ಆಶಾ ಕಾರ್ಯಕರ್ತೆಯರಿಗಿಲ್ಲ ಸುರಕ್ಷತಾ  ಸಾಮಗ್ರಿ


Team Udayavani, May 7, 2021, 2:47 PM IST

No safety material for Asha karyakathe

ಬೆಂಗಳೂರು: ಕೋವಿಡ್‌ ಕಾರ್ಯದಲ್ಲಿ ತೊಡಗಿಕೊಂಡಿರುವ ಆಶಾ ಕಾರ್ಯಕರ್ತೆಯರು ಅಗತ್ಯ ಸುರಕ್ಷತಾ ಸಾಮಗ್ರಿಗಳು ಇಲ್ಲದೆ ಭಯದಲ್ಲಿ ಬದುಕು ಕಳೆಯುವಂತಾಗಿದೆ.

ಕೋವಿಡ್‌ ಸಂಬಂಧಿಸಿದ ಹಲವು ಕಾರ್ಯಗಳಲ್ಲಿಆಶಾಕಾರ್ಯ ಕರ್ತೆಯರು ಈಗಾಗಲೇ ತೊಡಗಿಕೊಂಡಿ ದ್ದಾರೆ ಆದರೆ ನಮ್ಮ ಜೀವನವನ್ನು ಕಾಪಾಡಿಕೊಳ್ಳುವ ಸುರಕ್ಷಾ ಸಾಧನಗಳನ್ನು ಸರ್ಕಾರ ನೀಡುತ್ತಿಲ್ಲ ಎಂಬ ಆಳಲು ಅವರದು. ಈ ಹಿಂದೆ ಕೋವಿಡ್‌ ಸೋಂಕು ಅಪ್ಪಳಿಸಿದಾಗವಿವಿಧ ದೇಶಗಳಿಂದ ಹಾಗೂ ವಿವಿಧ ರಾಜ್ಯಗಳಿಂದ ಬಂದ ಜನರ ಸರ್ವೆ, ನಂತರ ಕೊರೊನಾ ಲಕ್ಷಣವಿರುವ, ಪಾಸಿಟಿವ್‌ ಬಂದಿರುವ, ಹಾಗೆಯೇ ಪ್ರಥಮ, ದ್ವಿತೀಯ ಸಂಪರ್ಕಿತರನ್ನು ಗುರುತಿಸುವುದು, ಕ್ವಾರಂ ಟೈನ್‌ ಮನೆಗಳಿಗೆ ಗುರುತಿನ ಚೀಟಿ ಅಂಟಿಸುವುದು, ಅವರ ಮನೆಗಳಿಗೆ ಹೋಗಿ ದಿನನಿತ್ಯ ಅವರ ಆರೋಗ್ಯದ ಮಾಹಿತಿಯನ್ನು ಇಲಾಖೆಗೆ ಒದಗಿಸುವುದು ಸೇರಿದಂತೆ ಹಲವು ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.

ಈಗ ಮತ್ತೆ ಕೋವಿಡ್‌ ಸೋಂಕಿನ ಎರಡನೇ ಅಲೆಶುರುವಾಗಿದೆ. ಆ ಹಿನ್ನೆಲೆಯಲ್ಲಿ ವ್ಯಾಕ್ಸಿನ್‌ ಹಾಕಿಸಿಕೊಳ್ಳುವರ ಪಟ್ಟಿ ತಯಾರಿಸಿ ಕೊಡುವುದು, ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಜನರನ್ನು ಮನವೊಲಿಸು ವುದು ಮತ್ತು ಕಳುಹಿಸುವ ಕಾರ್ಯವನ್ನು ಸರ್ಕಾರ ಆಶಾಕಾರ್ಯಕರ್ತೆಯರಿಗೆ ವಹಿಸಿದೆ.ಆಶಾ ಕಾರ್ಯಕರ್ತೆ ಕೋವಿಡ್‌ ಹಿನ್ನೆಲೆಯಲ್ಲಿಸೋಂಕಿ ತರ ಮನೆ ಮನೆ ಸರ್ವೆ ಕಾರ್ಯವನ್ನು ಸರ್ಕಾರ ವಹಿಸಿದೆ. ಅಲ್ಲದೆ ಸೋಂಕಿತರ ಆರೈಕೆ ಬಗ್ಗೆಮಾಹಿತಿ ಕೂಡ ಕಲೆ ಹಾಕಲಾಗುವ ಕಾರ್ಯ ನೀಡಲಾಗಿದೆ. ಆದರೆ ಸುರಕ್ಷತಾ ಸಾಧನಗಳು ಇಲ್ಲದೆ ನಾವು ಕಾರ್ಯ ನಿರ್ವಹಿಸುವುದು ಹೇಗೆ ಎಂದು ಪ್ರಶ್ನಿಸುತ್ತಾರೆ.

ಸರ್ಕಾರ ಗೌರವ ಧನ ನೀಡಿಲ್ಲ: ಆಶಾಕಾರ್ಯಕರ್ತೆಯರು ಸರ್ಕಾರ ವಹಿಸುವ ಎಲ್ಲಾ ಕೆಲಸಗಳನ್ನುನಿಷ್ಠೆಯಿಂದ ಮಾಡುತ್ತಾರೆ. ಆದರೆ ಸರ್ಕಾರ ಇವರರಕ್ಷಣೆ ಬಗ್ಗೆ ಗಮನ ಹರಿಸುತ್ತಿಲ್ಲ. ಕಳೆದೆರಡು ತಿಂಗಳಿಂದ ಆಶಾಕಾರ್ಯಕರ್ತರಿಗೆ ನೀಡಬೇಕಾಗಿರುವ ಗೌರವ ಧನ ಕೂಡ ನೀಡಿಲ್ಲ ಎಂದು ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಆರೋಪಿಸಿದ್ದಾರೆ.

ಬಾಕಿ ವೇತನದ ಜೊತೆಗೆ ಆಶಾ ಕಾರ್ಯಕರ್ತೆಯರಿಗೆ ಗ್ಲೌಸ್‌ ಸೇರಿದಂತೆ ಅಗತ್ಯ ಸುರಕ್ಷಾ ಪರಿಕರಗಳನ್ನು ಸರ್ಕಾರ ನೀಡಬೇಕು. ಹಾಗೆಯೇ ಕೋವಿಡ್‌ ಕಾರ್ಯಕ್ಕಾಗಿ 500 ರೂ.ಗಳ ವಿಶೇಷ ಗೌರವ ಧನ ನೀಡಬೇಕು ಎಂದು ಒತ್ತಾಯಿಸುತ್ತಾರೆ.

ಉಚಿತ ಚಿಕಿತ್ಸೆ ನೀಡಿ

ಕೋವಿಡ್‌ ಕಾರ್ಯದಲ್ಲಿ ನಿರತರಾಗಿರುವ ಆಶಾಕಾರ್ಯಕರ್ತೆಯರ ಕುಟುಂಬದವರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಆಶಾಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್‌ ಯಾದಗಿರಿ ಸರ್ಕಾಕ್ಕೆ ಮನವಿ ಮಾಡಿದ್ದಾರೆ. ಕೊರೊನಾವಾರಿಯರ್ ಆಗಿ ಸೇವೆ ಸಲ್ಲಿಸಿ ಸಾವನ್ನಪ್ಪಿದ ಆಶಾಕಾರ್ಯಕರ್ತೆಯರಿಗೆ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ಆ ಬಗ್ಗೆಕೂಡ ಆಲೋಚನೆ ನಡೆಸಲಿ ಎಂದು ಹೇಳಿದ್ದಾರೆ.

ದೇವೇಶ್‌ ಸೂರಗುಪ್ಪ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.