ಜಿಲ್ಲಾಡಳಿತ ನಿಯಂತ್ರಣದಲ್ಲಿ ಆಕ್ಸಿಜನ್‌ ಘಟಕ


Team Udayavani, Apr 30, 2021, 3:53 PM IST

ಹಹಹಹಹಜಗಹಜಕ

ಕಲಬುರಗಿ: ಜಿಲ್ಲೆಯಲ್ಲಿ ಹೊಸದೊಂದು ಖಾಸಗಿ ಆಕ್ಸಿಜನ್‌ ಉತ್ಪಾದನಾ ಘಟಕ ಆರಂಭವಾಗಿದ್ದು, ಕೊರೊನಾ ಸೋಂಕಿತರಿಗೆ ಆಕ್ಸಿಜನ್‌ ಅಭಾವ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವೇ ಆಕ್ಸಿಜನ್‌ ಉತ್ಪಾದಿಸಿ ಕೊಡಲು ಮುಂದಾಗಿದೆ. ಇದೇ ಘಟಕದಿಂದ ಆಸ್ಪತ್ರೆಗಳಿಗೆ ಆಕ್ಸಿಜನ್‌ ಪೂರೈಕೆಗಾಗಿ ಮುಂಬೈನಿಂದ 200 ಖಾಲಿ ಸಿಲಿಂಡರ್‌ಗಳನ್ನು ಜಿಲ್ಲಾಡಳಿತ ತರಿಸಿಕೊಳ್ಳುತ್ತಿದೆ.

ನಗರ ಹೊರವಲಯದ ನಂದೂರ (ಕೆ) ಕೈಗಾರಿಕಾ ಪ್ರದೇಶದಲ್ಲಿರುವ ಶಿವ ಇಂಡಸ್ಟ್ರೀಸ್‌ನವರು ಹೊಸ ಆಕ್ಸಿಜನ್‌ ಮತ್ತು ನೈಟ್ರೋಜನ್‌ ಉತ್ಪಾದನಾ ಘಟಕ ಪ್ರಾರಂಭಿಸಿದ್ದಾರೆ. ಆದರೆ, ಇವರಲ್ಲಿ ಆಕ್ಸಿಜನ್‌ ತುಂಬುವ ಖಾಲಿ ಸಿಲಿಂಡರ್‌ಗಳು ಲಭ್ಯ ಇಲ್ಲ. ಹೀಗಾಗಿ ಜಿಲ್ಲಾಡಳಿತಕ್ಕೆ ಆಕ್ಸಿಜನ್‌ ಉತ್ಪಾದಿಸಿ ಕೊಡುವುದಾಗಿ ಹೇಳಿದ್ದು, ಘಟಕವನ್ನು ಜಿಲ್ಲಾಡಳಿತ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಈ ಹೊಸ ಘಟಕ 400 ಸಿಲಿಂಡರ್‌ಗಳಷ್ಟು ಆಕ್ಸಿಜನ್‌ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಇಲ್ಲಿ ಉತ್ಪಾದಿಸುವ ಆಕ್ಸಿಜನ್‌ ಜಿಲ್ಲಾಡಳಿತ ಸೂಚಿಸುವಲ್ಲಿಗೆ ಪೂರೈಕೆ ಆಗಲಿದೆ. ಆದ್ದರಿಂದ ಮುಂಬೈನಿಂದ ಈಗಾಗಲೇ 400 ಖಾಲಿ ಸಿಲಿಂಡರ್‌ ಗಳನ್ನು ತರಿಸಿಕೊಳ್ಳಲು ನಿರ್ಧರಿಸಲಾಗಿದೆ. ಎರಡೂ¾ರು ದಿನಗಳಲ್ಲಿ 200 ಸಿಲಿಂಡರ್‌ಗಳು ಜಿಲ್ಲೆಗೆ ಬರಲಿವೆ. ಉಳಿದ 200 ಖಾಲಿ ಸಿಲಿಂಡರ್‌ಗಳು ಶೀಘ್ರದಲ್ಲಿ ಬರುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ಯಾ “ಉದಯವಾಣಿ’ಗೆ ತಿಳಿಸಿದರು.

