ಕಂದಕಕ್ಕೆ ಉರುಳಿದ ಬಸ್ : 15 ಜನರ ದುರ್ಮರಣ
Team Udayavani, May 4, 2021, 1:40 PM IST
ಇಸ್ಲಾಮಾಬಾದ್ : ಕಂದಕಕ್ಕೆ ಬಸ್ ಉರುಳಿ 15 ಜನರು ಸಾವನ್ನಪ್ಪಿ, 35 ಜನರು ಗಾಯಗೊಂಡಿರುವ ದುರಂತ ಘಟನೆ ಪಾಕಿಸ್ತಾನದಲ್ಲಿ ಮಂಗಳವಾರ ನಡೆದಿದೆ.
ಇಂದು ಮುಂಜಾನೆ ಪಾಕ್ನ ಪಂಜಾಬ್ ಪ್ರಾಂತ್ಯದ ಅಟೋಕ್ ಜಿಲ್ಲೆಯ ಹಸನ್ ಅಬ್ದಾಲ್ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಪಘಾತಕ್ಕೀಡಾದ ಬಸ್ ಲಾಹೋರ್ನಿಂದ ಖೈಬರ್-ಪಖ್ತುನ್ಖ್ವಾ ಪ್ರಾಂತ್ಯದ ಮರ್ದಾನ್ ಕಡೆಗೆ ಪ್ರಯಾಣಿಸುತ್ತಿತ್ತು. ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರಕ್ಷಣಾ ಕಾರ್ಯ ಮುಕ್ತಾಯವಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಪಾಕ್ನಲ್ಲಿ ಅಪಘಾತಗಳು ಸರ್ವೆ ಸಾಮಾನ್ಯವಾಗಿವೆ. ಅಲ್ಲಿಯ ರಸ್ತೆಗಳು ಅಪಘಾತಕ್ಕೆ ಅಹ್ವಾನ ನೀಡುವಂತೆ ಇವೆ ಎಂದು ಸ್ಥಳೀಯರು ಹೇಳಿದ್ದಾರೆ.