ಚೀನದ‌ ಜೈವಿಕ ಸಮರದ ಹುನ್ನಾರ: ಮನುಕುಲಕ್ಕೇ ಮಾರಕ


Team Udayavani, May 10, 2021, 6:45 AM IST

ಚೀನದ‌ ಜೈವಿಕ ಸಮರದ ಹುನ್ನಾರ: ಮನುಕುಲಕ್ಕೇ ಮಾರಕ

2019ರ ಅಂತ್ಯದಲ್ಲಿ ಚೀನದ ವುಹಾನ್‌ ನಗರದಲ್ಲಿನ ಜನನಿಬಿಡ ಮಾಂಸ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಪತ್ತೆಯಾದ ಕೊರೊನಾ ವೈರಸ್‌ ವಾರಗಳ ಅಂತರದಲ್ಲಿ ಇಡೀ ಚೀನವನ್ನೇ ಆವರಿಸಿ ಅದರ ಕರಾಳ ಮುಖವನ್ನು ಪ್ರದರ್ಶಿಸಿತ್ತು. ಇದಾದ ಕೆಲವೇ ತಿಂಗಳುಗಳಲ್ಲಿ ವಿಶ್ವದೆಲ್ಲೆಡೆ ಪಸರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು. ಕೊರೊನಾ ವ್ಯಾಪಿಸಲಾರಂಭಿಸಿ ಒಂದೂವರೆ ವರ್ಷ ಕಳೆದಿದ್ದು, ಇದಿನ್ನೂ ಪೂರ್ಣ ವಾಗಿ ಹತೋಟಿಗೆ ಬಂದಿಲ್ಲ. ವೈರಸ್‌ ರೂಪಾಂತರಗೊಂಡು ಜನರನ್ನು ಬಾಧಿಸುತ್ತಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಇದರ ಹೊಡೆತದಿಂದ ಮೇಲೇಳಲು ಹರಸಾಹಸ ಪಡುತ್ತಿವೆ.

