ಕೋವಿಡ್ ಸೋಂಕಿತರಿಗೆ ಆಹಾರ ವಿತರಣೆ
Team Udayavani, May 7, 2021, 3:16 PM IST
ಬೀದರ : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಾಲೂಕಿನ ಅಯಾಸಪುರ ಗ್ರಾಮದ ಶಿವರಾಜ ಪಾಟೀಲ ಪರಿವಾರವು ಸೋಂಕಿತರು, ಅವರ ಆರೈಕೆಯಲ್ಲಿರುವ ಸಂಬಂಧಿ ಕರು ಹಾಗೂ ಕೋವಿಡ್ ವಾರಿಯರ್ಸ್ ಗೆ ನಿತ್ಯ ಉಚಿತ ಆಹಾರ ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದೆ.
ಇಲ್ಲಿನ ವಂದೇ ಮಾತರಂ ಸ್ಕೂಲ್ ಅಧ್ಯಕ್ಷರಾದ ಶಿವರಾಜ ಪಾಟೀಲ, ಪುತ್ರರಾದ ವೀರಭದ್ರ ಎಂಟರ್ ಪ್ರೈಸೆಸ್ನ ಆಕಾಶ ಪಾಟೀಲ ಹಾಗೂ ನ್ಯೂ ಝೀರಾ ಮಿನರಲ್ ವಾಟರ್ಸ್ ನ ಸಂತೋಷ ಪಾಟೀಲ 10 ದಿನಗಳಿಂದ ಅನ್ನ ದಾಸೋಹ ನಡೆಸಿಕೊಂಡು ಬರುತ್ತಿದ್ದಾರೆ. ನಿತ್ಯ ತಮ್ಮ ಮನೆಯಲ್ಲೇ ಆಹಾರ ತಯಾರಿಸಿ, ಪ್ಯಾಕ್ ಮಾಡಿ, ವಾಹನದಲ್ಲಿ ಶುದ್ಧ ಕುಡಿಯುವ ನೀರಿನ ಪಾಕೇಟ್ನೊಂದಿಗೆ ಪ್ರತಿದಿನ ಮಧ್ಯಾಹ್ನ ಬೀದರನ ಕೋವಿಡ್ ಆಸ್ಪತ್ರೆ ಆವರಣದಲ್ಲಿ ಸೋಂಕಿತರು, ಅವರ ಸಂಬಂಧಿಕರು ಹಾಗೂ ಕೋವಿಡ್ ವಾರಿಯರ್ಸ್ಗಳಿಗೆ ವಿತರಿಸುತ್ತಿದ್ದಾರೆ. ನನ್ನ ತಂದೆ, ತಾಯಿ, ನನಗೆ ಹಾಗೂ ನನ್ನ ಪತ್ನಿಗೆ ಕೋವಿಡ್ ಸೋಂಕು ತಗುಲಿತು.
ನಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದೇವು. ಆದರೆ, ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಬಡ ಸೋಂಕಿತರು ಹಾಗೂ ಅವರ ಕುಟುಂಬದ ಸದಸ್ಯರ ಸಂಕಷ್ಟ ಮನ ಕಲುಕಿತು. ಬಡ ಸೋಂಕಿತರಿಗೆ ನೆರವಾಗಲು ನಿರ್ಧರಿಸಿ, ಉಚಿತ ಆಹಾರ ಸೇವೆ ಆರಂಭಿಸಿದೇವು ಎಂದು ಆಕಾಶ ಪಾಟೀಲ ತಿಳಿಸಿದರು. ನಿತ್ಯ 500 ಆಹಾರ ಪೊಟ್ಟಣಗಳನ್ನು ವಿತರಿಸುತ್ತಿದ್ದೇವೆ. ಜನತಾ ಕಫೂÂì ಮುಕ್ತಾಯದವರೆಗೆ ಆಹಾರ ವಿತರಣೆ ನಡೆಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು