ಐಪಿಎಲ್‌ ಕೂಟದ ಅಮಾನತು; ಆಟಗಾರರ ದೃಷ್ಟಿಯಿಂದ ಉತ್ತಮ ನಿರ್ಧಾರ


Team Udayavani, May 5, 2021, 6:10 AM IST

ಐಪಿಎಲ್‌ ಕೂಟದ ಅಮಾನತು; ಆಟಗಾರರ ದೃಷ್ಟಿಯಿಂದ ಉತ್ತಮ ನಿರ್ಧಾರ

ದೇಶದಲ್ಲಿ ಕೋವಿಡ್ ಭೀಕರ ಸ್ವರೂಪ ತಾಳಿರುವುದು ಐಪಿಎಲ್‌ ಮೇಲೂ ಪರಿಣಾಮ ಬೀರಿದೆ. ಕೋಲ್ಕತಾ ನೈಟ್‌ರೈಡರ್ಸ್‌, ಚೆನ್ನೈ ಸೂಪರ್‌ ಕಿಂಗ್ಸ್‌, ಸನ್‌ರೈಸರ್ಸ್‌ ಹೈದರಾಬಾದ್‌, ಡೆಲ್ಲಿ ಕ್ಯಾಪಿಟಲ್ಸ್‌ ತಂಡಗ ಳಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಪೈಕಿ ಚೆನ್ನೈ ಕಿಂಗ್ಸ್‌ ತಂಡದಲ್ಲಿನ ಯಾವ ಆಟಗಾರರಿಗೂ ಸೋಂಕು ತಗಲಿಲ್ಲ. ಆದರೆ ಸಹಾಯಕ ಸಿಬಂದಿ ಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಉಳಿದ ಮೂರೂ ತಂಡಗಳಲ್ಲಿ ಒಬ್ಬಿಬ್ಬರು ಆಟಗಾರರಿಗೆ ಕೊರೊನಾ ಬಂದಿರುವುದು ಖಾತ್ರಿಯಾಗಿದೆ. ಸೋಮವಾರ ಪ್ರಕರಣಗಳು ಬೆಳಕಿಗೆ ಬಂದಾಗ ಬಿಸಿಸಿಐ ಪಂದ್ಯಗಳನ್ನು ಮರುಹೊಂದಾಣಿಕೆ ಮಾಡಲು ಚಿಂತಿಸಿತ್ತು. ಮಂಗಳವಾರ ಇನ್ನೆರಡು ತಂಡಗಳಲ್ಲಿ ಸೋಂಕು ಕಾಣಿಸಿಕೊಂಡಾಗ ಕೂಟವನ್ನು ಮುಂದೂಡದೇ ಬೇರೆ ದಾರಿಯೇ ಇಲ್ಲ ಎನ್ನುವ ಸ್ಥಿತಿಗೆ ಬಿಸಿಸಿಐ ತಲುಪಿತು. ಕಾರಣ ಈ ನಾಲ್ಕು ತಂಡಗಳು ಉಳಿದ ನಾಲ್ಕು ತಂಡಗಳೊಂದಿಗೆ ಆಡಿವೆ. ಹಾಗಾಗಿ ಎದುರಾಳಿ ತಂಡಗಳ ಆಟಗಾರರಲ್ಲೂ ಸದ್ಯೋಭವಿಷ್ಯದಲ್ಲಿ ಸೋಂಕು ಕಾಣಿಸಿಕೊಳ್ಳುವುದು ಖಚಿತ.

ಈ ಪರಿಸ್ಥಿತಿಯಲ್ಲಿ ಪಂದ್ಯಗಳ ದಿನಾಂಕವನ್ನು ಮರು ಹೊಂದಾಣಿಕೆ ಮಾಡಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲ. ಅದರ ಬದಲು ಕೂಟವನ್ನು ಮುಂದೂಡುವುದೇ ಸುರಕ್ಷಿತ ದಾರಿ. ಇವೆಲ್ಲವನ್ನೂ ಪರಿಗಣಿಸಿಯೇ ಬಿಸಿಸಿಐ ಮಂಗಳವಾರ ಮುಂದೂಡಿಕೆ ನಿರ್ಧಾರವನ್ನು ಪ್ರಕಟಿಸಿದೆ. ಅರ್ಥಾತ್‌ ಮುಂದೆ ಸೂಕ್ತ ಸಂದರ್ಭ ನೋಡಿಕೊಂಡು ಬಿಸಿಸಿಐ ಐಪಿಎಲ್‌ ಅನ್ನು ಮುಂದುವರಿಸಲಿದೆ. ಯಾವ ದೇಶದಲ್ಲಿ ಎನ್ನುವುದು ಈಗಿನ ಪ್ರಶ್ನೆ. ಕಳೆದ ವರ್ಷವೂ ಕೊರೊನಾ ಕಾರಣದಿಂದ ಐಪಿಎಲ್‌ ರದ್ದು ಎಂದೇ ಹೇಳಲಾಗಿತ್ತು. ಆದರೆ ಕಡೆಗೂ ಬಿಸಿಸಿಐ ಸೆಪ್ಟಂಬರ್‌-ನವೆಂಬರ್‌ ಅವಧಿಯಲ್ಲಿ ಯುಎಇಯಲ್ಲಿ ಕೂಟವನ್ನು ನಡೆಸಲು ಯಶಸ್ವಿಯಾಗಿತ್ತು. ಇದರಲ್ಲಿ ಬೃಹತ್‌ ಹಣಕಾಸಿನ ಲೆಕ್ಕಾಚಾರವೂ ಇದೆ.

