ಮಾತೇ ಮುತ್ತು;  ಮಾತೇ ಮೃತ್ಯು


Team Udayavani, May 8, 2021, 6:00 AM IST

ಮಾತೇ ಮುತ್ತು;  ಮಾತೇ ಮೃತ್ಯು

ಈ ಪ್ರಪಂಚದಲ್ಲಿ ಮಾನವ ಇತರೆಲ್ಲ ಜೀವಿಗಳಿಗಿಂತ ವಿಭಿನ್ನನಾಗಿ, ಶ್ರೇಷ್ಠನಾಗಿ ಗುರುತಿಸಿಕೊಳ್ಳಲು ಪ್ರಮುಖ ಕಾರಣ ಎಂದರೆ ಆತನಿಗೆ ಪ್ರಕೃತಿದತ್ತ ವಾಗಿ ಬಂದಿರುವ ಬುದ್ಧಿಶಕ್ತಿಯೇ ಕಾರಣ. ಹಾಗೆಂದ ಮಾತ್ರಕ್ಕೆ ಉಳಿದ ಪ್ರಾಣಿ

ಗಳಿಗೆ ಈ ಶಕ್ತಿ ಇಲ್ಲ ಎಂದಲ್ಲ.   ಬುದ್ಧಿಮತ್ತೆ ಯಿಂದ ಜ್ಞಾನ ಹೆಚ್ಚಿಸಿಕೊಳ್ಳಲು ಮಾನವ ನಿಗೆ ಸಾಧ್ಯವಿದೆ. ಇನ್ನು ಮಾತು ಮಾನವನಿಗೆ ದೇವರು ನೀಡಿರುವ ಇನ್ನೊಂದು ಮಹತ್ವದ ಕೊಡುಗೆ. ಆದರೆ ಮಾತು ಎಷ್ಟು ಅಮೂಲ್ಯವೋ ಅಷ್ಟೇ ಅಪಾಯಕಾರಿಯೂ ಹೌದು. ಈ ಅದ್ಭುತ ಶಕ್ತಿಯ ಕಾರಣದಿಂದಾಗಿಯೇ ಮನುಷ್ಯನು ಸೃಷ್ಟಿಯ ಉಳಿದ ಪ್ರಾಣಿಗಳಿ ಗಿಂತ ಭಿನ್ನನಾಗಿರುವುದು. ಮಾತಿನಿಂದಲೇ ಓರ್ವನ ವ್ಯಕ್ತಿತ್ವವನ್ನು ನಿರ್ಧರಿಸಬಹುದು. ಮಾನವ ಮೀನಿನಂತೆ ಈಜುವುದನ್ನು, ಹಕ್ಕಿಯಂತೆ ಹಾರುವುದನ್ನು, ಗ್ರಹಗಳ ಲೋಕದಲ್ಲಿ ತೇಲುವುದನ್ನು ಕಲಿತ. ಆದರೆ ಯಾರೊಡನೆ ಹೇಗೆ ಮಾತನಾಡಬೇಕು ಎಂಬುದನ್ನು ಕಲಿಯುವಲ್ಲಿ ಸೋತ ಎಂದು ಎಷ್ಟೋ ಬಾರಿ ನಮಗೆ ಅನಿಸುವುದಿದೆ. ಮಾತುಗಾರಿಕೆ ಎಲ್ಲರಿಗೂ ಸಿದ್ಧಿಸಲಾರದು. ಅದೂ ಒಂದು ಕಲೆ.

“ನಾಲಗೆ ಒಳ್ಳೆಯದಾದರೆ ನಾಡೆಲ್ಲ ಒಳ್ಳೆಯದು’ ಎನ್ನುವ ಹಾಗೆ ನಾವಾಡುವ ಒಂದು ಮಾತು ಒಳ್ಳೆಯ ಸಂಬಂಧವನ್ನು ಬೆಸೆಯಲೂಬಹುದು. ಒಂದು ಮಧುರವಾದ ಸಂಬಂಧವನ್ನು ಮುರಿಯಲೂಬಹುದು. ನಾವಾಡುವ ಒಂದು ಪ್ರೇರಣೆಯ ಮಾತು ಎಲ್ಲವನ್ನೂ ಕಳೆದುಕೊಂಡು ಹತಾಶನಾದ ಒಬ್ಬ ವ್ಯಕ್ತಿಯಲ್ಲಿ ಆಶಾಭಾವನೆಯನ್ನು ಮೂಡಿಸಬಹುದು, ಅದೇ ಒಂದು ಕುಹಕದ ಮಾತು ಗೆಲುವಿನ ತುತ್ತ ತುದಿಯಲ್ಲಿ ಇದ್ದವನನ್ನೂ ಪಾತಾಳಕ್ಕೆ ತಳ್ಳಬಹುದು.

