ಪುತ್ರಶೋಕದ ನಡುವೆ ಕಾರಂತರ ವೈರಸ್‌ ವ್ಯಾಖ್ಯಾನ


Team Udayavani, May 4, 2021, 6:00 AM IST

ಪುತ್ರಶೋಕದ ನಡುವೆ ಕಾರಂತರ ವೈರಸ್‌ ವ್ಯಾಖ್ಯಾನ

ಡಾ|ಶಿವರಾಮ ಕಾರಂತರು ಸಾಹಿತಿಯಾಗಿ ಪ್ರಸಿದ್ಧರಾದರೂ ಅವರು ಕೈಯಾಡಿಸಿದ ಅನೇಕ ಕ್ಷೇತ್ರಗಳಲ್ಲಿ ವಿಜ್ಞಾನವೂ ಒಂದು. ಮಕ್ಕಳ ಕಲಿಕೆ, ವಿಜ್ಞಾನ ಪ್ರಪಂಚದ ಪುಸ್ತಕಗಳನ್ನು ಬರೆದದ್ದಲ್ಲದೆ, ಅನೇಕ ವಿಜ್ಞಾನ ವಿಚಾರ ಸಂಕಿರಣಗಳಲ್ಲಿ ದಿಕ್ಸೂಚಿ ಭಾಷಣ ಮಾಡಿದವರು, ಅಣು ವಿದ್ಯುತ್‌ ಸ್ಥಾವರದ ಅನಾಹುತಗಳನ್ನು ಅಧ್ಯಯನ ನಡೆಸಿ ಸ್ಥಾವರದ ಪರವಾಗಿದ್ದ ವಿಜ್ಞಾನಿಗಳನ್ನು ನೇರವಾಗಿ ತರಾಟೆಗೆ ತೆಗೆದುಕೊಂಡವರು. 1960-61ರಲ್ಲಿಯೇ ಮಗನ ಅನಿರೀಕ್ಷಿತ ಸಾವು ಸಂಭವಿಸಿದ ಗಂಡಾಂತರದಲ್ಲೂ ವೈರಸ್‌ನ ಗುಣಾವಗುಣಗಳನ್ನು ಪ್ರತಿಪಾದಿಸಿದ “ಸ್ಥಿತಪ್ರಜ್ಞ’. ಈಗ ಕೋವಿಡ್ ವೈರಸ್‌ ಎಲ್ಲರನ್ನೂ ಚಿಂತೆಗೀಡು ಮಾಡಿದೆ.

60 ವರ್ಷಗಳ ಹಿಂದೆಯೇ ನಿಸರ್ಗದ ಕಾರುಬಾರು ಗಳನ್ನು ಡಾ|ಕಾರಂತರು ಸೂಕ್ಷ್ಮವಾಗಿ ಅಲ್ಲದಿದ್ದರೂ ಸ್ಥೂಲವಾಗಿ ವಿಮರ್ಶಿಸಿದ್ದಾರೆನ್ನಬಹುದು, ಅದೂ ಮಗನ ಸಾವಿನ ದಾರುಣ ಅನುಭವದ ನಡುವೆ. ದೇವರೆಂಬವನೊಬ್ಬನಿದ್ದರೆ ಆತ ನಿಷ್ಪಕ್ಷಪಾ ತಿಯಾಗಿದ್ದಾನು ಎಂಬ ವಿಮರ್ಶೆ ಮಹಾನ್‌ ದಾರ್ಶನಿಕರು ಹೇಳಿದ್ದೇ ಆಗಿದೆ. ಶ್ರೀಕೃಷ್ಣನ ಕರ್ಮಸಿದ್ಧಾಂತವೂ ಇದನ್ನೇ ಬೋಧಿಸುವುದಲ್ಲವೆ? ಸಾವಿನ ಸ್ವಂತ ಅನುಭವದ ನಡುವೆಯೂ ದೇವರ ಬಗೆಗೆ ಖಚಿತವಾಗಿ (ಪರರಿಗೆ ಉಪದೇಶಕ್ಕಾಗಿಯಲ್ಲ, ಪ್ರಾಮಾಣಿಕವಾಗಿ, ಸ್ವಯಂ ಪ್ರಯೋಗಕ್ಕೆ ಒಡ್ಡಿ) ಮಾತನಾಡಬಲ್ಲ ಆಸ್ತಿಕರ ಮತ್ತು ನಾಸ್ತಿಕರ ಕೊರತೆ ಇರುವಾಗ ವಿದ್ವಾಂಸ ಡಾ|ಪ್ರಭಾಕರ ಜೋಶಿ ಅವರು ಸಭೆಯೊಂದರಲ್ಲಿ “ಕಾರಂತರು ನಾಸ್ತಿಕರೂ ಅಲ್ಲ, ಆಸ್ತಿಕರೂ ಅಲ್ಲ, ಅವರು ಅನಾಸ್ತಿಕರು’ ಎಂದು ಹೇಳಿದ್ದನ್ನು ಸ್ಮರಿಸಬಹುದು.

1960ರಲ್ಲಿ ಡಾ|ಶಿವರಾಮ ಕಾರಂತರು ಪುತ್ತೂರಿನಲ್ಲಿ ನೆಲೆಸಿದ್ದರು. ಅವರ ಸಂಸಾರವನ್ನು ಕಾಡಿದ ಘಟನೆ ಹಿರಿಯ ಪುತ್ರ ಹರ್ಷನ ಅನಿರೀಕ್ಷಿತ ಸಾವು. ಆತನಿಗೋ ನವ ಯವ್ವನದ 22 ವರ್ಷ.

ಕ್ಯಾನ್ಸರ್‌ ಬೇನೆಯಿಂದ ನಲುಗಿದ್ದ. ಆಗ ಮುಂಬಯಿ ಯಲ್ಲಿದ್ದ ಪ್ರಸಿದ್ಧ ವೈದ್ಯ ಡಾ|ಎ.ವಿ.ಬಾಳಿಗಾ ಎದೆಯೊಳಗೆ ಬೆಳೆದ ದುರ್ಮಾಂಸವನ್ನು ಶಸ್ತ್ರ ಚಿಕಿತ್ಸೆಯಿಂದ ಹೊರತೆಗೆದಿದ್ದರು.

ಡಾ|ಕಾರಂತರಿಗೆ ಬೆಂಗಳೂರಿನಲ್ಲಿ ವೈದ್ಯ ಮಿತ್ರರಿದ್ದರು. ಅವರ ಹೆಸರೂ ಶಿವರಾಮನೇ. ಮಗನ ಅನಾರೋಗ್ಯ ನಿಮಿತ್ತ ಡಾ| ಶಿವರಾಮರಿಗೆ ಡಾ|ಶಿವರಾಮ ಕಾರಂತರು ಪತ್ರ ಬರೆಯುತ್ತಿದ್ದರು. ಡಾ|ಶಿವರಾಮರು ತುಂಬಾ ಆಸ್ತಿಕರು. ಅವರು ಬರೆದ ಒಂದು ಪತ್ರದಲ್ಲಿ “ದೇವರಲ್ಲಿ ಮೊರೆ ಇಡಿ. ನಿಮ್ಮ ಮಗನನ್ನು ಆತ ವಿಪತ್ತಿನಿಂದ ಪಾರುಮಾಡಿಯಾನು’ ಎಂದು ಬರೆದಿದ್ದರು. ಡಾ|ಕಾರಂತರು ಆ ಪತ್ರಕ್ಕೆ ದೇವರನ್ನು ಹೆಸರಿಸದೆ ಒಂದು ಪತ್ರ ಬರೆದರು. ಅದರ ಸಾರಾಂಶ ಹೀಗಿದೆ:

