ಕೋವಿಡ್ ವಾರ್ ರೂಂಗೆ ಸಚಿವರಾದ ಎಸ್.ಟಿ. ಸೋಮಶೇಖರ್, ಅಶೋಕ್ ದಿಡೀರ್ ಭೇಟಿ

ಬಿಬಿಎಂಪಿ ಸಿಬ್ಬಂದಿ ಕಾರ್ಯವೈಖರಿ ಪರಿವೀಕ್ಷಣೆ

Team Udayavani, May 9, 2021, 8:50 PM IST

ಕೋವಿಡ್ ವಾರ್ ರೂಂಗೆ ಸಚಿವರಾದ ಎಸ್.ಟಿ. ಸೋಮಶೇಖರ್, ಅಶೋಕ್ ದಿಡೀರ್ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳಗೊಳ್ಳುತ್ತಿರುವುದರ ಜೊತೆಗೆ ಬಿಬಿಎಂಪಿ ಕಾರ್ಯನಿರ್ವಹಣೆ ಬಗ್ಗೆ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ಕಂದಾಯ ಸಚಿವರಾದ ಆರ್.ಅಶೋಕ್ ಅವರು, ರಾಜರಾಜೇಶ್ವರಿ ನಗರ ವಲಯದ ಕೋವಿಡ್ ವಾರ್ ರೂಂಗೆ ದಿಡೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.

ಯಾವುದೇ ಕಾರಣಕ್ಕೂ ನಾಗರಿಕರಿಗೆ ಸಮಸ್ಯೆಯಾಗಕೂಡದು. ಅವರು ಸಹಾಯಕ್ಕಾಗಿ ಕರೆ ಮಾಡಿದಾಗ ಸಮಾಧಾನವಾಗಿ ಸ್ಪಂದಿಸಿ, ಬೆಡ್ ವ್ಯವಸ್ಥೆ ಬೇಕಿರುವವರಿಗೆ ತಕ್ಷಣ ಅವಕಾಶ ಮಾಡಿಕೊಡಿ ಎಂದು ಸಚಿವದ್ವಯರು ವಾರ್ ರೂಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಬೆಡ್ ಬುಕ್ಕಿಂಗ್ ದಂಧೆಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬೇಡಿ. ಅಗತ್ಯ ಇರುವವರಿಗೆ ಬೆಡ್ ಸಿಗುವಂತೆ ಮಾಡಿ, ಒಂದು ವೇಳೆ ನಿಮ್ಮನ್ನು ಈ ದಂಧೆಗಾಗಿ ಯಾರಾದರೂ ಸಂಪರ್ಕಿಸಿದರೆ ನಮ್ಮ ಗಮನಕ್ಕೆ ತನ್ನಿ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಆರ್.ಅಶೋಕ್ ಅವರುಗಳು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಇದನ್ನೂ ಓದಿ :250 ಯೂನಿಟ್ ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ ಗೆ ಚಾಲನೆ ನೀಡಿದ ಸಂಸದ ತೇಜಸ್ವೀ ಸೂರ್ಯ

ಹೋಂ ಐಸೋಲೇಶನ್ ನಲ್ಲಿದ್ದವರಿಗೆ ಮೆಡಿಕಲ್ ಕಿಟ್
ರಾಜರಾಜೇಶ್ವರಿ ನಗರ ವಲಯದ ವಲಯ ಆಯುಕ್ತರು ರೆಡ್ಡಿ ಶಂಕರ ಬಾಬು, ದಕ್ಷಿಣ ಉಪವಿಭಾಗಾಧಿಕಾರಿ ಶಿವಣ್ಣ ಸೇರಿ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವದ್ವಯರಾದ ಎಸ್.ಟಿ.ಸೋಮಶೇಖರ್ ಹಾಗೂ ಆರ್.ಅಶೋಕ್ ಅವರು, ಕೊರೋನಾ ಸೋಂಕು ದೃಢಪಟ್ಟು ಹೋಂ ಐಸೋಲೇಶನ್ ನಲ್ಲಿರುವ ರಾಜರಾಜೇಶ್ವರಿ ವಲಯ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯ ಎಲ್ಲರ ಮನೆಗಳಿಗೂ ಮೆಡಿಕಲ್ ಕಿಟ್ ಅನ್ನು ಕೊಡಬೇಕು. ಕೂಡಲೇ ಮೆಡಿಕಲ್ ಕಿಟ್ ತಯಾರಿಸಿ ತುರ್ತಾಗಿ ಕೊಡಲು ಸೂಚಿಸಿದರು.

