ಹಳೇ ದರದಲ್ಲಿ ರಸಗೊಬ್ಬರ ವಿತರಿಸಲು ಆಗ್ರಹ


Team Udayavani, May 4, 2021, 10:10 PM IST

4-15

ಹೊಸಪೇಟೆ: ಹಳೇ ದರದಲ್ಲಿ ರಸ ಗೊಬ್ಬರವನ್ನು ವಿತರಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ನಾಗರಿಕ ವೇದಿಕೆ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ವೈ. ಯಮುನೇಶ್‌ ಮಾತನಾಡಿ, ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರ್ನಾಟಕದಲ್ಲಿ ಉತ್ತಮ ಮುಂಗಾರು ಮಳೆ ಸುರಿಯಲಿದ್ದು ಸಹಜವಾಗಿಯೆ ರೈತಾಪಿ ವರ್ಗದಲ್ಲಿ ಹರ್ಷ ಮೂಡಿದೆ. ಈಗಾಗಲೇ ಮುಂಗಾರು ಬಿತ್ತನೆಯ ಪೂರ್ವಭಾವಿ ಕೃಷಿ ಚಟುವಟಿಕೆಯಲ್ಲಿ ರೈತರು ತೊಡಗಿರುವಾಗ ರಸಗೊಬ್ಬರಗಳ  ದಿಢೀರ್‌ ಬೆಲೆ ಏರಿಕೆಯಿಂದ ಕೃಷಿಕರಿಗೆ ಶಾಕ್‌ ನೀಡಿದಂತಾಗಿದೆ. ಕೆಲ ದಿನಗಳ ಹಿಂದೆ ರಾಜ್ಯದ ಕೃಷಿ ಇಲಾಖೆಯ ಆಯುಕ್ತರು ಹೇಳಿಕೆ ನೀಡಿ ಕಳೆದ ಸಾಲಿನ 11.55ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ಗೋದಾಮಿನಲ್ಲಿ ದಾಸ್ತಾನಿದ್ದು, ಪ್ರಾಥಮಿಕ ಕೃಷಿ ಸಹಕಾರ ಸಂಘ ಹಾಗೂ ಖಾಸಗಿ ಮಾರಾಟಗಾರರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 11000 ರಸಗೊಬ್ಬರ ಮಳಿಗೆಗಳ ಮೂಲಕ ಹಳೇ ದರದಲ್ಲಿ ರಸಗೊಬ್ಬರ ಪೂರೈಕೆಯಾಗಲಿದ್ದು ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದರು.

ಆದರೆ ಇದೀಗ ವಿಜಯನಗರ ಜಿಲ್ಲೆ ಮತ್ತಿತರ ಕಡೆ ಹೊಸ ದರದಲ್ಲೇ ಗೊಬ್ಬರ ಮಾರಲಾಗುತ್ತಿದೆ. ಹಳೇ ದರದಲ್ಲಿ 50 ಕೆಜಿ ಚೀಲಕ್ಕೆ 1300 ರೂ ಗಳಿದ್ದ ಇಪ್ಕೋ ಡಿಎಪಿ ಗೊಬ್ಬರ ಹೊಸದರದಲ್ಲಿ 1900 ರೂಗಳಿದ್ದರೆ, 1350 ರೂಪಾಯಿಗಳಿದ್ದ ಮಂಗಳ ಡಿಎಪಿ 1700 ರೂ ಹೆಚ್ಚಿಸಲಾಗಿದೆ. ಅದೇ ರೀತಿ ಪೊಟಾಷ್‌, ಎಂ.ಓ.ಪಿ ಹಾಗೂ ವಿವಿಧ ಗ್ರೇಡಿನ ಕಾಂಪ್ಲೆಕ್ಸ್‌ ಗೊಬ್ಬರಗಳ ಬೆಲೆ ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರ ಹಳೇ ದರದಲ್ಲಿ ರಸಗೊಬ್ಬರ ಪೂರೈಕೆಗೆ ತುರ್ತು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಸಣ್ಣ ಮಾರೆಪ್ಪ, ಆಂಜನೇಯಲು, ಸುಭಾಷ್‌ ಚಂದ್ರ, ಕಂಪ್ಲಿ ನಾಗರಾಜ, ಎಚ್‌.ತಿಪ್ಪೇಸ್ವಾಮಿ, ಆರ್‌. ರಮೇಶ್‌ ಗೌಡ, ಕೆ.ಸುರೇಶ, ಜೆ.ರಾಘವೇಂದ್ರ, ಷೇಕ್‌ ಮೆಹಬೂಬ್‌ ಭಾಷಾ, ಶ್ರೀಧರ ಹಾಗೂ ಪ್ರಕಾಶ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.