ಗಣಿನಗರ ಪಾಲಿಕೆ ಯಾರ ಪಾಲು?


Team Udayavani, Apr 30, 2021, 10:32 PM IST

30-17

„ವೆಂಕೋಬಿ ಸಂಗನಕಲ್ಲು

ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆಯ 39 ಸದಸ್ಯ ಸ್ಥಾನಗಳಿಗೆ ಏ.27ರಂದು ನಡೆದ ಮತದಾನದ ಎಣಿಕೆ ಕಾರ್ಯ ಏ.30ರಂದು ಶುಕ್ರವಾರ ನಡೆಯಲಿದ್ದು, ಕಣದಲ್ಲಿ ಉಳಿದಿದ್ದ 187 ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ. ನಗರದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಬೆಳಗ್ಗೆ 8 ಗಂಟೆಯಿಂದ ಎಣಿಕೆ ಕಾರ್ಯ ಚಾಲನೆ ಪಡೆದುಕೊಳ್ಳಲಿದೆ. ಕಳೆದ ಎರಡು ವರ್ಷಗಳ ನಂತರ ಹಲವು ಏಳು ಬೀಳು, ಅಡ್ಡಿ ಆತಂಕದ ನಡುವೆ ಪಾಲಿಕೆಗೆ ಚುನಾವಣೆ ನಡೆದಿದ್ದು, ಬೆಳಗ್ಗೆ 12 ಗಂಟೆಯೊಳಗೆ 39 ವಾಡ್‌ ಗಳ ಸಂಪೂರ್ಣ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ಕಳೆದ ಎರಡು ದಿನಗಳಿಂದ ಯಾವ ವಾರ್ಡ್‌ಗಳಲ್ಲಿ ಯಾವ ಅಭ್ಯರ್ಥಿಗೆ ವಿಜಯಲಕ್ಷಿ ಒಲಿಯಲಿದ್ದಾಳೆ? ಯಾವ ಪಕ್ಷಕ್ಕೆ ಬಹುಮತ ಲಭಿಸಲಿದೆ? ಪಾಲಿಕೆ ಚುಕ್ಕಾಣಿ ಯಾವ ಪಕ್ಷ ಹಿಡಿಯಲಿದೆ? ಪಕ್ಷೇತರರು ಎಷ್ಟು ಗೆಲ್ಲಲಿದ್ದಾರೆ? ಎಂಬ ಬೀದಿ ಬೀದಿ, ಗಲ್ಲಿಗಲ್ಲಿಗಳಲ್ಲಿನ ಸಾರ್ವಜನಿಕರ ಕುತೂಹಲದ ಹಲವು ಪ್ರಶ್ನೆಗಳಿಗೆ ತೆರೆ ಬೀಳಲಿದೆ. ಕಳೆದ ಬಾರಿ ಕಾಂಗ್ರೆಸ್‌ ತೆಕ್ಕೆಯಲ್ಲಿದ್ದ ಮಹಾನಗರ ಪಾಲಿಕೆ ಎರಡು ವರ್ಷಗಳಿಂದ ಹಲವು ಕಾರಣಗಳಿಂದ ಆಡಳಿತಾಧಿ ಕಾರಿಗಳ ಹಿಡಿತದಲ್ಲಿತ್ತು. ಮೀಸಲಾತಿ ಗೊಂದಲ ಕೋರ್ಟ್‌ ಮೆಟ್ಟಿಲೇರಿದ್ದರ ಫಲವಾಗಿ ಚುನಾವಣೆ ಒಂದಿಲ್ಲೊಂದು ಕಾರಣಕ್ಕೆ ವಿಳಂಬ ಆಗುತ್ತಲೇ ಬಂತು. ಈಗಲೂ ಸಹ ಚುನಾವಣೆ ನಡೆದಿರುವುದು ಕೋರ್ಟ್‌ ತೀರ್ಪು ಅನ್ವಯದ ವಾಗ್ಧಾನ ಒಳಪಟ್ಟಂತೆಯೇ.

