ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಉಚಿತ ವಾಹನ ಸೇವೆ
Team Udayavani, May 6, 2021, 6:25 PM IST
ಕೊಪ್ಪಳ: ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯು ಕೋವಿಡ್ ಸೋಂಕಿತರನ್ನ ಆಸ್ಪತ್ರೆಗೆ ಕರೆ ತರಲು ತಾಲೂಕಿಗೆ ಎರಡರಂತೆ ರಾಜ್ಯದಲ್ಲಿ 350 ಉಚಿತ ವಾಹನ ಸೇವೆ ಕಲ್ಪಿಸುವ ಮೂಲಕ ಸಮಾಜಿಕ ಕಳಕಳಿ ಮೆರೆದಿದೆ. ನಗರದ ಕುಷ್ಟಗಿ ರಸ್ತೆಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಚೇರಿ ಆವರಣದಲ್ಲಿ ವಾಹನಗಳಿಗೆ ಚಾಲನೆ ನೀಡಲಾಯಿತು.
ರಾಜ್ಯದಲ್ಲಿ ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿವೆ. ಸರ್ಕಾರವು ಕರ್ಪ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಸರಿಯಾದ ಸಾರಿಗೆ, ವಾಹನದ ವ್ಯವಸ್ಥೆ ಇಲ್ಲದಂತಾಗಿದೆ. ಕೋವಿಡ್ ಪರೀಕ್ಷೆ ಮಾಡಿಸಿ ಸೋಂಕು ದೃಢಪಟ್ಟ ವ್ಯಕ್ತಿಗಳನ್ನ ಹಾಗೂ ತೀರ್ವ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರನ್ನು ಆಸ್ಪತ್ರೆಗೆ ಕರೆ ತರಲು ಎರಡು ಉಚಿತ ವಾಹನಗಳ ವ್ಯವಸ್ಥೆ ಮಾಡಿದೆ. ಇದರ ಸೌಲಭ್ಯ ಪಡೆಯುವಂತೆ ಕೊಪ್ಪಳ ಜಿಲ್ಲಾ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನಿರ್ದೇಶಕ ಸದಾನಂದ ಬಗೇರಾ ತಿಳಿಸಿದ್ದಾರೆ.
ಈ ವೇಳೆ ಶ್ರೀಕ್ಷೇತ್ರ ಧರ್ಮಸ್ಥಳ ತಾಲೂಕು ಯೋಜನಾ ಅಧಿಕಾರಿ ಅಜೀತ ಹೆಗಡೆ, ಸಿಬ್ಬಂದಿಗಳಾದ ರಮೇಶ ಜಿ, ಮಹಾದೇವ, ಪ್ರಶಾಂತ, ಮಂಜುನಾಥ, ಹೇಮವತಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
MUST WATCH
ಹೊಸ ಸೇರ್ಪಡೆ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
ಡ್ರಗ್ಸ್ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ
Paris Olympics: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