ಕಾಯಿಪಲ್ಲೆ ವ್ಯಾಪಾರಕ್ಕೆ ಸಮಯ ಮಿತಿ ಆಘಾತ
ದರದಲ್ಲಿ ಏರಿಳಿತ! ರೈತರಿಗೆ ಸಂಕಷ್ಟ ಸನ್ನಿಹಿತ! ಕಾಪಾಡಿ ರಿಟೇಲ್ ವ್ಯಾಪಾರಸ್ಥರ ಹಿತಮಾರುಕಟ್ಟೆಯಾಗಲಿ ವ್ಯವಸ್ಥಿತ
Team Udayavani, May 1, 2021, 5:09 PM IST
ವರದಿ: ಶಶಿಧರ್ ಬುದ್ನಿ
ಧಾರವಾಡ: ದಿನವಿಡೀ ಕುಳಿತು ಕಾಯಿಪಲ್ಲೆ-ಹಣ್ಣು ಮಾರಾಟ ಮಾಡುತ್ತಿದ್ದ ವ್ಯಾಪಾರಿ ಇದೀಗ ದಿನದ ನಾಲ್ಕು ತಾಸಿನಲ್ಲಿ ಮಾರಾಟ ಮಾಡಬೇಕು. ಇದರಿಂದ ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದೆ. ನಿರೀಕ್ಷಿತ ಲಾಭ ಗಳಿಕೆಗೆ ಕೊರೊನಾ ಕರ್ಫ್ಯೂ ವಿಧಿಸಿರುವ ಸೀಮಿತ ಸಮಯ ಹೊಡೆತ ನೀಡಿದ್ದು, ರೈತರಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ.
ಕೊರೊನಾ ಕರ್ಫ್ಯೂವಿನ ಮಾರ್ಗಸೂಚಿಯನ್ವಯ ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ನೀಡಿರುವ ಸೀಮಿತ ಅವಧಿಯ “ಪರಿಣಾಮ’ ಕಾಯಿಪಲ್ಲೆ ಬೆಳೆದ ರೈತರು ಹಾಗೂ ಹೋಲ್ಸೆಲ್ ವ್ಯಾಪಾರಸ್ಥರಿಗಿಂತ ರಿಟೇಲ್ ವ್ಯಾಪಾರಸ್ಥರು ಹಾಗೂ ಗ್ರಾಹಕರ ಮೇಲಾಗಿದೆ. ಹೀಗಾಗಿ ಈ ಅವಧಿ ಒಂದೆರಡು ಗಂಟೆ ಹೆಚ್ಚಳ ಮಾಡಬೇಕೆಂಬುದು ರಿಟೇಲ್ ವ್ಯಾಪಾರಸ್ಥರ ಬೇಡಿಕೆ.
ಜಿಲ್ಲೆಯಲ್ಲಿ ಐದು ಎಪಿಎಂಸಿಗಳಿದ್ದು, ಈ ಪೈಕಿ ಧಾರವಾಡ ಹಾಗೂ ಹುಬ್ಬಳ್ಳಿ ಎಪಿಎಂಸಿ ಆವರಣದಲ್ಲಿ ಅಷ್ಟೇ ಹೋಲ್ ಸೇಲ್ ಕಾಯಿಪಲ್ಲೆ ಮಾರುಕಟ್ಟೆ ಇದೆ. ಇಲ್ಲಿ ಶುಕ್ರವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಗ್ಗೆ 6ರಿಂದ 11 ಗಂಟೆ ವರೆಗೆ ವ್ಯಾಪಾರ-ವಹಿವಾಟು ನಡೆದುಕೊಂಡು ಬಂದಿದೆ. ಇದೀಗ ಕೊರೊನಾ ಕರ್ಫ್ಯೂ ಮಾರ್ಗಸೂಚಿ ಅನ್ವಯ ಎಪಿಎಂಸಿ ಆವರಣದಲ್ಲಿ ಬೆಳಗ್ಗೆ 10 ಗಂಟೆವರೆಗೆ ಅಷ್ಟೇ ಹೋಲ್ಸೇಲ್ ಕಾಯಿಪಲ್ಲೆ ವ್ಯಾಪಾರಕ್ಕೆ ಅವಕಾಶ ನೀಡಿದ್ದು, ಒಂದು ತಾಸಿನ ಸಮಯ ಕಡಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