2ನೇ ಮೀರಜ್‌ ಖ್ಯಾತಿ ಬಾಗಲಕೋಟೆಯಲ್ಲಿ ಆಕ್ಸಿಜನ್‌ ಆತಂಕ

| ಜಿಲ್ಲೆಗೆ ನಿತ್ಯ 17 ಕೆಎಲ್‌ ಬಳಕೆ | ಬರುತ್ತಿರೋದು 7 ಕೆಎಲ್‌ ಮಾತ್ರ | ಇಂದು ರಾತ್ರಿ ಕಳೆಯೋದು ದೊಡ್ಡ ಸವಾಲು

Team Udayavani, May 6, 2021, 10:30 PM IST

yytyyt

ಬಾಗಲಕೋಟೆ: ಉತ್ತರ ಕರ್ನಾಟಕದಲ್ಲೇ ವೈದ್ಯಕೀಯ ಕ್ಷೇತ್ರದಲ್ಲಿ 2ನೇ ಮೀರಜ್‌ ಎಂಬ ಖ್ಯಾತಿ ಹೊಂದಿದ ಬಾಗಲಕೋಟೆ, ಇದೀಗ ಆಕ್ಸಿಜನ್‌ ಕೊರತೆ ಆತಂಕ ಎದುರಿಸುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಮಾರಿಗೆ ಜಿಲ್ಲಾ ಕೋವಿಡ್‌ ಆಸ್ಪತ್ರೆಯೂ ಸೇರಿದಂತೆ 38 ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿದೆ.

ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ನಿತ್ಯ 3 ಕೆಎಲ್‌ (ಕಿಲೋ ಲೀಟರ್‌) ಬಳಕೆಯಾಗುತ್ತಿದೆ. 38 ಖಾಸಗಿ ಆಸ್ಪತ್ರೆಗಳಲ್ಲಿ ನಿತ್ಯವೂ 14 ಕೆಎಲ್‌ ಬಳಕೆಯಾಗುತ್ತಿದೆ. ಜಿಲ್ಲಾಸ್ಪತ್ರೆ-ಖಾಸಗಿ ಆಸ್ಪತ್ರೆಗಳು ಸೇರಿ ನಿತ್ಯವೂ 17 ಕೆಎಲ್‌ ಆಕ್ಸಿಜನ್‌ ಬಳಕೆ ಆಗುತ್ತಿದೆ. ಆದರೆ ಜಿಲ್ಲಾಸ್ಪತ್ರೆಗೆ 1.5 ಕೆಎಲ್‌ ಇರ್‌ ರೆಗ್ಯೂಲರ್‌ ಪೂರೈಕೆಯಾಗುತ್ತಿದ್ದರೆ, ಖಾಸಗಿ ಆಸ್ಪತ್ರೆಗಳಿಗೆ 6 ಕೆಎಲ್‌ ಆಕ್ಸಿಜನ್‌ ಪೂರೈಕೆ ಆಗುತ್ತಿದೆ. ಜಿಲ್ಲೆಗೆ ಬೇಕಿರುವುದು 17ರಿಂದ 18 ಕೆಎಲ್‌ ಆದರೆ ಜಿಲ್ಲೆಗೆ ಬರುತ್ತಿರುವುದು 7.5 ಕೆಎಲ್‌ ಮಾತ್ರ. ಹೀಗಾಗಿ ಜಿಲ್ಲೆಗೆ 18 ಕೆಎಲ್‌ ಆಕ್ಸಿಜನ್‌ ನಿತ್ಯ ಪೂರೈಕೆ ಮಾಡಬೇಕೆಂಬ ಬೇಡಿಕೆ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಸಲ್ಲಿಸಲಾಗಿದೆ.

