್ಗೆ ಮಾತನಾಡಿರುವ ಅವರು, “ನಾನು 1984ರಿಂದ 2011ರವರೆಗೆ ದೇಶಸೇವೆ ಮಾಡಿದ್ದೇನೆ. ಕಾರ್ಗಿಲ್ ನಿಂದ ಬಾರಾಮುಲ್ಲ, ಲಡಾಖ್ ನಲ್ಲಿ ಉಗ್ರರನ್ನು ಹೊಡೆದುರಳಿಸಿದ್ದೇನೆ. ಆದರೆ ಈ ವ್ಯವಸ್ಥೆ ನನ್ನ ಮಗನನ್ನು ನನಗೆ ಉಳಿಸಿಕೊಡಲಿಲ್ಲ” ಎಂದು ಅಳಲು ತೋಡಿಕೊಂಡಿದ್ದಾರೆ.
ಹರಿ ರಾಮ್ ದುಬೆ ಅವರ ಮಗ ಅಮಿತಾಭ್ ಗುರುವಾರ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಆದರೆ ಅಮಿತಾಭ್ ಮುಖವನ್ನು ಕೊನೆಯದಾಗಿ ನೋಡಲು ಹರಿರಾಮ್ ಕುಟುಂಬ ಕೆಲವು ಗಂಟೆಗಳ ಕಾಲ ಬಿಸಿಲಿನಲ್ಲಿ ಕಾದು ಕುಳಿತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