ಪುತ್ತೂರು: ಕೊರಿಯರ್ ಮೂಲಕ ಬಂದ ಪಾರ್ಸೆಲ್‌ ನೀಡದೆ ನಿಂದಿಸಿದ ಮಾಲಕನ ವಿರುದ್ಧ ಕೇಸ್ ದಾಖಲು


Team Udayavani, May 8, 2021, 5:27 PM IST

ಪುತ್ತೂರು: ಕೊರಿಯರ್ ಮೂಲಕ ಬಂದ ಪಾರ್ಸೆಲ್‌ ನೀಡದೆ ನಿಂದಿಸಿದ ಮಾಲಕನ ವಿರುದ್ಧ ಕೇಸ್ ದಾಖಲು

ಸಾಂದರ್ಭಿಕ ಚಿತ್ರ

ಪುತ್ತೂರು: ಕೊರಿಯರ್ ಮೂಲಕ ಬಂದ ಪಾರ್ಸೆಲ್‌ನ್ನು ನೀಡದೆ ಇರುವ ಬಗ್ಗೆ ಪ್ರಶ್ನಿಸಲು ತೆರಳಿದ  ಸಂದರ್ಭದಲ್ಲಿ ವೈದ್ಯೆಯೋರ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಘಟನೆ  ನಡೆದಿದೆ.

ಘಟನೆಯ ಕುರಿತು ಪುತ್ತೂರಿನ ವೈದ್ಯೆ ಚೇತನಾ ಎಂಬವರು ನೀಡಿದ್ದಾರೆ. ದೂರಿನಂತೆ ಸುಳ್ಯದ ಗುತ್ತಿಗಾರು ನಿವಾಸಿಯಾಗಿರುವ, ಬನ್ನೂರಿನಲ್ಲಿರುವ ‘ಡೆಲಿವರಿ ಕೊರಿಯರ್ ಸಂಸ್ಥೆ ಫ್ರಾಂಚೈಸಿ ಮಾಲಕ ರಾಜ ಮಾವಿನಕಟ್ಟೆ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರಿನ ವೈದ್ಯೆಯೊಬ್ಬರಿಗೆ ಅವರ ಸ್ನೇಹಿತರಿಂದ ಪಾರ್ಸೆಲ್ ಒಂದು ಬರುವುದಿತ್ತು. ಪಾರ್ಸೆಲ್‌ನ ಮೊತ್ತವನ್ನು ಮೊದಲೇ ಪಾವತಿಸಲಾಗಿತ್ತು. ಎಪ್ರಿಲ್ 19ರೊಳಗೆ ಆ ಪಾರ್ಸೆಲ್ ವಾರಸುದಾರರಾದ ವೈದ್ಯೆಯನ್ನು ತಲುಪಬೇಕಿತ್ತು. ಆದರೆ ತಲುಪದೇ ಇದ್ದಾಗ, ಆನ್‌ಲೈನ್‌ನಲ್ಲಿ ಪರಿಶೀಲಿಸಿದಾಗ ‘ಡೆಲಿವರ್ಡ್ ಟು ಕಸ್ಟಮರ್’ ಎಂದು ವೈದ್ಯೆಯವರ ಸಹಿಯನ್ನು ಹಾಕಿ ಅದಾಗಲೇ ಕೊರಿಯರ್ ಪಾರ್ಸೆಲ್‌ನ್ನು ಸ್ವೀಕರಿಸಿರುವ ವಿಚಾರ ತಿಳಿದು ಬಂದಿತ್ತು.

ಇದನ್ನೂ ಓದಿ :ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ಈ ಬಗ್ಗೆ ವಿಚಾರಿಸಲೆಂದು ವಾರಿಸುದಾರರಾದ ವೈದ್ಯರು ಎಪ್ರಿಲ್ 19ರಂದು ಬನ್ನೂರಿನಲ್ಲಿರುವ ಡೆಲಿವರಿ ಸಂಸ್ಥೆಯ ಫ್ರಾಂಚೈಸಿಗೆ ತೆರಳಿ ಪ್ರಶ್ನಿಸಿದ್ದರು. ಈ ಸಂದರ್ಭ ಫ್ರಾಂಚೈಸಿ ಮಾಲಕ ರಾಜ ಮಾವಿನಕಟ್ಟೆ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪಾರ್ಸೆಲ್‌ನ್ನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ವಾರಿಸುದಾರರು ದೂರು ನೀಡಿದ್ದರು. ದೂರು ಸ್ವೀಕರಿಸಿದ ಪುತ್ತೂರು ನಗರ ಠಾಣಾ ಪೊಲೀಸರು ರಾಜ ಮಾವಿನಕಟ್ಟೆ ವಿರುದ್ಧ ಐಪಿಸಿ ಸೆಕ್ಷನ್ 504 ಮತ್ತು 506ರನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.