926 ಜನ ಸೋಂಕಿತರು ಆಕ್ಸಿಜನ್‌ ಮೇಲೆ: ಜಿಲ್ಲೆಯಲ್ಲಿ ಸಧ್ಯ 3287 ಸಕ್ರಿಯ ಸೋಂಕಿತರಿದ್ದು, ಅದರಲ್ಲಿ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 437 ಜನ ಚಿಕಿತ್ಸೆ ಪಡೆಯುತ್ತಿದ್ದರೆ, ಖಾಸಗಿ ಆಸ್ಪತ್ರೆಯಲ್ಲಿ 817 ಜನ ಹಾಗೂ 2033 ಜನ ಹೋಂ ಐಸೋಲೇಶನ್‌ನಲ್ಲಿದ್ದಾರೆ. ಮುಖ್ಯವಾಗಿ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 348 ಜನ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 578 ಜನ ಸೇರಿ ಒಟ್ಟು 926 ಜನ ಆಕ್ಸಿಜನ್‌ ಬೆಡ್‌ನ‌ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆರವಾದ ಕುಮಾರೇಶ್ವರ: ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 348 ಜನ ಆಕ್ಸಿಜನ್‌ ಬೆಡ್‌ ನಲ್ಲಿದ್ದು, ನಿತ್ಯ 3 ಕೆಎಲ್‌ ಆಕ್ಸಿಜನ್‌ ಬಳಕೆಯಾಗುತ್ತಿದೆ. ಆದರೆ ಮಂಗಳವಾರ ಸಂಜೆಯೇ ಆಕ್ಸಿಜನ್‌ ಖಾಲಿಯಾಗುತ್ತ ಬಂದಿತ್ತು. ತಕ್ಷಣ ನೆರವಿಗೆ ಬಂದಿರುವ ಬಾಗಲಕೋಟೆ ಶಾಸಕರೂ ಆಗಿರುವ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ|ವೀರಣ್ಣ ಚರಂತಿಮಠ, ತಮ್ಮ ಸಂಸ್ಥೆಯ ಬೃಹತ್‌ ಕುಮಾರೇಶ್ವರ ಆಸ್ಪತ್ರೆಗೆ ಬಂದಿದ್ದ 1.50 ಟನ್‌ ಆಕ್ಸಿಜನ್‌ ಅನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ನೀಡಿದ್ದಾರೆ. ಹೀಗಾಗಿ ಕುಮಾರೇಶ್ವರ ಆಸ್ಪತ್ರೆಯಿಂದ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಆಕ್ಸಿಜನ್‌ ನೀಡಿದ್ದರಿಂದ ಸದ್ಯ ಆತಂಕವಿಲ್ಲ. ಆದರೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು, ಆಕ್ಸಿಜನ್‌ ವಿಷಯದಲ್ಲಿ ತೀವ್ರ ಆತಂಕದಲ್ಲಿದ್ದು, ಬುಧವಾರ ರಾತ್ರಿ ಕಳೆಯುವುದೇ ದುಸ್ತರವಾಗಿದೆ ಎನ್ನುತ್ತಿದ್ದಾರೆ.

ಬಾಗಲಕೋಟೆ ನಗರದಲ್ಲೇ 192 ಆಸ್ಪತ್ರೆಗಳಿದ್ದು, ಇಡೀ ಜಿಲ್ಲೆಯಲ್ಲಿ ಕ್ಲಿನಿಕ್‌ ಸಹಿತ 814ಕ್ಕೂ ಹೆಚ್ಚು ಆಸ್ಪತ್ರೆ ಇವೆ. ಹೀಗಾಗಿ ಬಾಗಲಕೋಟೆಯನ್ನು “ಮೆಡಿಕಲ್‌ ಹಬ್‌’ ಎಂದೇ ಕರೆಯಲಾಗುತ್ತಿದೆ. ಇಲ್ಲಿಗೆ ವಿಜಯಪುರ, ಬಾಗಲಕೋಟೆ, ರಾಯಚೂರ, ಕೊಪ್ಪಳ, ಗದಗ ಜಿಲ್ಲೆಯ ರೋಗಿಗಳು ಬರುತ್ತಾರೆ. ಈ ಭಾಗದ ಹಲವು ಜಿಲ್ಲೆಯ ಜನರು, ವೈದ್ಯಕೀಯ ಚಿಕಿತ್ಸೆಗಾಗಿ ಬಾಗಲಕೋಟೆಯನ್ನೇ ಅವಲಂಬಿಸಿರುವುದು ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.

 

ವರದಿ : ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.