ನಂದಿಗ್ರಾಮದಲ್ಲಿ ಸೋತರೂ ದೀದಿ ಸಿಎಂ ಆಗ್ತಾರಾ? ಆಯ್ಕೆ ಏನು?
Team Udayavani, May 3, 2021, 7:45 AM IST
ಕೋಲ್ಕತ್ತಾ: ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ತಮ್ಮ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದ ಸಿಎಂ ಮಮತಾ ಬ್ಯಾನರ್ಜಿ, ನಂದಿಗ್ರಾಮದಲ್ಲಿ ತಮ್ಮ ಒಂದು ಕಾಲದ ಆಪ್ತ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ಸೋಲುಂಡಿದ್ದಾರೆ.
ಸದ್ಯ ದೀದಿ ಸೋತಿರುವ ಕಾರಣ ಅವರು “ಸಿಎಂ” ಹುದ್ದೆಗೆ ಏರಲು ಆಗುತ್ತದೆಯೇ ಎಂಬ ಪ್ರಶ್ನೆ ಹಲವರದ್ದು. ಅದಕ್ಕೆ ಉತ್ತರ ಇಲ್ಲಿದೆ: ದೀದಿ ಸಿಎಂ ಹುದ್ದೆಗೆ ಏರಲು ಸಾಧ್ಯವಿದೆ. ಇಲ್ಲಿ ಅವರಿಗೆ 2 ಆಯ್ಕೆಗಳಿವೆ.
ಇದನ್ನೂ ಓದಿ:ಅಸ್ಸಾಂನಲ್ಲಿ ಕಮಲ 2ನೇ ಇನ್ನಿಂಗ್ಸ್
ಮೊದಲನೆಯದ್ದು, ಟಿಎಂಸಿಯ ನೂತನ ಶಾಸಕರು ಮಮತಾರನ್ನು ಶಾಸಕಾಂಗ ಪಕ್ಷದ ನಾಯಕಿ ಎಂದು ಘೋಷಿಸುವುದು. ಇದಾದ ಬಳಿಕ 6 ತಿಂಗಳ ಒಳಗಾಗಿ ವಿಧಾನಪರಿಷತ್ ಸದಸ್ಯೆ (ಎಂಎಲ್ಸಿ)ಯಾಗಿ ಆಯ್ಕೆಯಾಗಿ ಮಮತಾ ಸಿಎಂ ಹುದ್ದೆಗೆ ಏರಬಹುದು.
ಎರಡನೆಯದ್ದು, ಖಾಲಿಯಿರುವ ಯಾವುದಾದರೂ ಕ್ಷೇತ್ರ (ಉದಾ: ಖರ್ದಾಹಾ)ದಲ್ಲಿ ನಾಮಪತ್ರ ಸಲ್ಲಿಸಿ, 6 ತಿಂಗಳೊಳಗೆ ಉಪಚುನಾವಣೆಯಲ್ಲಿ ಗೆದ್ದು ಬಂದು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಹುದು. ನಿತೀಶ್ ಕುಮಾರ್, ಯೋಗಿ ಆದಿತ್ಯನಾಥ್, ಉದ್ಧವ್ ಠಾಕ್ರೆ, ಮಾಯಾವತಿ, ಅಖೀಲೇಶ್, ಮನೋಹರ್ ಪರ್ರಿಕರ್ ಮತ್ತಿತರರು ಕೂಡ ಈ ರೀತಿಯ ಅವಕಾಶ ಬಳಸಿಕೊಂಡು ಸಿಎಂ ಹುದ್ದೆಗೆ ಏರಿದ್ದರು.
ಇದನ್ನೂ ಓದಿ: ಹಣ ಕೊಟ್ಟು ಮತ ನೀಡಿ ಎನ್ನುವ ನೀಚರ ಕಪಾಳಕ್ಕೆ ಬಾರಿಸಿ: ನಟ ಉಪೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