ಕೊರೊನಾ ವೈರಸ್‌ನ ಮೂಲ ಹುಡುಕಾಟದಲ್ಲಿ ಇಡೀ ವಿಶ್ವ ಸಮುದಾಯ ತೊಡಗಿಕೊಂಡಿದ್ದು ಇನ್ನೂ ತಾರ್ಕಿಕ ಅಂತ್ಯಕ್ಕೆ ಬರಲು ಸಾಧ್ಯ ವಾಗಿಲ್ಲ. ಆದರೆ ಆರಂಭದಿಂದಲೂ ರಕ್ಷಣ ಮತ್ತು ಆರೋಗ್ಯ ತಜ್ಞರು, ವಿಜ್ಞಾನಿಗಳು ಚೀನದತ್ತಲೇ ಬೆಟ್ಟು ಮಾಡುತ್ತ ಬಂದಿದ್ದರೂ ಚೀನ ಮಾತ್ರ ಈ ಆರೋಪವನ್ನು ಅಲ್ಲಗಳೆಯುತ್ತಲೇ ಬಂದಿದೆ. ಕೊರೊನಾ ವೈರಸ್‌ ಅನ್ನು ಚೀನ ಜೈವಿಕ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಮೂಲಕ ಇಡೀ ವಿಶ್ವ ಸಮುದಾಯದ ವಿರುದ್ಧ ಜೈವಿಕ ಸಮರಕ್ಕೆ ಮುಂದಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ತಜ್ಞರ ತಂಡ ಕೂಡ ವೈರಸ್‌ ಪತ್ತೆಯಾದ ವುಹಾನ್‌ಗೆ ಭೇಟಿ ನೀಡಿ ಪರಿಶೀಲಿಸಲು ತೆರಳಿದ ವೇಳೆ ಆರಂಭದಲ್ಲಿ ಮೊಂಡಾಟ ತೋರಿದ್ದ ಚೀನ ಕೊನೆಗೆ ಜಾಗತಿಕ ಸಮುದಾಯದ ಪ್ರಬಲ ಒತ್ತಡಕ್ಕೆ ಮಣಿದಿತ್ತು. ತಜ್ಞರ ತಂಡಕ್ಕೆ ವುಹಾನ್‌ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಲು ಅನುಮತಿ ನೀಡಿತ್ತಾದರೂ ತನ್ನ ಷಡ್ಯಂತ್ರ ಎಲ್ಲೂ ಬಹಿರಂಗಗೊಳ್ಳದಂತೆ ಎಚ್ಚರಿಕೆ ವಹಿಸುವಲ್ಲಿ ಯಶಸ್ವಿ ಯಾಗಿತ್ತು. ಆದರೆ ಈ ನಡೆಗಳು ಅನುಮಾನಗಳನ್ನು ಇನ್ನಷ್ಟು ಹೆಚ್ಚಿಸಿದ್ದವು. ಈಗ ಆಸ್ಟ್ರೇಲಿಯನ್‌ ಮ್ಯಾಗಜಿನ್‌ ಸಹಿತ ಕೆಲವು ವೆಬ್‌ಸೈಟ್‌ಗಳಲ್ಲಿ ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖೀಸಿ ಪ್ರಕಟವಾಗಿರುವ ವರದಿಗಳು ಕೊರೊನಾ ವೈರಸ್‌ನ ಸೃಷ್ಟಿಕರ್ತನೇ ಚೀನ ಎಂಬ ಬಗ್ಗೆ ಮತ್ತಷ್ಟು ಪುರಾವೆ ಒದಗಿಸಿಕೊಟ್ಟಿವೆ. ಈ ಷಡ್ಯಂತ್ರವನ್ನು ಆರು ವರ್ಷಗಳ ಹಿಂದೆಯೇ ಅಂದರೆ 2015ರಲ್ಲಿಯೇ ಚೀನ ರೂಪಿಸಿತ್ತು ಎಂಬ ಸ್ಫೋಟಕ ಮಾಹಿತಿ ಈಗ ಹೊರಬಿದ್ದಿದ್ದು ಚೀನದ ಕುತಂತ್ರಕ್ಕೆ ಕನ್ನಡಿ ಹಿಡಿದಿದೆ. ವೈರಸ್‌ ಅನ್ನು ಕೃತಕವಾಗಿ ಬದಲಿಸಿ ಸೋಂಕನ್ನು ಮನುಷ್ಯರಿಗೆ ಪಸರಿಸುವ ಮೂಲಕ ವಿಶ್ವವನ್ನು ವಿನಾಶಕ್ಕೆ ತಳ್ಳುವ ಇರಾದೆ ಚೀನದ್ದಾಗಿತ್ತು ಎಂಬುದು ಈಗ ಲಭಿಸಿರುವ ದಾಖಲೆಗಳಿಂದ ಸಾಬೀತಾ ಗಿದೆ. ವಿಶ್ವದ ಬಲಾಡ್ಯ ರಾಷ್ಟ್ರಗಳ ಮೇಲೆ ಈ ಜೈವಿಕ ಅಸ್ತ್ರ ಪ್ರಯೋಗಿಸಿ ಅವುಗಳನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಜರ್ಝ ರಿತಗೊಳಿಸಿ ಪಾರಮ್ಯ ಮೆರೆಯುವ ಹುನ್ನಾರ ಚೀನದ್ದಾಗಿದೆ ಎಂಬುದಂತೂ ಇದರಿಂದ ಸ್ಪಷ್ಟ. ಇನ್ನಾದರೂ ವಿಶ್ವಸಂಸ್ಥೆ ಗಂಭೀರವಾಗಿ ಪರಿಗಣಿಸಿ ಚೀನದ ಮುಖವಾಡವನ್ನು ಕಳಚುವ ಕಾರ್ಯಕ್ಕೆ ಮುಂದಾಗಬೇಕು. ಜಾಗತಿಕ ಶಾಂತಿಗೆ ಬೆದರಿಕೆ ಒಡ್ಡುವ ಮತ್ತು ಆ ಮೂಲಕ ಇಡೀ ಮನುಕುಲದ ಅಳಿವಿಗೆ ಮುಂದಾಗಿರುವ ಚೀನದ ಹುನ್ನಾರ ಬಯಲಿಗೆಳೆಯಲೇ ಬೇಕಿದೆ. ಈ ನಿಟ್ಟಿನಲ್ಲಿ ಇಡೀ ವಿಶ್ವ ಸಮು ದಾಯ ಚೀನದ ವಿರುದ್ಧ ಒಗ್ಗೂಡಿ ಹೋರಾಟ ನಡೆಸಿ ಅದನ್ನು ಏಕಾಂಗಿ ಯಾಗಿಸಬೇಕಿದೆ. ಕೊರೊನಾ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಿ ಜನತೆಯನ್ನು ಭಯಮುಕ್ತರಾಗಿಸಬೇಕಿದೆ ಮತ್ತು ಜೈವಿಕ ಸಮರ ದಂತಹ ಪ್ರವೃತ್ತಿಗೆ ಕಡಿವಾಣ ಹೇರುವ ದೃಢಸಂಕಲ್ಪ ಕೈಗೊಳ್ಳಬೇಕು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.