ಇಂಡೆಂಟ್‌ ಕಡ್ಡಾಯ: ಜಿಲ್ಲೆಯಲ್ಲಿ ಈಗಾಗಲೇ ಮೂರು ಖಾಸಗಿ ಆಕ್ಸಿಜನ್‌ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿಂದ ಅನೇಕ ಕಡೆಗಳಲ್ಲಿ ಆಕ್ಸಿಜನ್‌ ಸರಬರಾಜು ಮಾಡಲಾಗುತ್ತಿವೆ. ಹೀಗಾಗಿ ಇಂಡೆಂಟ್‌ ಕಡ್ಡಾಯ ಮಾಡಲಾಗಿದೆ. ಜತೆಗೆ ಇಲ್ಲಿನ ಆಕ್ಸಿಜನ್‌ ಎಲ್ಲಿಗೆ ಪೂರೈಕೆ ಆಗುತ್ತಿದೆ ಎನ್ನುವ ಕುರಿತು ಜಿಲ್ಲಾಡಳಿತ ನಿಗಾ ವಹಿಸುತ್ತಿದೆ. ಮೂರು ಘಟಕಗಳಿಂದ ಎಷ್ಟು ಸಿಲಿಂಡರ್‌ ಆಕ್ಸಿಜನ್‌ ಪೂರೈಕೆ ಆಗುತ್ತಿದೆ. ಅದು ಯಾವ ಸ್ಥಳ, ಯಾವ ಆಸ್ಪತ್ರೆಗೆ ಸರಬರಾಜು ಆಗುತ್ತಿದೆ ಎನ್ನುವ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದಕ್ಕಾಗಿ ಪ್ರತಿ ಘಟಕದಲ್ಲಿ ಮೂರು ಪಾಳಿಯಲ್ಲಿ ನಮ್ಮ ಸಿಬ್ಬಂದಿ ನಿಯೋಜಿಸಲಾಗಿದೆ. ಆಯಾ ಘಟಕದಿಂದ ಹೊರ ಹೋದ ಆಕ್ಸಿಜನ್‌ ಸಿಲಿಂಡರ್‌ಗಳು ನಿಗದಿತ ಆಸ್ಪತ್ರೆಗೆ ತಲುಪಿದವೋ, ಇಲ್ಲವೋ ಎನ್ನುವ ಕುರಿತು ಖಾತ್ರಿ ಮಾಡಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ಜಿಲ್ಲಾಧಿಕಾರಿ. ಇಎಸ್‌ಐನಲ್ಲಿ ಘಟಕಕ್ಕೆ ಯತ್ನ: ಇಡೀ ಜಿಲ್ಲೆಯಲ್ಲಿ ಜಿಮ್ಸ್‌ ಆಸ್ಪತ್ರೆ ಮತ್ತು ಬಸವೇಶ್ವರ ಆಸ್ಪತ್ರೆಯಲ್ಲಿ ಮಾತ್ರವೇ ಆಕ್ಸಿಜನ್‌ ಸ್ಟೋರೆಜ್‌ ಘಟಕಗಳು ಇವೆ. ಜಿಮ್ಸ್‌ನಲ್ಲಿ 20 ಕೆಎಲ್‌ನಷ್ಟು ಮತ್ತು ಬಸವೇಶ್ವರ ಆಸ್ಪತ್ರೆಯಲ್ಲಿ 6 ಕೆಎಲ್‌ನಷ್ಟು ಆಕ್ಸಿಜನ್‌ ಸ್ಟೋರೇಜ್‌ ಆಗುತ್ತದೆ.

ಉಳಿದಂತೆ ಇಎಸ್‌ಐ ಸೇರಿ ಯಾವ ಆಸ್ಪತ್ರೆಯಲ್ಲೂ ಸ್ಟೋರೆಜ್‌ ಘಟಕಗಳಿಲ್ಲ. ಎಲ್ಲೆಡೆ ಸಿಲಿಂಡರ್‌ಗಳ ಮೂಲಕವೇ ಪೂರೈಕೆ ಮಾಡಲಾಗುತ್ತಿದೆ. ಇಎಸ್‌ಐ ಆಸ್ಪತ್ರೆಯೂ ಜಂಬೂ ಸಿಲಿಂಡರ್‌ಗಳ ಮೇಲೆ ಅವ ಲಂಬನೆ ಆಗಿದೆ. ಮೇಲಾಗಿ ಇಲ್ಲಿ 500 ಬೆಡ್‌ಗಳನ್ನು ಕೋವಿಡ್‌ಗೆ ಮೀಸಲಿಟ್ಟರೂ, ಗರಿಷ್ಠ 200 ಬೆಡ್‌ ಗಳಿಗೆ ಮಾತ್ರ ಆಕ್ಸಿಜನ್‌ ವ್ಯವಸ್ಥೆ ಆಗುತ್ತದೆ. ಆದರೂ, ಇಲ್ಲಿ 13ಕೆಎಲ್‌ ಆಕ್ಸಿಜನ್‌ ಸ್ಟೋರೆಜ್‌ ಸ್ಥಾಪನೆಗೆ ಯತ್ನಿಸಲಾಗುತ್ತಿದೆ. ಇದಕ್ಕೆ ಅಜೀಂ ಪ್ರೇಮ್‌ಜಿ ಫೌಂಡೇ ಷನ್‌ ಸಹಕಾರ ನೀಡಲು ಮುಂದೆ ಬಂದಿದೆ ಎಂದು ಜಿಲ್ಲಾಧಿಕಾರಿ ಜ್ಯೋತ್ಸಾ ° ಮಾಹಿತಿ ನೀಡಿದ್ದಾರೆ.

 

ಟಾಪ್ ನ್ಯೂಸ್

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.