ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟಕ್ಕೆ ಯತ್ನ: ಐವರ ಬಂಧನ
Team Udayavani, Apr 30, 2021, 11:41 AM IST
ವಿಜಯಪುರ: ಕೋವಿಡ್ ರೋಗಿಗಳಿಗೆ ತುರ್ತು, ಅಗತ್ಯವಾಗಿ ನೀಡಬೇಕಿರುವ ರೆಮಿಡಿಸಿವಿರ್ ಲಸಿಕೆಯನ್ನು ಅಕ್ರಮವಾಗಿ ಪಡೆದು ಕಾಳಸಂತೆಯಲ್ಲಿ ಮಾರಾಟಕ್ಕೆ ಮುಂದಾಗಿದ್ದ ಐವರನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಗೋಲಗುಂಬಜ ಠಾಣೆ ವ್ಯಾಪ್ತಿಯಲ್ಲಿ ರೆಮಿಡಿಸಿವಿರ್ ಲಸಿಕೆ ತನ್ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟಕ್ಕೆ ಲಭ್ಯ ಎಂದು ಶೃತಿ ಮಹೇಶ ಹಡಪದ ಎಂಬಾಕೆ ಕಾಳಸಂತೆ ದಂಧೆಯಲ್ಲಿ ತೊಡಗಿದ್ದಾಗಿ ಔಷದಿ ನಿಯಂತ್ರಣ ಇಲಾಖೆಯ ನೀಲಕಂಠ ತಾರು ರಾಠೋಡ ದೂರು ನೀಡಿದ್ದರು.
ಇದನ್ನು ಆಧರಿಸಿ ಗೋಲಗುಂಬಜ ಠಾಣೆಯ ಸಿಪಿಐ ಬಸವರಾಜ ಮೂಕರ್ತಿಹಾಳ, ಎಸೈ ಆರ್.ಎಸ್. ಲಮಾಣಿ ನೇತೃತ್ವದಲ್ಲಿ ಪೇದೆ ಫೈಜಲ್ ಶಬ್ಬೀರ ಇನಾಮದಾರ ಇವರನ್ನು ಸಮವಸ್ತ್ರ ರಹಿತರಾಗಿ ಕಳುಹಿಸಿ, ರೆಮಿಡಿಸಿವಿರ್ ಅಕ್ರಮ ಜಾಲದಲ್ಲಿದ್ದ ಐವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಆರ್ಡರ್ ಮಾಡಲಾಗಿದೆ: ಸಚಿವ ಸುಧಾಕರ್
ಬಂಧಿತರನ್ನು ಆನಂದ ಸೋಹನ್ ರುಣವಾಲ್, ಆದಿತ್ಯ ಅಣ್ಣಾರಾಯ ಜೋಶಿ, ವಿಜಯ ಪ್ರಭಾಕರ ದೇಶಪಾಂಡೆ, ಮಹ್ಮದ್ ಅಬ್ದುಲ್ ಆಲಂ ಮುಲ್ಲಾ, ಶೃತಿ ಹಡಪದ ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