ಸೋಂಕಿತರನ್ನು ತಿರುಗಿಯೂ ನೋಡದ ಆಡಳಿತ


Team Udayavani, Apr 30, 2021, 4:08 PM IST

ಲಕಜದ್ತಗದಸ್ಗ

ಸಿಂಧನೂರು : ಕೋವಿಡ್‌ ಮೊದಲ ಅಲೆಯ ಸಂದರ್ಭ ಕೊರೊನಾ ಪಾಸಿಟಿವ್‌ ವ್ಯಕ್ತಿ ಸೇರಿದಂತೆ ಪ್ರಾಥಮಿಕ ಸಂಪರ್ಕಿತರ ಬೆನ್ನು ಬಿದ್ದು ಪತ್ತೆ ಹಚ್ಚಿ ಚಿಕಿತ್ಸೆಗೆ ಸಹಕರಿಸುತ್ತಿದ್ದ ಆಡಳಿತ ವರ್ಗ ಈ ಬಾರಿ ಕೊರೊನಾ ಸೋಂಕಿತರನ್ನು ತಿರುಗಿ ಕೂಡ ನೋಡುತ್ತಿಲ್ಲ! ತಾಲೂಕಿನಲ್ಲಿ 400ಕ್ಕೂ ಹೆಚ್ಚು ಕೊರೊನಾ ಸೋಂಕಿತರಿದ್ದರೂ ಅವರೆಲ್ಲರಿಗೂ ಮನೆಯಲ್ಲೇ ಇರಿ ಎಂಬ ಸಲಹೆ ನೀಡಿದ್ದನ್ನು ಬಿಟ್ಟರೆ, ಅವರ ಚಲನವಲನದ ಮೇಲೆ ಯಾವುದೇ ನಿಗಾ ವಹಿಸುತ್ತಿಲ್ಲವೆಂಬ ದೂರು ಕೇಳಿ ಬಂದಿವೆ.

ಸ್ವಾಬ್‌ ಟೆಸ್ಟ್‌ಗೆ ನೀಡಿದ ನಂತರ ವರದಿ ಪಾಸಿಟಿವ್‌ ಬಂದ ಮೇಲಷ್ಟೇ ಸೋಂಕಿತರನ್ನು ಫೋನ್‌ ನಲ್ಲೇ ಸಂಪರ್ಕಿಸಿ, ಮನೆಯಲ್ಲೇ ಇರುವಂತೆ ತಿಳಿಸಲಾಗುತ್ತದೆ. ಜತೆಗೆ ಆರೋಗ್ಯ ವಿಚಾರಿಸಿ ಆನ್‌ಲೈನ್‌ನಲ್ಲಿ ವಿವರ ದಾಖಲಿಸಲಾಗುತ್ತಿದೆ.

ವಿವರಕ್ಕಾಗಿ ಕರೆ-ಕರೆ: ಕೊರೊನಾ ಪಾಸಿಟಿವ್‌ ಬಂದ ಬಳಿಕ ರೋಗಿಗಳು ಮನೆಯಲ್ಲೇ ಇದ್ದರೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಯಾವುದೇ ಸಲಹೆ ನೀಡುತ್ತಿಲ್ಲ. ಯಾವ ಔಷಧಗಳನ್ನು ತೆಗೆದುಕೊಳ್ಳಬೇಕು, ಏನೇನು ಕ್ರಮ ಅನುಸರಿಸಬೇಕೆಂಬ ಬಗ್ಗೆ ತಿಳಿಸುವ ಕೆಲಸವಾಗುತ್ತಿಲ್ಲ. ಸ್ವಾಬ್‌ ಟೆಸ್ಟ್‌ಗೆ ಕೊಟ್ಟ ಸಂದರ್ಭದಲ್ಲಿ ನೀಡಿದ ಮೊಬೈಲ್‌ ಸಂಖ್ಯೆ ಜಾಡು ಹಿಡಿದು ತಾಲೂಕು, ಜಿಲ್ಲಾ, ರಾಜ್ಯಮಟ್ಟದ ಕಚೇರಿಯ ಸಿಬ್ಬಂದಿ ಮಾತ್ರ ಬೆನ್ನು ಬಿಡದೇ ಕರೆ ಮಾಡುತ್ತಿದ್ದಾರೆ.

ಎಲ್ಲ ಕಡೆಯಿಂದಲೂ ಪ್ರತ್ಯೇಕವಾಗಿ ಕರೆ ಮಾಡಿ, ನಿಮ್ಮ ಊರು ಯಾವುದು? ಹೆಸರು, ವಿಳಾಸ ಏನು? ಎಂದು ಪ್ರಶ್ನಿಸಲಾಗುತ್ತಿದೆ. ಮನೆಯಲ್ಲೇ ಇರುವ ಕೊರೊನಾ ಸೋಂಕಿತರೊಬ್ಬರಿಗೆ ಬುಧವಾರ ಬರೋಬ್ಬರಿ 60 ಕರೆಗಳು ಬಂದಿವೆ. ಸೋಂಕಿತರು ಆರೋಗ್ಯ ಕಾಳಜಿಗೆ ಸಂಬಂ ಧಿಸಿ ಒಂದೇ ಒಂದು ಸಲಹೆಯನ್ನೂ ಕೊಟ್ಟಿಲ್ಲ. ಸುತ್ತಾಟದ ಶಂಕೆ: ಆರೋಗ್ಯ ಇಲಾಖೆ ಸಿಬ್ಬಂದಿ ಖುದ್ದು ಮನೆಗೆ ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಿ, ಸ್ಥಳದಲ್ಲೇ ಔಷಧ ನೀಡಬೇಕೆಂಬ ಸೂಚನೆ ಪಾಲನೆಯಾಗುತ್ತಿಲ್ಲ.

ಕೊರೊನಾ ಸೋಂಕಿತರೇ ಕೆಲವು ಕಡೆಗಳಲ್ಲಿ ಔಷಧ ತರಲು, ಆಸ್ಪತ್ರೆಗೆ ತೋರಿಸಲು ಮನೆಯಿಂದ ಹೊರಗೆ ಅಲೆಯುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಮನೆಯಲ್ಲಿರಬೇಕಾದ ಸೋಂಕಿತರು ರಾಜರೋಷವಾಗಿ ತಿರುಗಾಡಿದರೆ, ಕೊರೊನಾ ಸಮುದಾಯಕ್ಕೆ ಹರಡುವ ಭೀತಿ ಮೂಡಿದೆ. ತಾಲೂಕಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿವರ, ವಿಳಾಸ ಸಂಗ್ರಹಿಸುವ ಕೆಲಸವನ್ನು ಮಾತ್ರ ಮಾಡಲಾಗುತ್ತಿದೆ. ಆದರೆ ಅವರ ಚಲನವಲನದ ಮೇಲೆ ನಿಗಾ ಇರಿಸುವ ಕೆಲಸವಾಗುತ್ತಿಲ್ಲ. ಕಟ್ಟುನಿಟ್ಟಿನ ಕರ್ಫ್ಯೂ ಜಾರಿಯಿದ್ದರೂ ಕೊರೊನಾ ಚೈನ್‌ ಲಿಂಕ್‌ ತಪ್ಪಿಸುವತ್ತ ಗಮನ ಹರಿಸದಿರುವುದು ಅಚ್ಚರಿಗೆ ಆಸ್ಪದ ನೀಡಿದೆ.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.