ರಸ್ತೆ ಬದಿ ಕಸದ ರಾಶಿ: ದುರ್ವಾಸನೆ
Team Udayavani, May 8, 2021, 3:12 PM IST
ಸಾಂದರ್ಭಿಕ ಚಿತ್ರ:
ಕುದೂರು: ಕುದೂರಿನ ಶಿವಗಂಗೆ ರಸ್ತೆಯ ಸಮೀಪ ಲೋಡ್ ಗಟ್ಟಲೆ ಕೋಳಿ ಕಲುಷಿತ ತ್ಯಾಜ್ಯ ಸುರಿದಿದ್ದು ಜನತೆ ಆತಂಕ ವ್ಯಕ್ತಪಡಿಸಿದ್ದಾರೆ. ಕುದೂರು ಪಟ್ಟಣದಲ್ಲಿ ಕಸದ ಸಮಸ್ಯೆ ತೀವ್ರವಾಗಿದ್ದು ಸಮರ್ಪಕವಾಗಿ ವಿಲೇವಾರಿ ಮಾಡುತ್ತಿಲ್ಲ. ತ್ಯಾಜ್ಯ ರಾಶಿ ದುರ್ವಾಸನೆ ಬೀರುತ್ತಿದ್ದರೂ ಗ್ರಾಪಂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ.
ಮಳೆಯಿಂದ ದುರ್ವಾಸನೆ:ಕಸದ ರಾಶಿ ನಿನ್ನೆ ಬಿದ್ದದ್ದಲ್ಲ. ಬಹಳ ಕಾಲದಿಂದಲೂ ಬೀಳುತ್ತಿದೆ. ಪಟ್ಟಣದ ತುಮಕೂರು ರಸ್ತೆ, ಶಿವಗಂಗೆ ರಸ್ತೆಯ ಎಡಭಾಗದ ರಸ್ತೆಯ ಪಕ್ಕದಲ್ಲಿ ಕೋಳಿ ತ್ಯಾಜ್ಯ, ಪ್ಲಾಸ್ಟಿಕ್, ಗೃಹ ಬಳಕೆ ತ್ಯಾಜ್ಯವನ್ನು ಸುರಿಯಲಾಗಿದೆ. ಕಳೆದ ಒಂದು ವಾರದಿಂದಮಳೆ ಬರುತ್ತಿರುವ ಕಾರಣ ರಸ್ತೆ ಬದಿ ಮೂಟೆಯಲ್ಲಿಎಸೆಯಲಾಗಿದ್ದ ಕೋಳಿ ತ್ಯಾಜ್ಯ ಕೊಳೆತು ದುರ್ನಾತಬೀರುತ್ತಿದೆ.
ವರ್ಷಕ್ಕೆ ಸಾವಿರಾರು ರೂಪಾಯಿಯನ್ನುತ್ಯಾಜ್ಯ ವಿಲೇವಾರಿಗೆಂದು ಮೀಸಲಿಡಲಾಗುತ್ತದೆ. ಗ್ರಾಪಂನವರು ಸರಿಯಾಗಿ ವಿಲೇಮಾರಿ ಮಾಡುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪ್ರತಿ ನಿತ್ಯ ನೂರಾರು ಮಂದಿ ಬರುತ್ತಾರೆ ಹೋಗುತ್ತಾರೆ. ಒಮ್ಮೆ ಈ ಕಸದ ರಾಶಿ ನೋಡಿದರೆ ಪಟ್ಟಣದ ಗೌರವ ಘನತೆಯನ್ನು ಗೇಲಿ ಮಾಡುವಂತೆ ಇರುತ್ತದೆ ಎಂಬುದು ನೊಂದ ನಾಗರಿಕರ ಅಭಿಮತ. ಈಗ ಕೊರೊನಾ ವೈರಾಣು ಎಲ್ಲಾ ಕಡೆ ಹಬ್ಬಿದೆ. ಅದಕ್ಕೆ ಕುದೂರು ಸಹಹೊರತಲ್ಲ. ಇಂತಹ ಸಮಯದಲ್ಲಿ ಸ್ವತ್ಛತೆಗೆ ಹೆಚ್ಚಿನಗಮನ ಕೊಡಬೇಕಾಗಿದೆ. ಕಸದ ರಾಶಿಯನ್ನು ವಿಲೇವಾರಿಮಾಡುವ ಕಾರ್ಯ ಆಗಿಂದಾಗ್ಗೆ ನಡೆಯುತ್ತಿರಬೇಕು.
ಎಚ್ಚೆತ್ತುಕೊಳ್ಳಿ:ಗ್ರಾಪಂ ಎಚ್ಚೆತ್ತು ಗಮನ ಹರಿಸಿ ಮುಂದೆಇಂತಹ ತ್ಯಾಜ್ಯ ಬೀಳದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಬಿದ್ದಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕಾಗಿದೆ.
ಕೆ.ಎಸ್.ಮಂಜುನಾಥ್ ಕುದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