ಮಂಥರೆಯ ಚಾಡಿಮಾತು ರಾಮಾಯಣವನ್ನೇ ಸೃಷ್ಟಿಸಿತು, ಕೃಷ್ಣನ ನೀತಿಮಾತು ಪಾಂಡವರನ್ನು ಗೆಲುವಿನ ದಡ ಸೇರಿಸಿತು. ಇತಿಹಾಸದ ಪುಟಗಳನ್ನು ತಿರುವಿ ನೋಡಿದಾಗ ಹಲವು ಸಾಮ್ರಾಜ್ಯಗಳ ಅಳಿವು-ಉಳಿವಿಗೆ ಮಾತೇ ಕಾರಣವಾಗಿದ್ದನ್ನು ತಿಳಿಯಬಹುದು. ಧನನಂದನ ಒಂದು ಮಾತು ಚಾಣಕ್ಯನಿಂದ ಮೌರ್ಯ ಸಾಮ್ರಾಜ್ಯದ ಸ್ಥಾಪನೆಗೆ ನಾಂದಿಯಾಯಿತು. ಶಕುನಿಯ ಕುಹಕದ ಮಾತು ದುರ್ಯೋಧನನ ವಿನಾಶಕ್ಕೆ ಕಾರಣವಾದರೆ ಅದೇ ಗೌತಮನ ಪ್ರೀತಿಯ ಮಾತು ಅಂಗುಲಿಮಾಲನ ಮನಃಪರಿವರ್ತನೆಗೆ ಕಾರಣವಾಯಿತು. ನಾವಾಡುವ ಒಂದು ಮಾತು ಐಸ್‌ ಕ್ರೀಂ ತಿಂದಷ್ಟೇ ಮನಸ್ಸಿಗೆ ತಂಪಾಗಲೂಬಹುದು ಇಲ್ಲವೆ ಸೂಜಿಯ ಮೊನೆ ಚುಚ್ಚಿದ ಅನುಭವವನ್ನು ನೀಡಬಹುದು.

ನಾವಾಡುವ ಮಾತು ಹಿತವಾಗಿ ರಬೇಕು, ಮಿತವಾಗಿರಬೇಕು ಹದವಾದ ತೂಕದಿಂದ ಕೂಡಿರಬೇಕು. ಮಾತು ಹಗುರವಾಗಿರಲೂ ಬಾರದು, ಭಾರವಾಗಿರಲೂ ಬಾರದು. ಯಾರೊಂದಿಗೆ, ಯಾವಾಗ, ಎಲ್ಲಿ, ಎಷ್ಟು ಮಾತನಾಡಬೇಕು ಎಂಬುದನ್ನು ತಿಳಿದಿರಬೇಕು. ಮಾತು ಅತಿಯಾದರೆ ವಾಚಾಳಿ, ಬಾಯಿ ಚಪಲ ಎನ್ನುತ್ತಾರೆ. ಕಡಿಮೆಯಾ ದರೆ ಮೂಕ ಎನ್ನುತ್ತಾರೆ. ಕೆಲವರು ಕಠಿನ ಹೃದಯಿಗಳಾದರೂ ತಮ್ಮ ನಾಜೂಕಿನ ಮಾತಿನ ಮೂಲಕ ಒಳ್ಳೆಯವರೆಂದೆನಿಸಿ ಕೊಳ್ಳುತ್ತಾರೆ. ಇನ್ನು ಕೆಲವರು ಮೃದು ಮನಸ್ಸಿನವರಾದರೂ ಮಾತನಾಡಲು ಬಾರದೆ ಕೆಟ್ಟವರಾಗಿಬಿಡುತ್ತಾರೆ.

ಮಾತನಾಡುವುದು ಒಂದು ಕಲೆ, ಅದು ಎಲ್ಲರಿಗೂ ಸುಲಭವಾಗಿ ಸಿದ್ದಿಸದು. “ಎಲುಬಿಲ್ಲದ ನಾಲಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಗೆ’ ಎಂದು ದಾಸ ಶ್ರೇಷ್ಠರು ಹೇಳಿದ ಹಾಗೆ ಕೆಲವು ಸಂದರ್ಭಗಳಲ್ಲಿ ಮೂಕನೆನಿಸಿದರೂ ಪರವಾಗಿಲ್ಲ. ಪರರ ಮನಸ್ಸಿಗೆ ನೋವುಂಟು ಮಾಡುವಂತೆ ಮಾತನಾಡಬಾರದು. ಬಾಯಿಯಿಂದ ಹೊರಬಿದ್ದ ಮಾತು ಮತ್ತು ಬಿಲ್ಲಿನಿಂದ ಹೊರಟ ಬಾಣ ಹಿಂದಿರುಗಿಬಾರದು. ಮಾತನಾಡುವ ಮೊದಲು ಎರಡೆರಡು ಬಾರಿ ಯೋಚಿಸಿ ಮಾತನಾಡಬೇಕು. ಕೆಲವರು ಮಾತನ್ನೇ ಬಂಡವಾಳವಾಗಿ ಮಾಡಿಕೊಂಡಿರುತ್ತಾರೆ “ಮಾತೆ ಸಕಲಸಂಪದವು’ ಎಂಬಂತೆ ಮೋಹಕ ಮಾತಿನಿಂದಲೇ ಎಲ್ಲವನ್ನು ಸಂಪಾದಿಸಿ ಕೊಳ್ಳುತ್ತಾರೆ. ಅದೇ ಮಾತಿನಿಂದಲೆ ಸಕಲವನ್ನು ಕಳೆದುಕೊಂಡದ್ದೂ ಇದೆ. ಕೇವಲ ಒಂದು ಮಾತು ಜೀವಕ್ಕೆ ಕುತ್ತು ತಂದ ಹಲವು ಘಟನೆಗಳನ್ನು ನೋಡಬಹುದು. ಅದಕ್ಕೆ ಹೇಳುವುದು “ಮಾತೇ ಮುತ್ತು, ಮಾತೇ ಮೃತ್ಯು’ ಎಂದು. ಮಾತು ಹಿತಮಿತವಾಗಿದ್ದರೆ ಆರೋಗ್ಯಕ್ಕೂ ಒಳ್ಳೆಯದು, ಸಂಬಂಧಕ್ಕೂ ಒಳ್ಳೆಯದು. ಮಾತಿನ ಮೂಲಕ ಒಳ್ಳೆಯ ಸಂಬಂಧಗಳನ್ನು ಬೆಸೆಯೋಣ.

 

- ಭಾಸ್ಕರ ಪೂಜಾರಿ, ನಡೂರು

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.