ಜಾಗರೂಕತೆಯೇ ರಕ್ಷಾ ಕವಚ


Team Udayavani, May 3, 2021, 3:40 AM IST

ಜಾಗರೂಕತೆಯೇ ರಕ್ಷಾ ಕವಚ

ಶತಮಾನದ ಮಹಾಮಾರಿ ಎಂದು ಜಾಗತಿಕವಾಗಿ ಪರಿಗಣಿತವಾಗಿರುವ ಕೋವಿಡ್ ಸೋಂಕಿನ ಎರಡನೇ ಅಲೆ ಕಳೆದ ಬಾರಿಗಿಂತಲೂ ಹೆಚ್ಚು ತೀವ್ರತೆಯನ್ನು  ಪಡೆದುಕೊಂಡಿರುವುದು ನಮಗೆಲ್ಲರಿಗೂ ಇದು ಮುನ್ನೆಚ್ಚರಿಕೆಯ ಸಂಕೇತವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ  ಹೆಚ್ಚು ಆತಂಕದ ವಲಯದಲ್ಲಿದೆ. ಸರಕಾರ 14 ದಿನಗಳ ಲಾಕ್‌ಡೌನ್‌ ಮಾದರಿಯ ಕಠಿನ ನಿಯಮಗಳನ್ನು ಘೋಷಿಸಿದೆ. ಪರಿಸ್ಥಿತಿ ಇನ್ನಷ್ಟು ಗಂಭೀರತೆ ಪಡೆದುಕೊಳ್ಳುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮಗಳತ್ತ ಗಮನಹರಿಸುವುದು ಅನಿವಾರ್ಯ.

ಲಾಕ್‌ಡೌನ್‌ ಅವಧಿಯಲ್ಲಿ  ಸರಕಾರ ಸೂಚಿಸಿದ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುವುದು, ವ್ಯವಹಾರಗಳನ್ನು ನಡೆಸುವುದು. ಜನಸಂದಣಿ ಸೇರುವುದು, ಉಡಾಫೆ ವರ್ತನೆ  ಮುಂತಾದುವುಗಳು ಕಂಡು ಬರುತ್ತಿದೆ. ಲಾಕ್‌ಡೌನ್‌, ನಿಯಮ, ನಿರ್ದೇಶನ, ನಿರ್ಬಂಧಗಳನ್ನು ಸರಕಾರ ಜಾರಿಗೊಳಿಸಿರುವುದು ಜನರ ಹಿತವನ್ನು ಕಾಯುವ ಉದ್ದೇಶದಿಂದ ಎನ್ನುವುದು ಮರೆಯಬಾರದು. ಈ ಕ್ರಮಗಳ ಬಗ್ಗೆ ಅಸಡ್ಡೆ  ವಹಿಸುವುದು, ನಿಯಮಗಳನ್ನು ಉಲ್ಲಂಘಿಸಿ , ಒಂದು ರೀತಿಯ ಉಡಾಫೆ ಮನೋಭಾವನದ ವರ್ತನೆಯಿಂದ ಈಗಲಾದರೂ ನಾವೆಲ್ಲ ಹೊರಬರಬೇಕು. ಸೋಂಕು ಹರಡುವಿಕೆ ನಿಯಂತ್ರಣ ಮತ್ತು ಹತೋಟಿಯ ನಿಟ್ಟಿನಲ್ಲಿ ಸೋಂಕಿನ  ಸಂಪರ್ಕ ಕೊಂಡಿಯನ್ನು (ಚೈನ್‌) ಕಳಚುವುದೇ ಇದರ ಉದ್ದೇಶ.

ಜನತೆ ನೀಡುವ ಸಹಕಾರದಿಂದ ಮಾತ್ರ ಲಾಕ್‌ಡೌನ್‌ನ ಉದ್ದೇಶ ಸಫಲತೆಯನ್ನು ಕಾಣಲು ಸಾಧ್ಯವಾಗುತ್ತದೆ. ಕಳೆದ ವರ್ಷ ಸುಮಾರು 3 ತಿಂಗಳ ಕಾಲ ಜಿಲ್ಲೆ  ಲಾಕ್‌ಡೌನ್‌ಗೊಳಗಾಗಿ ಯಾವ ರೀತಿ ಸಂಕಷ್ಟವನ್ನು ಅನುಭವಿಸಿದೆ ಎಂಬ ದೃಷ್ಟಾಂತ ನಮ್ಮೆಲ್ಲರ ಕಣ್ಣ ಮುಂದಿದೆ. ಈ ವರ್ಷವೂ ನೈಟ್‌ ಕಪ್ಯೂì, ಕಠಿನ ನಿಯಮ , ವಾರಾಂತ್ಯ ಕರ್ಫ್ಯೂ, ಲಾಕ್‌ಡೌನ್‌ ಮಾದರಿಯ ಕಪ್ಯೂìನಿಂದ ಜಿಲ್ಲೆ  ನಲುಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರಕಾರ  ಏನೆಲ್ಲ ಮಾಡಬೇಕು ಅದನ್ನು ಮಾಡುತ್ತದೆ. ಅದಕ್ಕೆ ಪೂರಕವಾಗಿ ಸ್ಪಂದಿಸುವ ಉತ್ತರದಾಯಿತ್ವ ನಮ್ಮ ಮೇಲೂ ಇದೆ. ಜನರಿಗೆ ಸಮಸ್ಯೆಯಾಗಬಾರದು ಎಂಬುದಾಗಿ ಬೆಳಗ್ಗಿನ ಅವಧಿಯಲ್ಲಿ ಅಗತ್ಯ ವಸ್ತುಗಳ ವ್ಯಾಪಾರಕ್ಕೆ  ಅವಕಾಶ ಮಾಡಿ ಕೊಟ್ಟಿದೆ. ಒಂದಷ್ಟು ಚಟುವಟಿಕೆಗಳಿಗೂ ಅವಕಾಶ ನೀಡಿದೆ. ಈ ಅವಕಾಶಗಳನ್ನು ಬಳಸಿಕೊಂಡು, ನಿಯಮಗಳನ್ನು ಪಾಲಿಸಿಕೊಂಡು ಒಂದಷ್ಟು ಸಮಯ ಆಡಳಿತ ವ್ಯವಸ್ಥೆಯೊಂದಿಗೆ  ಸಹಕರಿಸುವುದು  ಅಗತ್ಯವಾಗಿದೆ. ಜನಪ್ರತಿನಿಧಿಗಳು  ಕೂಡ ಪರಿಸ್ಥಿತಿಯ ಗಂಭೀರತೆ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದರೆ ಅಲ್ಲಿ  ಸಂಘರ್ಷಕ್ಕೆ ಆಸ್ಪದವಾಗಲಾರದು.

ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್‌ ಮಾದರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸುವಲ್ಲಿ ಆಡಳಿತ ವ್ಯವಸ್ಥೆಯೂ ಮೃದು ಧೋರಣೆ ಅನುಸರಿಸುತ್ತಿರುವುದು ಕಂಡುಬರುತ್ತಿದೆ. ಇದು ಕೂಡ ನಿಯಮಗಳ ಉಲ್ಲಂಘನೆಗೆ  ಕಾರಣವಾಗಿದೆ.

ಸೋಂಕು ತಡೆಯಲು ಸರಕಾರ, ತಜ್ಞರು, ಹೊರಡಿಸಿರುವ ಮಾರ್ಗಸೂಚಿಗಳು, ಲಾಕ್‌ಡೌನ್‌ ಮಾದರಿ ಕರ್ಫ್ಯೂ ವೇಳೆ ವಿಧಿಸಿರುವ ನಿಯಮಗಳಿಗೆ ಬದ್ಧರಾಗಿ ನಡೆದರೆ ಜಿಲ್ಲೆ ಮತ್ತೆ ಲಾಕ್‌ಡೌನ್‌ಗೆ ಒಳಗಾಗುವ ಅನಿವಾಯರ್ತೆಯಿಂದ ಪಾರಾಗಲು ಸಾಧ್ಯವಿದೆ. ಈ ನಿಟ್ಟಿನಲ್ಲಿ  ಸರಕಾರ, ಜಿಲ್ಲಾಡಳಿತ  ನೀಡಿರುವ ನಿರ್ದೇಶನಗಳನ್ನು  ಎಲ್ಲರೂ ಪಾಲಿಸಿ ಸಹಕರಿಸುವುದು ಪ್ರಸ್ತುತ ಪರಿಸ್ಥಿತಿಗೆ ತುರ್ತು ಅಗತ್ಯವಾಗಿದೆ. ಇಂದಿನ ಸ್ಥಿತಿಯಲ್ಲಿ ಗರಿಷ್ಠ ಜಾಗರೂಕತೆಯೇ ನಮಗೆ ರಕ್ಷಾ ಕವಚವಾಗಿದೆ. ಆದುದರಿಂದ ಯಾರೂ ಏನೇ ಹೇಳಿದರೂ ಅವರವರು ಜಾಗರೂಕತೆ ವಹಿಸುವುದು ಅವರ ಮತ್ತು ಅವರ ಮನೆಯವರ ಆರೋಗ್ಯದ ದೃಷ್ಟಿಯಲ್ಲಿ ಉತ್ತಮ. ಪರಿಸ್ಥಿತಿ ಕೈ ಮೀರಿದ ಮೇಲೆ ಚಿಂತಿಸಿ ಪ್ರಯೋಜನವಿಲ್ಲ. ಈಗಲೇ ಎಚ್ಚರಿಕೆ ವಹಿಸೋಣ.

  -ಸಂ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.