ರೆಮ್ಡಿಸಿವಿಯರ್ ಕಾಳಸಂತೆ ತಡೆಗೆ ಕ್ರಮ
8-10 ಪಟ್ಟು ದರಕ್ಕೆ ಮಾರಾಟ !ಮೂವರ ಬಂಧನ
Team Udayavani, May 1, 2021, 5:23 PM IST
ವರದಿ: ಭೈರೋಬಾ ಕಾಂಬಳೆ
ಬೆಳಗಾವಿ: ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿದ್ದಂತೆ ರೆಮ್ಡೆಸಿವಿಯರ್ ಕಾಳಸಂತೆಕೋರರು ಹೆಚ್ಚುತ್ತಿದ್ದು, ಪೊಲೀಸರು ಎಚ್ಚೆತ್ತುಕೊಂಡು ಕಾಳಸಂತೆಕೋರರ ಹೆಡೆಮುರಿ ಕಟ್ಟುತ್ತಿದ್ದಾರೆ.
ಕೊರೊನಾ ನೆಪದಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿ ಸಿ ಹೆಚ್ಚಿನ ತನಿಖೆ ನಡೆಸಿದ್ದಾರೆ. ಕೊರೊನಾ ಸೊಂಕು ಹೆಚ್ಚುತ್ತಿರುವುದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ಕಾಳ ಸಂತೆಕೋರರು ತಮ್ಮ ದಂಧೆ ಶುರು ಮಾಡಿದ್ದರು.
ಕೊರೊನಾ ಸೋಂಕಿತರಿಗೆ ಅಗತ್ಯ ಇರುವ ರೆಮ್ ಡೆಸಿವಿಯರ್ ಚುಚ್ಚುಮದ್ದು ಎಂಆರ್ಪಿ ದರ 3500 ರೂ. ಇದ್ದರೆ, ಕಾಳಸಂತೆಯಲ್ಲಿ 25-30 ಸಾವಿರ ರೂ.ವರೆಗೂ ಮಾರಾಟವಾಗುತ್ತಿತ್ತು. ಸಿಸಿಬಿ ಹಾಗೂ ಮಾಳಮಾರುತಿ ಠಾಣೆ ಪೊಲೀಸರು ಕಾಳಸಂತೆಯಲ್ಲಿ ರೆಮ್ಡೆಸಿವಿಯರ್ ಮಾರಾಟ ಮಾಡುತ್ತಿದ್ದ ಮೂವರನ್ನು ಬಂ ಧಿಸಿ ಇದರ ಹಿಂದಿನ ಜಾಲ ಭೇದಿಸಲು ತನಿಖೆ ನಡೆಸಿದ್ದಾರೆ.
ಮೂವರು ದಂಧೆಕೋರರು ಅಂದರ್: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಾಮಪುರ ಗ್ರಾಮದ ಸದ್ಯ ಬೆಳಗಾವಿ ಶಾಹೂನಗರದ ಸಮರ್ಥ ಗಲ್ಲಿಯಲ್ಲಿದ್ದ ಮಂಜುನಾಥ ದುಂಡಪ್ಪ ದಾನವಾಡಕರ, ಬೆ„ಲಹೊಂಗಲ ತಾಲೂಕಿನ ನಯಾನಗರ ಗ್ರಾಮದ ಸದ್ಯ ಶಿವಾಜಿ ನಗರದಲ್ಲಿದ್ದ ಸಂಜೀವ ಚಂದ್ರಶೇಖರ ಮಾಳಗಿ, ಬಾಗಲಕೋಟೆ ಜಿಲ್ಲೆ ಬೀಳಗಿಯ ಮಹೇಶ ಕೆಂಗಲಗುತ್ತಿ ಎಂಬಾತರನ್ನು ಬಂಧಿಸಿದ್ದಾರೆ.
ಮೂರು ರೆಮ್ಡೆಸಿವಿಯರ್ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ರೆಮ್ಡೆಸಿವಿಯರ್ ಮಾರಾಟದ ಜಾಲ ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದು, ಇದರ ಹಿಂದಿರುವ ಕೈವಾಡದ ಬಗ್ಗೆ ಬಂ ಧಿತರ ವಿಚಾರಣೆ ನಡೆಸಿದ್ದಾರೆ. ಕಲುºರ್ಗಿವರೆಗೂ ಇದರ ಜಾಲ ವ್ಯಾಪಿಸಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
MUST WATCH
ಹೊಸ ಸೇರ್ಪಡೆ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್