ಪಂಚರಾಜ್ಯ ಚುನಾವಣಾ ಫಲಿತಾಂಶದ ಬಳಿಕ ಪೆಟ್ರೋಲ್, ಡೀಸೆಲ್ ದರ ಏರಿಕೆ?
ಫೆಬ್ರುವರಿ 27ರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿಲ್ಲ
Team Udayavani, Apr 30, 2021, 6:35 PM IST
ನವದೆಹಲಿ:ಕಳೆದ ಎರಡು ತಿಂಗಳ ಕಾಲ ತೈಲ ಮಾರಾಟ ಕಂಪನಿಗಳು ದೇಶದಲ್ಲಿ ಇಂಧನ ಬೆಲೆಯನ್ನು ಪರಿಷ್ಕರಿಸಿಲ್ಲ. ಆದರೆ ಮೇ 2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಮೇಲೆ ತೈಲ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮೇ ನಲ್ಲಿ ಭಾರತಕ್ಕೆ ತಲುಪಲಿವೆ ರಷ್ಯಾದ 2 ಲಕ್ಷ ಸ್ಪುಟ್ನಿಕ್ ವಿ ಲಸಿಕೆಗಳು: ವೆಂಕಟೇಶ್ ವರ್ಮಾ
ನಾಲ್ಕು ರಾಜ್ಯಗಳ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ದರ ಪರಿಷ್ಕರಣೆಗೆ ಮುಂದಾಗಿಲ್ಲ. ಇದೀಗ ನಷ್ಟವನ್ನು ಭರ್ತಿ ಮಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸ್ವಾಮಿತ್ವದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹಂತ, ಹಂತವಾಗಿ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.
ರಾಜ್ಯ ಸ್ವಾಮಿತ್ವದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕನಿಷ್ಠ 2ರಿಂದ 3 ರೂಪಾಯಿವರೆಗೆ ಹಂತ, ಹಂತವಾಗಿ ಹೆಚ್ಚಳ ಮಾಡುವ ಮೂಲಕ ನಷ್ಟ ಭರ್ತಿ ಮಾಡಿಕೊಳ್ಳಲು ಮುಂದಾಗಲಿವೆ. ಮೇ ಮೊದಲ ವಾರದಲ್ಲಿ ದರ ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ಇಂಡಿಯಾ ಟುಡೇ ವರದಿ ತಿಳಿಸಿದೆ.
ಫೆಬ್ರುವರಿ 27ರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿಲ್ಲ ಎಂದು ತೈಲ ಮಾರಾಟ ಕಂಪನಿ ತಿಳಿಸಿದೆ. ಚುನಾವಣೆ ನಿಟ್ಟಿನಲ್ಲಿ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಬೆಲೆಯನ್ನು ಹೆಚ್ಚಿಸಿಲ್ಲ ಎಂದು ಹೇಳಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ಭಾರೀ ಪ್ರಮಾಣದ ತೆರಿಗೆ ಹೊರೆಯಾಗಿದ್ದು, ಇದರಿಂದಾಗಿ ತೈಲ ಬೆಲೆ ಹೆಚ್ಚಳ ಮಾಡುವುದು ಅನಿವಾರ್ಯವಾಗಲಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್