ವಿಟ್ಲ ಪಶು ಆಸ್ಪತ್ರೆ: ನೀರೂ ಇಲ್ಲ, ಸಿಬಂದಿಯೂ ಇಲ್ಲ


Team Udayavani, May 3, 2021, 3:00 AM IST

Untitled-1

ವಿಟ್ಲ: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವಿಟ್ಲ ಪಶು ಆಸ್ಪತ್ರೆಯಲ್ಲಿ ಮೂಲ ಸೌಕರ್ಯವೇ ಇಲ್ಲ. ನಾಗರಿಕರು ನಾಯಿ, ಕೋಳಿ, ಬೆಕ್ಕು, ಹಸು ಇತ್ಯಾದಿ ಸಾಕುಪ್ರಾಣಿಗಳನ್ನು ಚಿಕಿತ್ಸೆಗಾಗಿ ಈ ಪಶು ಆಸ್ಪತ್ರೆಗೆ ತಂದಾಗ ಚಿಕಿತ್ಸೆಯಾದ ಬಳಿಕ ಕೈತೊಳೆಯುವುದಕ್ಕೆ ಇಲ್ಲಿ ನೀರಿಲ್ಲ. ಇದೀಗ ಕೋವಿಡ್ ಭೀತಿಯಲ್ಲಿ ಆಗಾಗ ಕೈತೊಳೆಯಬೇಕು ಎಂಬ ಸೂಚನೆಯಿದ್ದರೂ ಪ್ರಯೋಜನವಿಲ್ಲದಾಗಿದೆ. ಸರಕಾರಿ ಅಧೀನದಲ್ಲಿರುವ ಈ ನಿರ್ಲಕ್ಷಿತ ಇಲಾಖೆಗೆ ಕನಿಷ್ಠ ನೀರಿನ ಸೌಲಭ್ಯವನ್ನು ಒದಗಿಸಲಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ವಿಟ್ಲ ಪಟ್ಟಣ ಪಂಚಾಯತ್‌ ನೀರು ಸರಬರಾಜು ವ್ಯವಸ್ಥೆಯನ್ನು ಹಿಂದೆ ಒದಗಿಸಿತ್ತು. ಇತ್ತೀಚೆಗೆ ತಾಂತ್ರಿಕ ಸಮಸ್ಯೆಯಿಂದ ಅಲ್ಲಿಗೆ ನೀರು ತಲುಪುತ್ತಿಲ್ಲ. ಈ ಬಗ್ಗೆ ಅಧಿಕೃತವಾಗಿ ಹಾಗೂ ನೇರವಾಗಿ ದೂರು ನೀಡಲಾಗಿದೆ. ನೀರು ಬಿಡುವ ಸಿಬಂದಿ, ಮುಖ್ಯಾಧಿಕಾರಿ, ಜನಪ್ರತಿನಿಧಿಗಳಿಗೂ ಇಲ್ಲಿ ನೀರಿಲ್ಲ ಎಂಬ ಮಾಹಿತಿಯಿದೆ. ಆದರೆ ಎತ್ತರ ಪ್ರದೇಶ ವಾದುದರಿಂದ ನೀರು ಅಲ್ಲಿಗೆ ಏರುತ್ತಿಲ್ಲ ಎಂಬ ಕಾರಣವಿದೆ. ಅದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬುದು ಸಾಕುಪ್ರಾಣಿ ಮಾಲಕರ ಆಗ್ರಹ.

ವಿಟ್ಲ ಮೇಗಿನಪೇಟೆಯ ಸಮೀಪ ದಲ್ಲಿರುವ ಈ ಪಶು ಆಸ್ಪತ್ರೆ ವಿಟ್ಲ ಪೇಟೆಗಿಂತ ಎತ್ತರದಲ್ಲಿದೆ. ಅದು ನೀರು ಏರಲಾರದಷ್ಟು ಎತ್ತರ ಪ್ರದೇಶವಲ್ಲ.  ಒಂದು ವರ್ಷದ ಹಿಂದೆ ಸರಕಾರದ ಅನುದಾನದಲ್ಲೇ ಕೊಳವೆಬಾವಿ ಕೊರೆಸಲಾಗಿತ್ತು. ಆದರೆ ನೀರು ಸಿಗಲಿಲ್ಲ. ಅಲ್ಲಿಗೆ ಇಲಾಖೆ ಕೈತೊಳೆದುಬಿಟ್ಟಿದೆ. ಆಮೇಲೆ ತಿರುಗಿ ನೋಡಲಿಲ್ಲ. ಇಲಾ ಖೆಯಲ್ಲಿ ಅನುದಾನ ಇಲ್ಲ, ಸಿಬಂದಿ ಇಲ್ಲ, ಯಾವುದೇ ವ್ಯವಸ್ಥೆಯಿಲ್ಲ. ಈ ಇಲಾಖೆಯನ್ನು ಎಲ್ಲ ಪಕ್ಷದವರೂ ಎಲ್ಲ ಸರ ಕಾರಗಳೂ ತೀವ್ರವಾಗಿ ನಿರ್ಲಕ್ಷಿಸಿದ್ದು ನಿಜ.