ನೂತನ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ
ಚೆನ್ನೇನಹಳ್ಳಿಯಲ್ಲಿ ನೂತನ ಪ್ರಾರಂಭವಾಗಿರುವ ಜನಸೇವಾ ಕೇಂದ್ರದ ಕೋವಿಡ್ ಕೇರ್ ಸೆಂಟರ್ ಗೆ ಕಂದಾಯ ಸಚಿವರಾದ ಅಶೋಕ್ ಹಾಗೂ ಸಹಕಾರ ಸಚಿವರಾದ ಸೋಮಶೇಖರ್ ಅವರು ಭೇಟಿ ನೀಡಿ, ವ್ಯವಸ್ಥೆಯನ್ನು ಪರಿಶೀಲಿಸಿದರು. ಅಲ್ಲದೆ, ಸರ್ಕಾರದಿಂದ ಬೇಕಾದ ಎಲ್ಲ ಸೌಲಭ್ಯ ಹಾಗೂ ಸಹಕಾರವನ್ನು ಒದಗಿಸುವ ಭರವಸೆಯನ್ನೂ ಈ ಸಂದರ್ಭದಲ್ಲಿ ನೀಡಲಾಯಿತು. ಈ ವೇಳೆ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಇದ್ದರು.

ಚಿತಾಗಾರಕ್ಕೆ ಭೇಟಿ
ತಾವರೇಕೆರೆ ಚಿತಾಗಾರದಲ್ಲಿ ಶವಗಳ ಸಂಖ್ಯೆ ಹೆಚ್ಚಳಗೊಂಡು ಒತ್ತಡ ಆಗುತ್ತಿರವ ಕಾರಣ, ಬೆಂಗಳೂರು ಉತ್ತರ ತಾಲೂಕಿನ ಗಿಡೇನಹಳ್ಳಿ ಚಿತಾಗಾರಕ್ಕೆ ಸಚಿವರಾದ ಸೋಮಶೇಖರ್ ಹಾಗೂ ಅಶೋಕ್ ಅವರು ಭೇಟಿ ನೀಡಿ, ಹೆಚ್ಚಿನ ಜಾಗ, ಸೌಲಭ್ಯಗಳನ್ನು ಒದಗಿಸಲು ಸ್ಥಳ ವೀಕ್ಷಣೆ ಮಾಡಿದರು.

ತಲಾ 1 ಲಕ್ಷ ರೂ. ವೈಯುಕ್ತಿಕ ಸಹಾಯಧನ ವಿತರಣೆ

ಕೋವಿಡ್ ನಿಂದ ಮೃತಪಟ್ಟ ಯಶವಂತಪುರ ಮತಕ್ಷೇತ್ರದ ನಾಗರಿಕರಿಗೆ ಸಹಾಯಧನ ನೀಡುವ ಪ್ರಕ್ರಿಯೆಗೆ ಶನಿವಾರವಷ್ಟೇ ಚಾಲನೆ ನೀಡಿರುವ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು, ಭಾನುವಾರ ಕೆಂಗೇರಿ ಹೋಬಳಿ ರಾಮೋಹಳ್ಳಿ ಗ್ರಾಮ ಪಂಚಾಯಿತಿ ಮತ್ತು ತಾವರೆಕೆರೆ ಹೋಬಳಿ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ತಲಾ 1 ಲಕ್ಷ ರೂಪಾಯಿ ವೈಯಕ್ತಿಕ ಸಹಯಾಧನ ವಿತರಣೆ ಮಾಡಿದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.