ಕುತೂಹಲ ಮೂಡಿಸಿರುವ ಕದನ: ಈ ಬಾರಿಯ ಕಣದಲ್ಲಿ ಕೆಲ ಘಟಾನುಘಟಿಗಳು ಇರುವುದರಿಂದ ಕದನ ಕುತೂಹಲ ತುಸು ಹೆಚ್ಚಿದೆ. 18ನೇ ವಾಡ್‌ ìನಿಂದ ಶಾಸಕ ಜಿ. ಸೋಮಶೇಖರ ರೆಡ್ಡಿ ಪುತ್ರ ಶ್ರವಣಕುಮಾರ ರೆಡ್ಡಿ ಬಿಜೆಪಿಯಿಂದ, ಕಾಂಗ್ರೆಸ್‌ ನಿಂದ ಖ್ಯಾತ ಉದ್ಯಮಿ ಮುಲ್ಲಂಗಿ ರವೀಂದ್ರ ಅವರ ಪುತ್ರ ಮುಲ್ಲಂಗಿ ನಂದೀಶ್‌ ಅವರು ಸ್ಪಧಿಸಿದ್ದಾರೆ. ಮತದಾನ ಪ್ರಕ್ರಿಯೆಯೂ ತೀವ್ರ ಜಿದ್ದಾಜಿದ್ದಿನಿಂದ ನಡೆದಿದ್ದು, ಯಾರಿಗೆ ಜಯ ಲಭಿಸಲಿದೆ ಎಂಬುದು ನಗರದ ಜನರಲ್ಲಿ ಕುತೂಹಲ ಕೆರಳಿಸಿದೆ. 3ನೇ ವಾರ್ಡ್‌ನಿಂದ ಕಾಂಗ್ರೆಸ್‌ಗೆ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಿರುವ ಎಂ.ಪ್ರಭಂಜನಕುಮಾರ, ಕಾಂಗ್ರೆಸ್‌ನಿಂದ ಉಪಮೇಯರ್‌ ಬೆಣಕಲ್‌ ಬಸವರಾಜಗೌಡ, 8ನೇ ವಾರ್ಡ್‌ನಿಂದ ಪಾಲಿಕೆ ಮಾಜಿ ಸದಸ್ಯ ವೈ.ಬಿ. ಸೀತಾರಾಮ್‌, 19ನೇ ವಾಡ್‌ ìನಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಎಸ್‌. ಅಶೋಕಕುಮಾರ, 24ನೇ ವಾರ್ಡ್‌ನಿಂದ ಬಿಜೆಪಿಯ ಪಾಲಿಕೆ ಮಾಜಿ ಸದಸ್ಯ ಶ್ರೀನಿವಾಸ್‌ ಮೋತ್ಕರ್‌, 25ನೇ ವಾರ್ಡ್‌ನಿಂದ ಬಿಜೆಪಿಯಿಂದ ಮಾಜಿ ಸದಸ್ಯ ಗೋವಿಂದರಾಜುಲು, 23ನೇ ವಾರ್ಡ್‌ನಿಂದ ಕನಕ ದುರ್ಗಮ್ಮ ದೇವಸ್ಥಾನದ ಧರ್ಮದರ್ಶಿ ಪಿ.ಗಾದೆಪ್ಪ, 4ನೇ ವಾರ್ಡ್‌ನಿಂದ ಮಾಜಿ ಮೇಯರ್‌ ಸುಶೀಲಾಬಾಯಿ ಪುತ್ರಿ ಡಿ.ತ್ರಿವೇಣಿ ಸ್ಪರ್ಧೆ ಮಾಡಿದ್ದು, ಈ ವಾರ್ಡ್‌ಗಳ ಫಲಿತಾಂಶದ ಮೇಲೆ ಎಲ್ಲರ ಗಮನ ನೆಟ್ಟಿದೆ.

ಜನರ ಚಿತ್ತ 18ನೇ ವಾರ್ಡ್‌ನತ್ತ: ಮಹಾನಗರ ಪಾಲಿಕೆಯ 39 ವಾರ್ಡ್‌ಗಳಿಗೆ ಚುನಾವಣೆ ನಡೆದರೂ ನಗರದ ಜನರ ಚಿತ್ತ 18ನೇ ವಾರ್ಡ್‌ನತ್ತ ನೆಟ್ಟಿದೆ. ಈ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಜಿ.ಸೋಮಶೇಖರರೆಡ್ಡಿ ಪುತ್ರ ಶ್ರವಣ್‌ಕುಮಾರ್‌ ರೆಡ್ಡಿ-ಕಾಂಗ್ರೆಸ್‌ನಿಂದ ಮುಲ್ಲಂಗಿ ರವೀಂದ್ರಬಾಬು ಅವರ ಪುತ್ರ ಎಂ.ನಂದೀಶ್‌ ಅವರ ನಡುವೆ ನೇರ ಫೈಟ್‌ ಏರ್ಪಟ್ಟಿದೆ. ಪಾಲಿಕೆಯ 39 ವಾರ್ಡ್‌ಗಳಲ್ಲೇ ಅತಿಹೆಚ್ಚು ಹಣದ ಹೊಳೆಯನ್ನು ಉಭಯ ಪಕ್ಷಗಳ ಅಭ್ಯರ್ಥಿಗಳು ಹರಿಸಿದ್ದಾರೆ. ಜತೆಗೆ ಇನ್ನಿತರೆ ವಸ್ತುಗಳನ್ನು ಸಹ ಮತದಾರರಿಗೆ ನೀಡುವ ಮೂಲಕ ಮತದಾರರನ್ನು ಸೆಳೆಯಲು ಅಗತ್ಯವಾದ ಎಲ್ಲ ಹಂತದ ತಂತ್ರಗಾರಿಕೆಗಳು ಸಹ ನಡೆದಿದೆ. ಹೀಗಾಗಿ ನಗರದ ಜನರ ಚಿತ್ತ ಸಾಮಾನ್ಯವಾಗಿ ಈ ವಾರ್ಡ್‌ನತ್ತ ನೆಟ್ಟಿದೆ ಎನ್ನಬಹುದು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.