ಕೆಲವು ದಿನಗಳ ಹಿಂದೆ ನಾಯಿಗಳಿಗೆ ವಾಂತಿ ಬೇಧಿ ರೋಗ ಹರಡಿತ್ತು. ನಾಯಿ ತಂದವರು ಕೈತೊಳೆಯಬೇಕು ಮತ್ತು ಸಿಬಂದಿ ನಾಯಿಗೆ ಚಿಕಿತ್ಸೆ ನೀಡಿ ಕೈತೊಳೆದೆ ಇನ್ನೊಂದು ನಾಯಿಯ ಆರೈಕೆ ಮಾಡಬೇಕು. ಒಂದೆರಡು ನಾಯಿಗೆ ಚಿಕಿತ್ಸೆ ನೀಡಿದಾಗಲೇ ಸಿಬಂದಿ ತಂದ ನೀರು ಖಾಲಿ ಯಾಗಿತ್ತು. ಪಕ್ಕದ ಮನೆಯಿಂದ ನೀರು ತರುವುದಕ್ಕೆ ಸಿಬಂದಿಯೂ ಇಲ್ಲಿಲ್ಲ. ಇಂತಹ ಸ್ಥಿತಿಯನ್ನು ಹೋಗಲಾಡಿಸಿ, ಸುಸ್ಥಿತಿಗೆ ತಲುಪಿಸಬೇಕಾಗಿದೆ.

ವಿಟ್ಲ ಪಶು ಆಸ್ಪತ್ರೆಯಲ್ಲಿ ಸಿಬಂದಿ ತಾವು ಕುಡಿಯಲು ತಂದ ಬಾಟ್ಲಿಯಿಂದ ಕೊಟ್ಟ ನೀರಲ್ಲಿ ಕೈತೊಳೆಯಬೇಕು. ಈ ಅವ್ಯವಸ್ಥೆ ಬಗ್ಗೆ ಸಂಬಂಧಪಟ್ಟವರಿಗೆ ತಿಳಿಸಿದ್ದೇನೆ. ಆದರೆ ನೀರು ಸರಬರಾಜು ಮಾಡುವ ಬಗ್ಗೆ ಗಮನಹರಿಸಿದವರೇ ಇಲ್ಲ. -ಸೀತಾರಾಮ ಶೆಟ್ಟಿ ಒಕ್ಕೆತ್ತೂರು

ಚಿಕಿತ್ಸೆಗಾಗಿ ನಾಯಿಯನ್ನು ತೆಗೆದು ಕೊಂಡು ಹೋದೆ. ನಾಯಿ ಮುಟ್ಟಿದ ಬಳಿಕ ಕೈತೊಳೆಯಬೇಕೆಂದು ಕೇಳಿದಾಗ ಸಿಬಂದಿ, ತಾನು ಕುಡಿಯಲು ತಂದ ನೀರಿನ ಬಾಟ್ಲಿಯನ್ನು ನೀಡಿದರು. ಇಲ್ಲಿಗೆ ನೀರು ಸರಬರಾಜಾಗುವುದಿಲ್ಲ ಎಂದರು. -ಚಂದ್ರಶೇಖರ

ಶೇ. 20ರಷ್ಟು ಸಿಬಂದಿ :

ಇಲ್ಲಿ ಪಶು ವೈದ್ಯಾಧಿಕಾರಿಯಿಲ್ಲ. 8 ತಿಂಗಳ ಹಿಂದೆ ಇದ್ದ ವೈದ್ಯರು ಭಡ್ತಿ ಹೊಂದಿ ಮಡಿಕೇರಿಗೆ ವರ್ಗಾಯಿಸಲ್ಪಟ್ಟಿದ್ದಾರೆ. ಆ ಬಳಿಕ ಆ ಹುದ್ದೆ ಖಾಲಿಯಾಗಿದೆ. ಅಡ್ಯನಡ್ಕದ ವೈದ್ಯಾಧಿಕಾರಿ ಇಲ್ಲಿ ಪ್ರಭಾರ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕಾಗಿದೆ. ಇವರನ್ನು ಸೇರಿಸಿ ಇಲ್ಲಿ ಮೂವರೇ ತಾಂತ್ರಿಕ ಸಿಬಂದಿಯಿದ್ದು, ಓರ್ವ ಗ್ರೂಪ್‌ ಡಿ ನೌಕರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿಯ ಜಾನುವಾರು ವೈದ್ಯಾಧಿಕಾರಿ ಕನ್ಯಾನ ಮತ್ತು ಪರಿಯಾಲ್ತಡ್ಕ ಕೇಂದ್ರದ ಜವಾಬ್ದಾರಿಯನ್ನು ಹೊರಬೇಕು. ಹಿರಿಯ ಪಶು ವೈದ್ಯ ಪರೀಕ್ಷಕರಿಗೆ ಕುಡ್ತಮುಗೇರು ಕೇಂದ್ರವನ್ನು ನಿಭಾಯಿಸಬೇಕು. ಈ ಮೂವರು ತಾಂತ್ರಿಕ ಸಿಬಂದಿ 14 ಗ್ರಾಮಗಳ ಭಾರವನ್ನು ಹೊರಬೇಕು. ವಿಟ್ಲ, ವಿಟ್ಲಮುಟ್ನೂರು, ವಿಟ್ಲಪಟ್ನೂರು, ಕೊಳ್ನಾಡು, ಸಾಲೆತ್ತೂರು, ಕನ್ಯಾನ, ಕರೋಪಾಡಿ, ಪೆರುವಾಯಿ, ಮಾಣಿಲ, ಅಳಿಕೆ, ಕೇಪು, ಪುಣಚ, ಇಡಿRದು, ಕುಳ ಗ್ರಾಮಗಳಲ್ಲಿ ವಿಟ್ಲ, ಕುಡ್ತಮುಗೇರು, ಕನ್ಯಾನ, ಪರಿಯಾಲ್ತಡ್ಕದಲ್ಲಿ ಪಶು ಚಿಕಿತ್ಸಾ ಕೇಂದ್ರಗಳಿದ್ದು ಶೇ. 20ರಷ್ಟು ಸಿಬಂದಿಯಿದ್ದಾರೆ. ಉಳಿದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವವರೂ ಇಲ್ಲವಾಗಿದೆ.

 

-ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.