“ಪ್ರಕೃತಿಯಲ್ಲಿ ಒಂದು ಜೀವ ಇನ್ನೊಂದು ಜೀವದ ಮೇಲೆ ಬದುಕಿಕೊಂಡಿದೆ. ನಿಸರ್ಗ ವೈರಸ್‌ಗಳನ್ನು ಕಾಯಬೇಕಾಗುತ್ತದೆ. ಆ ವೈರಸ್‌ ಬದುಕಲು ಪರರ ಜೀವಗಳನ್ನು ಬಲಿ ಪಡೆಯಬೇಕಾಗುತ್ತದೆ. ನಿಸರ್ಗಕ್ಕೆ ಯಾವ ಜೀವಿ ಮುಖ್ಯ? ಯಾವುದು ಅಮುಖ್ಯ? ನನ್ನ ಮಗ ಒಂದೇನು ಹೆಚ್ಚು? ಒಂದು ಅಣುಜೀವಿಯೇನು ಕಡಿಮೆ? ನೀವೆನ್ನುವಂತೆ ಪ್ರತ್ಯೇಕ ದೈವವೊಂದು, ಅನಾಥರನ್ನು ಕಾಯಬಲ್ಲ ಶಕ್ತಿಯೊಂದು ಇದೆ- ಎಂದು ತಿಳಿಯುವಲ್ಲಿ, ಆ ದೈವ ನನ್ನ ಮೊರೆಯನ್ನು ಕೇಳಿ ನನ್ನ ನೆರವಿಗೆ ಧಾವಿಸಿ ಬರಬೇಕೆ? ಅಥವಾ ಉಳಿಯುವುದಕ್ಕೆ ಯಾರು ಯೋಗ್ಯರು ಎಂದು ತಾನೇ ಕಂಡು ಹಿಡಿದು, ತಾನೇ ಆಯ್ದು ಸಹಾಯ ನೀಡಬೇಕೆ? ನನಗಿಂತ ಹೆಚ್ಚಾಗಿ ದೈವಭಕ್ತಿಯಲ್ಲಿ ದಿನ ಕಳೆಯುವ ಅನೇಕ ಜೀವಗಳಿದ್ದಾವೆ ಎಂಬುದನ್ನು ಬಲ್ಲೆ. ಅಂಥವರ ನೆರವಿಗೆ ದೈವ ಮೊದಲು ಧಾವಿಸಬೇಡವೆ? ಆ ಜನಗಳ ಯೋಗ್ಯತೆಗಿಂತ ನಾನೋ ನನ್ನ ಮಗನೋ ಬದುಕಲು ಹೆಚ್ಚಿಗೆ ಹಕ್ಕುಳ್ಳವರು ಎಂಬ ಭಾವನೆ ನನ್ನಿಂದ ತಂದುಕೊಳ್ಳುವುದು ಅಸಾಧ್ಯ’.

1926-27ರಲ್ಲಿ ಮಂಗಳೂರಿನಲ್ಲಿದ್ದಾಗ ಕಾರಂತರಿಗೆ ಸನ್ನಿಪಾತದ ಜ್ವರ ಬಂದಿತ್ತು. ಆಗ ಆನಂದರಾಮ ಭಟ್ಟ ಎಂಬವರ ಮನೆಯಲ್ಲಿ ಭಟ್ಟರ ಹೆಂಡತಿ ಕಾರಂತರ ಆರೈಕೆ ಮಾಡಿದ್ದರು. ಭಟ್ಟರ ಹೆಂಡತಿ ಒಂದು ದಿನ ಒಂದಿಷ್ಟು ಗಂಧಪ್ರಸಾದವನ್ನು ಕೊಟ್ಟು “ದೇವರೇ ಬೇಗ ಗುಣ ಮಾಡು ಎಂದು ಬೇಡಿ’ ಎಂದು ಬೋಧಿಸಿದರು. ಗಂಧವನ್ನು ಕಾರಂತರು ಹಚ್ಚಿಕೊಂಡರು. ಆಗ ಕಾರಂತರ ಮನದಲ್ಲಿ ಮೂಡಿದ್ದು ಹೀಗೆ: “ನಾನು ನನ್ನನ್ನು ಬದುಕಿಸುವುದಕ್ಕಾಗಿ ದೇವರಲ್ಲಿ ಮೊರೆ ಇಡಬೇಕೆ? ಯಾತಕ್ಕೆ? ಅಸಂಖ್ಯ ಕೋಟಿ ಜೀವಿಗಳು ಪ್ರತೀ ಕ್ಷಣಕ್ಕೂ ಎಂಬಂತೆ ಹುಟ್ಟುತ್ತಲೇ ಇವೆ. ಸಾಯುತ್ತಲೇ ಇವೆ ಎಂಬುದು ನನಗೆ ಗೊತ್ತಿದೆ. ಅಂಥಲ್ಲಿ ಬರಿಯ ನನ್ನ ಒಂದು ಜೀವವನ್ನು ಉಳಿಸಲು ದೇವರಿಗೆ ಅರ್ಜಿ ಹಾಕಬೇಕಾದ ಪಾವಿತ್ರ್ಯ ಅದಕ್ಕೆ ಎಲ್ಲಿಂದ ಬಂತು? “ದೇವರಿದ್ದಾನೆ’ ಎಂದು ಎಣಿಸಿದ ಆ ಕಾಲದಲ್ಲಿಯೂ ಆ ರೀತಿ ಪ್ರಾರ್ಥನೆ ಮಾಡಲಾರದ, ಮೃತ್ಯುಮುಖೀಗಳಾದ ಇತರ ಜೀವಿಗಳನ್ನು ಮರೆತು, ಆ ದೇವರು ನನ್ನ ಮೊರೆಯನ್ನು ಕೇಳಿ ಮನ್ನಿಸಲಿ ಎಂದು ತಿಳಿಯುವುದು ಅದೆಷ್ಟು ಮೂರ್ಖತನ ಎನಿಸಿತು’.

