ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿ ಮಾದರಿಯಾದ ವಸಿಷ್ಠ ಸಿಂಹ
Team Udayavani, May 10, 2021, 8:29 AM IST
ಬೆಂಗಳೂರು : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸಾವಿರಾರು ಸೋಂಕಿತರು ನಿತ್ಯ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಎರಡನೇ ಅಲೆಯಿಂದ ಪಾರಾಗಲು ಜನರು ಇನ್ನಿಲ್ಲದಂತೆ ಪರದಾಡುತ್ತಿದ್ದಾರೆ.
ಇದೇ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ಪಡೆದ ಕೆಲವು ತಿಂಗಳು ರಕ್ತ ದಾನಮಾಡುವ ಹಾಗಿಲ್ಲ. ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತದ ಅಭಾವ ಎದುರಾಗುವ ಸಾಧ್ಯತೆ ಇದ್ದು, ರಕ್ತ ನೀಡುವ ಮೊಲದೇ ಮುನ್ನೆಚ್ಚರಿಕೆಯಾಗಿ ರಕ್ತದಾನ ಮಾಡಿ ಎಂದು ಹಲವಾರು ಮಂದಿ ಹೇಳುತ್ತಿದ್ದಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ ಕೂಡ ರಕ್ತ ದಾನ ಮಾಡಿದ್ದಾರೆ.
ಈ ಮೂಲಕವಾಗಿ ಯುವಕರಲ್ಲಿ ರಕ್ತದಾನ ಮಾಡುವಂತೆ ಜಾಗೃತಿ ಮೂಡಿಸಿದ್ದಾರೆ. ನಿನ್ನೆ ಮೇ 9 ರಂದು ಬೆಂಗಳೂರಿನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ ಮಾಡಿದ ನಟ ವಸಿಷ್ಠ ಸ್ವತಃ ರಕ್ತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಕೋವಿಡ್ ಲಸಿಕೆ ಪಡೆಯುವ ಮುನ್ನ ವಸಿಷ್ಠ ಸಿಂಹ ರಕ್ತ ದಾನ ಮಾಡುವ ಜೊತೆಗೆ, ಎಲ್ಲರಿಗೂ ರಕ್ತದಾನದ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bank Of Bhagyalakshmi: ಬ್ಯಾಂಕ್ನತ್ತ ದೀಕ್ಷಿತ್ ಚಿತ್ತ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
Sandalwood: ರಿಷಿ ಖುಷಿ!: ಅಕೌಂಟ್ಗೆ ಮತ್ತೊಂದು ಚಿತ್ರ ತ್ತೊ