ಈ ವರ್ಷವೊಂದಕ್ಕೆ ನೇರಪ್ರಸಾರ ಮಾಡುವ ಸ್ಟಾರ್‌ನ್ಪೋರ್ಟ್ಸ್ ಬಿಸಿಸಿಐಗೆ 3,269 ಕೋಟಿ ರೂ. ನೀಡುತ್ತದೆ. ಇನ್ನು ವಿವೋದಿಂದ 440 ಕೋಟಿ ರೂ. ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಬರುತ್ತದೆ. 220 ಕೋಟಿ ರೂ. ಇತರ ಪ್ರಾಯೋಜಕತ್ವದಿಂದ ಬರುತ್ತದೆ. ಪಂದ್ಯಗಳಲ್ಲಿ ಬರುವ ಟೈಮ್‌ಔಟ್‌, ಅಂಪೈರ್‌ ಪ್ರಾಯೋಜಕತ್ವ ರೂಪದಲ್ಲಿ 60 ಕೋಟಿ ರೂ. ಬರುತ್ತದೆ. ಒಂದು ವೇಳೆ ಕೂಟ ರದ್ದಾದರೆ ಬಿಸಿಸಿಐಗೆ ಹತ್ತಿರಹತ್ತಿರ 4,000 ಕೋಟಿ ರೂ.ಗಳ ನಷ್ಟ ಖಚಿತ. ಹಾಗೆಯೇ ಕೂಟದಲ್ಲಿ ಪಾಲ್ಗೊಳ್ಳುವ ಆಟಗಾರರು, ಸಹಾಯಕ ಸಿಬಂದಿ, ಅಂಪೈರ್‌ಗಳಿಗೆಲ್ಲ ಸೇರಿ ಸಾವಿರಾರು ಕೋಟಿ ರೂ. ತಪ್ಪಿಹೋಗುತ್ತದೆ. ಇನ್ನು ಪ್ರತಿ ಫ್ರಾಂಚೈಸಿಗಳು ಬೇರೆಬೇರೆ ರೂಪದಲ್ಲಿ ನೂರಾರು ಕೋಟಿ ರೂ. ನಷ್ಟವನ್ನು ಅನುಭವಿಸುತ್ತವೆ. ಇಂತಹ ಸ್ಥಿತಿಯಲ್ಲಿ ವಿದೇಶದಲ್ಲಾದರೂ ಸರಿಯೇ, ಕೂಟವನ್ನು ನಡೆಸಲೇಬೇಕು ಎಂಬ ಒತ್ತಡವನ್ನು ಬಿಸಿಸಿಐ ಅನುಭವಿಸುವುದು ಸಹಜ. ಆದ್ದರಿಂದ ಈ ತಿಂಗಳ ಕೊನೆಯಲ್ಲಿ ಕೂಟ ಬೇರೆ ದೇಶಕ್ಕೆ ಸ್ಥಳಾಂತರವಾಗುವ ಮಾಹಿತಿ ಸಿಕ್ಕಿದರೆ, ಆಶ್ಚರ್ಯವೇನಿಲ್ಲ.

ದೇಶದಲ್ಲಿ ಕೋವಿಡ್ ಹೆಚ್ಚುತ್ತಿದ್ದುರಿಂದಾಗಿ ಐಪಿಎಲ್‌ ಸ್ಥಗಿತ ಗೊಳಿಸ ಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಇಡೀ ದೇಶವೇ ಸಂಕಷ್ಟದಲ್ಲಿರುವಾಗ ಇಂಥ ಕೂಟಗಳನ್ನು ನಡೆಸುವುದರಲ್ಲಿ ಅರ್ಥವಿದೆಯೇ ಎಂಬ ಮಾತುಗಳೂ ಕೇಳಿಬಂದಿದ್ದವು.

ಅಲ್ಲದೆ ಐಪಿಎಲ್‌ ಫ್ರಾಂಚೈಸಿಗಳು ಕೋವಿಡ್ ಸಂಕಷ್ಟದಲ್ಲಿರುವವರಿಗೆ ಹಣಕಾಸಿನ ಸಹಾಯ ಮಾಡಲಿ ಎಂದೂ ಆಗ್ರಹಿಸಲಾಗಿತ್ತು. ಈ ಆಕ್ಷೇಪಗಳ ನಡುವೆಯೇ ಐಪಿಎಲ್‌  ಕೂಟ ಮುಂದುವರಿದೇ ಇತ್ತು. ಈಗ ತನ್ನದೇ ಆಟಗಾರರಿಗೆ ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಧಿ ಇಲ್ಲದೇ ಐಪಿಎಲ್‌ ಅನ್ನು ಮುಂದೂಡುವ ನಿರ್ಧಾರಕ್ಕೆ ಬರಲಾಗಿದೆ. ಒಟ್ಟಿನಲ್ಲಿ ಇದೊಂದು ಸಕಾಲಿಕ ಮತ್ತು ಉತ್ತಮ ನಿರ್ಧಾರ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.