“ಹುಚ್ಚು ಮನಸ್ಸಿನ ಹತ್ತು ಮುಖಗಳು’ ಆತ್ಮಕಥನದಲ್ಲಿ ತನ್ನ ಜೀವನದ ಅನೇಕ ಸಾವಿನ ಸನ್ನಿವೇಶಗಳು, ಅದು ಸಂಸಾರದ ಮೇಲೆ ಬೀರಿದ ಪರಿಣಾಮವನ್ನು ಕಂಡ ಡಾ|ಕಾರಂತರು ಹಿಂದಿನಿಂದಲೂ ಒಂದು ವಿವೇಕ ಮಾತ್ರ ಇಂದಿಗೂ ಉಳಿದುಬಂದಿದೆ. ಅದೆಂದರೆ “ದೇವರು ನಮಗಾಗಿ ಇಲ್ಲ, ಅವನಿರುವನಾದರೆ ಆತ ಯಾವತ್ತು ಜಗತ್ತಿನ ಜೀವಿಗಳಿಗೆ ನಿಷ್ಪಕ್ಷಪಾತಿಯಾಗಿದ್ದಾನು’ ಎಂಬ ವಿಚಾರ ಸರಣಿ ಎಂದು ಉಲ್ಲೇಖೀಸಿದ್ದಾರೆ. 1920ರ ದಶಕದಿಂದ 1990ರ ದಶಕದವರೆಗೂ ಅವರಲ್ಲಿದ್ದ ವಿಚಾರ ಸಾರ ಇದು.

ಶಿವರಾಮ ಕಾರಂತರ ಮಗ ಹರ್ಷನಿಗೆ ಶಸ್ತ್ರ ಚಿಕಿತ್ಸೆ ನಡೆಸಿದ ಎ.ವಿ.ಬಾಳಿಗಾ ಅವರೂ ದೊಡ್ಡ ಉದಾತ್ತಶೀಲರು. ಉಡುಪಿ ದೊಡ್ಡಣಗುಡ್ಡೆಯ ಬಾಳಿಗಾ ಆಸ್ಪತ್ರೆಯನ್ನು ಎ.ವಿ.ಬಾಳಿಗಾರಿಂದ ಪ್ರವರ್ತಿತವಾದ ಚಾರಿಟೆಬಲ್‌ ಟ್ರಸ್ಟ್‌ ನಡೆಸುತ್ತಿದೆ, ಬಾಳಿಗರು ಮಣಿಪಾಲದ ಪೈ ಬಂಧುಗಳ ಬಂಧುಗಳು,  ಮಣಿಪಾಲ ಆಸ್ಪತ್ರೆಯಲ್ಲಿ ಒಂದು ಬ್ಲಾಕ್‌ ಇವರ ಹೆಸರಿನಲ್ಲಿದೆ. ಹೈದರಾಬಾದ್‌ ನಿಜಾಮನಿಗೆ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಿ ಅದರ ಶುಲ್ಕವನ್ನು (25,000 ರೂ.) ಕುಮಟಾದ ಎ.ವಿ.ಬಾಳಿಗಾ ಕಾಲೇಜಿಗೆ ದಾನವಾಗಿ ಕೊಡಿಸಿದವರು.

 

ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.